ಅಚ್ಚೇದಿನ್‌ ಬಂದಿದ್ದು ಬಡವರಿಗಲ್ಲ, ಅಂಬಾನಿ, ಅದಾನಿ, ಚೋಕ್ಸಿ, ನೀರವ್‌ ಮೋದಿಗೆ ಮಾತ್ರ- ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

April 4, 2019
11:25 AM

ಬೆಂಗಳೂರು : 380 ರೂಪಾಯಿ ಇದ್ದ ಗ್ಯಾಸ್ ಬೆಲೆ ಈಗ ಒಂಬೈನೂರು  ಆಗಿದೆ. ಆದ್ದರಿಂದ ಬಡವರು, ಮಹಿಳೆಯರು, ಅಲ್ಪಸಂಖ್ಯಾತರಿಗೆ ಅಚ್ಚೇದಿನ್‌ ಬರಲಿಲ್ಲ.ಅಚ್ಚೇದಿನ್‌ ಬಂದಿದ್ದು ಅಂಬಾನಿ, ಅದಾನಿ, ಚೋಕ್ಸಿ, ನೀರವ್‌ ಮೋದಿಗೆ ಮಾತ್ರ ಎಂದು ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.

Advertisement
Advertisement

ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್.ಪಾಟೀಲ ಪರವಾಗಿ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು,’ ಬಿಜೆಪಿ ಎಂಪಿಗಳು ಏನೂ ಮಾಡಿಲ್ಲ. ನಮಗೆ ವೋಟು ಕೊಡಿ ಅಂತಾ ಕೇಳ್ತಿಲ್ಲ, ಮೋದಿಗೆ ವೋಟು ಕೊಡಿ ಅಂತಿದ್ದಾರೆ. ಜನರು ಈಗಾಗಲೆ ಭ್ರಮನಿರಸನ ಆಗಿದ್ದಾರೆ. ಜನರ ಖಾತೆಗೆ ಹದಿನೈದು ಲಕ್ಷ ಅಂದ್ರು, ಹದಿನೈದು ಪೈಸೆನೂ ಬರಲಿಲ್ಲ. ಅಂತಹದರಲ್ಲಿ  ನಿಮ್ಮ ಮುಖ ನೋಡಿ ವೋಟು ಹಾಕಬೇಕಾ ಮೋದಿಯವರೇ? ಎಂದು ಪ್ರಶ್ನಸಿದ್ದಾರೆ.ರಾಜ್ಯದಲ್ಲಿ ಬರಗಾಲ ಇದ್ದಾಗ ಮೋದಿಯವರನ್ನು ಭೇಟಿ ಮಾಡಿದ್ದೆ. ವಿಶೇಷ ಅನುದಾನ ಕೊಡಿ ಅಂತಾ ಕೇಳಿದ್ದೆ. ನರೇಂದ್ರ ಮೋದಿ ಒಂದೇ ಒಂದು ರೂಪಾಯಿ ಅನುದಾನ ಕೊಡಲಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಹವಾಮಾನ ವರದಿ | 31.05.2025 | ಅಲ್ಲಲ್ಲಿ ಮಳೆ | ಕರಾವಳಿ ಜಿಲ್ಲೆಯಲ್ಲಿ ಜೂನ್‌ . 4ರವರೆಗೆ ಮಳೆ ಸಾಧ್ಯತೆ | ಮುಂಗಾರು ಬಲಗೊಳ್ಳಲು ಕಾಲಾವಕಾಶ
May 31, 2025
1:37 PM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಹಲಸಿನ ಹಣ್ಣಿನ ಗುಳಿ ಅಪ್ಪ
May 31, 2025
8:00 AM
by: ದಿವ್ಯ ಮಹೇಶ್
ಜೂನ್‌ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೆಲ್ಲಾ ನಿಮ್ಮದೇ..!
May 31, 2025
6:33 AM
by: ದ ರೂರಲ್ ಮಿರರ್.ಕಾಂ
ಪ್ರಾದೇಶಿಕ ಒಪ್ಪಂದಕ್ಕೆ ಬಲಿಯಾಯಿತೇ ಕಾಳು ಮೆಣಸು..?
May 31, 2025
6:30 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group