ಅಡಿಕೆ ಉಳಿಸಲು ಯತ್ನಿಸುತ್ತಿವೆ ಸಹಕಾರಿ ಸಂಘಗಳು…..

May 10, 2019
1:00 PM

ಸುಳ್ಯ: ಅಡಿಕೆ ಉಳಿಸಲು ಸಹಕಾರಿ ಸಂಘಗಳು ಈಗ ಪ್ರಯತ್ನ ಮಾಡುತ್ತಿವೆ. ಈಗ ಸಹಕಾರಿ ಸಂಘಗಳ ಪಾತ್ರವೂ ದೊಡ್ಡದಿದೆ. ಅದೇನು ?.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಹಕಾರಿ ಸಂಘಗಳು ಉಳಿದಿರುವುದು  ಹಾಗೂ ಬೆಳೆಯುತ್ತಿರುವುದು  ಅಡಿಕೆ ಬೆಳೆಗಾರರಿಂದ. ಅಡಿಕೆ ಕೃಷಿಕರಿಂದ. ಕೃಷಿಕರು  ಸಾಲ ಪಡೆಯುವುದು  ಹಾಗೂ ಸಾಲ ಮರುಪಾವತಿ ಮಾಡುವುದು  ಅಡಿಕೆಯನ್ನು  ನಂಬಿಯೇ. ಹಾಗಾಗಿ ಇಂದು ಅಡಿಕೆ ಉಳಿದರೆ ಮಾತ್ರವೇ ಸಹಕಾರಿ ಸಂಘಗಳು ಉಳಿದೀತು. ಸಹಕಾರಿ ಸಂಘಗಳು ಬೆಳೆದರೆ ಮಾತ್ರವೇ ಜಿಲ್ಲೆಯ ಆರ್ಥಿಕ ಶಕ್ತಿ ಹೆಚ್ಚೀತು. ಇದಕ್ಕಾಗಿಯೇ ಇಂದು ಸಹಕಾರಿ ಸಂಘಗಳು ಅಡಿಕೆ ಬೆಳೆಗಾರರ ಪ್ರಮುಖ ಸಮಸ್ಯೆಯಾದ ಔಷಧಿ ಸಿಂಪಡಣೆ, ಅಡಿಕೆ ಕೊಯ್ಲು ಮಾಡಲು ಸ್ವ ಉದ್ಯೋಗ, ಕೌಶಲ ಪಡೆಯತ್ತ ಮನಸ್ಸು ಮಾಡಿದೆ. ಅದರ ಮೊದಲ ಭಾಗ ಆರಂಭವಾಗಿದೆ. ಸುಳ್ಯ ತಾಲೂಕಿನ ಪಂಜದಲ್ಲಿ 3 ಸಹಕಾರಿ ಸಂಘಗಳು ಜೊತೆಯಾಗಿ ಅಡಿಕೆ ಮರ ಏರುವ ತರಬೇತಿ ಶಿಬಿರ ಆಯೋಜನೆ ಮಾಡಿದ್ದಾರೆ. 5 ದಿನಗಳ ಶಿಬಿರ ನಡೆದು ಶುಕ್ರವಾರ ಸಮಾರೋಪಗೊಳ್ಳುತ್ತಿದೆ. ಮುಂದೆ ಜಿಲ್ಲೆಯ ಎಲ್ಲಾ ಸಹಕಾರಿ ಸಂಘಗಳಿಗೂ ಇದು ಪ್ರೇರಣೆಯಾಗಬೇಕು, ಮಾದರಿಯಾಗಬೇಕು. ಪ್ರತೀ ಗ್ರಾಮಗಳಲ್ಲಿ ಇಂತಹ ಶಿಬಿರಗಳು ನಡೆದರೆ ಮಾತ್ರವೇ ಅಡಿಕೆ ಬೆಳೆಗಾರರಿಗೆ, ಸಹಕಾರಿ ಸಂಘಗಳಿಗೆ ಉಸಿರು ತುಂಬಲು ಸಾಧ್ಯ.

 

( ತರಬೇತಿಯಲ್ಲಿ ಇರುವ ಶಿಬಿರಾರ್ಥಿಗಳು )

 

 

(ಸೆಂಟರ್ ಪ್ಯಾಡ್ ತಯಾರಿ ಹೀಗೆ )

 

ಪಂಜದಲ್ಲಿ  ನಡೆದ ಶಿಬಿರವು ಅತ್ಯಂತ ಯಶಸ್ವಿಯಾಗಿ ನಡೆದಿದೆ. 32 ಮಂದಿ ತರಬೇತಿ ಪಡೆದಿದ್ದಾರೆ. ತರಬೇತು ಪಡೆದ ಅಟೋ ಚಾಲಕ ಜಯರಾಮ ಅವರು ಹೇಳುವಂತೆ, “ಮುಂದೆ ಭವಿಷ್ಯ ಇರುವುದು  ಇಂತಹ ಉದ್ಯೋಗದಲ್ಲಿ. ಅಟೋ ಓಡಿಸಲು ಪೈಪೋಟಿ ಇದೆ. ಹೀಗಾಗಿ ದಿನಕ್ಕೆ ಕನಿಷ್ಠ ಆದಾಯ ಬರುವ ದಿನ ಇದೆ. ಆದರೆ ಅಡಿಕೆ ಮರ ಏರುವುದಕ್ಕೆ ತರಬೇತು ಪಡೆದ ಬಳಿಕ ಧೈರ್ಯ ಬಂದಿದೆ. ಈ ಉದ್ಯೋಗಕ್ಕೂ ಗೌರವ ಇದೆ” ಎಂದು ಹೇಳುತ್ತಾರೆ.

“ಸಹಕಾರಿ ಸಂಘಗಳು ಇಂತಹ ಸಂದರ್ಭದಲ್ಲಿ ಅಡಿಕೆ ಬೆಳೆಗಾರರ ರಕ್ಷಣೆ ಬಾರದೇ ಇದ್ದರೆ ಸಹಕಾರಿ ಸಂಘಗಳಿಗೂ ಆರ್ಥಿಕ ವ್ಯವಹಾರ ನಿರ್ವಹಣೆ ಮಾಡಲು ಕಷ್ಟವಿದೆ. ಹೀಗಾಗಿ ಇದು ಸೂಕ್ತ ಸಮಯವಾಗಿದ್ದು ತರಬೇತಿ ನೀಡುವ ಮೂಲಕ ಕನಿಷ್ಠ ಅವರ ಮನೆಯಲ್ಲಾದರೂ ಅಡಿಕೆ ಕೊಯಿಲು, ಔಷಧಿ ಸಿಂಪಡಣೆ ಮಾಡಬಹುದಾಗಿದೆ” ಎಂದು ಹೇಳುತ್ತಾರೆ ಪಂಜ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror