ಅಜ್ಜಾವರ ಹಾಲು ಸೊಸೈಟಿಗೆ ಸಹಕಾರಿ ಸಂಘಗಳ ಉಪನಿಬಂಧಕರು ಭೇಟಿ

August 24, 2019
10:08 AM

ಅಜ್ಜಾವರ:ಅಜ್ಜಾವರ ಹಾಲು ಉತ್ಪಾದಕರ ಸಂಘಕ್ಕೆ ಸಹಕಾರಿ ಸಂಘಗಳ ಉಪನಿಬಂಧಕರು ಭೇಟಿ ನೀಡಿ ಕಡತಗಳನ್ನು ಪರಿಶೀಲನೆ ನಡೆಸಿದ್ದಾರೆ.

ಅಜ್ಜಾವರ ಹಾಲು ಉತ್ಪಾದಕರ ಸಹಕಾರಿ ಸಂಘದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸಹಕಾರಿ ಸಂಘಗಳ ಉಪನಿಬಂಧಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಅವಿಶ್ವಾಸ ಮಂಡನೆ ಸಹಿತ ಇತರ ವಿಚಾರಗಳ ಬಗ್ಗೆಯೂ ಮಾತುಕತೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದೇ ಸಂದರ್ಭ ಸಹಕಾರಿ ಸಂಘಗಳ ಉಪನಿಬಂಧಕರು ಸಂಘದ ಕಚೇರಿಯಲ್ಲಿ ನಿರ್ದೇಶಕರು ಮತ್ತು ಸದಸ್ಯರನ್ನು ಒಳಗೊಂಡ ಸಭೆ ನಡೆಸಿ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಮಾತನಾಡಿ, ಕಾನೂನು ಮೀರಿ ಯಾವುದೂ ಕೂಡಾ ನಡೆಯಲು ಸಾಧ್ಯವಿಲ್ಲ, ಇದಕ್ಕಾಗಿ ಒತ್ತಡ ತಂದರೂ ಆಗದು. ಕಾನೂನು ಚೌಕಟ್ಟು ಒಳಗಡೆ ಸಹಕಾರಿ ಸಂಘದ ಕೆಲಸಗಳು ನಡೆಯಬೇಕು, ಆಡಳಿತ ಮಂಡಳಿ, ಕೃಷಿಕರು, ಹೈನುಗಾರರ ನಡುವೆ ಸಮನ್ವಯತೆ ಬೇಕು ಎಂದು ಸೂಚಿಸಿದರು.

ಈ ಸಂದರ್ಭ ಸಂಘದ ಅಧ್ಯಕ್ಷ ರಾಹುಲ್ ಅಡ್ಪಂಗಾಯ, ಉಪಾಧ್ಯಕ್ಷ ದುರ್ಗೇಶ್ ಅಡ್ಪಾಂಗಾಯ, ಕಾರ್ಯದರ್ಶಿ ಚೈತ್ರ, ರವೀಶ್ ಮಾವಿನಪಳ್ಳ , ಬಾಲಚಂದ್ರ ಮುಡೂರು , ಶಾಂತಪ್ಪ , ಲೀಲಾವತಿ ,ನಾರಾಯಣ, ಪೂರ್ಣಿಮ ,ಭಾಗೀರಥಿ , ಅಬ್ಬಾಸ್ , ಗ್ರಾಮ ಪಂಚಾಯತ್ ಸದಸ್ಯರಾದ ಕರುಣಾಕರ ಅಡ್ಪಂಗಾಯ , ಗಣೇಶ್ , ಮಾಜಿ ಸದಸ್ಯರಾದ ಚಂದ್ರಶೇಖರ , ಮತ್ತಿತರು ಉಪಸ್ಥಿತರಿದ್ದರು ಮತ್ತು ಸಂಘದ ಸರ್ವಸದಸ್ಯರು ಹಾಜರಿದ್ದರು. ಸಹಕಾರಿ ಸಂಘಗಳ ಇಲಾಖೆಯಿಂದ ಮಂಜುನಾಧ್  ಮತ್ತು ತ್ರೀವೇಣಿ  ಆಗಮಿಸಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror