ಅಚ್ಚೇದಿನ್‌ ಬಂದಿದ್ದು ಬಡವರಿಗಲ್ಲ, ಅಂಬಾನಿ, ಅದಾನಿ, ಚೋಕ್ಸಿ, ನೀರವ್‌ ಮೋದಿಗೆ ಮಾತ್ರ- ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

April 4, 2019
11:25 AM

ಬೆಂಗಳೂರು : 380 ರೂಪಾಯಿ ಇದ್ದ ಗ್ಯಾಸ್ ಬೆಲೆ ಈಗ ಒಂಬೈನೂರು  ಆಗಿದೆ. ಆದ್ದರಿಂದ ಬಡವರು, ಮಹಿಳೆಯರು, ಅಲ್ಪಸಂಖ್ಯಾತರಿಗೆ ಅಚ್ಚೇದಿನ್‌ ಬರಲಿಲ್ಲ.ಅಚ್ಚೇದಿನ್‌ ಬಂದಿದ್ದು ಅಂಬಾನಿ, ಅದಾನಿ, ಚೋಕ್ಸಿ, ನೀರವ್‌ ಮೋದಿಗೆ ಮಾತ್ರ ಎಂದು ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್.ಪಾಟೀಲ ಪರವಾಗಿ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು,’ ಬಿಜೆಪಿ ಎಂಪಿಗಳು ಏನೂ ಮಾಡಿಲ್ಲ. ನಮಗೆ ವೋಟು ಕೊಡಿ ಅಂತಾ ಕೇಳ್ತಿಲ್ಲ, ಮೋದಿಗೆ ವೋಟು ಕೊಡಿ ಅಂತಿದ್ದಾರೆ. ಜನರು ಈಗಾಗಲೆ ಭ್ರಮನಿರಸನ ಆಗಿದ್ದಾರೆ. ಜನರ ಖಾತೆಗೆ ಹದಿನೈದು ಲಕ್ಷ ಅಂದ್ರು, ಹದಿನೈದು ಪೈಸೆನೂ ಬರಲಿಲ್ಲ. ಅಂತಹದರಲ್ಲಿ  ನಿಮ್ಮ ಮುಖ ನೋಡಿ ವೋಟು ಹಾಕಬೇಕಾ ಮೋದಿಯವರೇ? ಎಂದು ಪ್ರಶ್ನಸಿದ್ದಾರೆ.ರಾಜ್ಯದಲ್ಲಿ ಬರಗಾಲ ಇದ್ದಾಗ ಮೋದಿಯವರನ್ನು ಭೇಟಿ ಮಾಡಿದ್ದೆ. ವಿಶೇಷ ಅನುದಾನ ಕೊಡಿ ಅಂತಾ ಕೇಳಿದ್ದೆ. ನರೇಂದ್ರ ಮೋದಿ ಒಂದೇ ಒಂದು ರೂಪಾಯಿ ಅನುದಾನ ಕೊಡಲಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್
June 8, 2026
9:11 AM
by: ದ ರೂರಲ್ ಮಿರರ್.ಕಾಂ
ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!
June 7, 2026
9:17 PM
by: ದ ರೂರಲ್ ಮಿರರ್.ಕಾಂ
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?
June 7, 2026
7:32 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
June 7, 2026
1:56 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror