ಅಡ್ಡಮತದಾನ ಪ್ರಕರಣ : “ಆಟಿಯಲ್ಲಿ” ಕ್ರಮವಾಗುತ್ತಾ ?

July 18, 2019
9:00 AM

ಸುಳ್ಯ: ಡಿ ಸಿ ಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಸುಳ್ಯದಲ್ಲಿ ನಡೆದ ಅಡ್ಡಮತದಾನ  ಬಿಜೆಪಿ ಹಾಗೂ ಸಹಕಾರ ಭಾರತಿ, ಸಂಘಪರಿವಾರಕ್ಕೆ ಬಾರೀ ತಲೆನೋವು ತಂದಿದೆ. ಸುಳ್ಯದಂತಹ ಪ್ರದೇಶದಲ್ಲಿ ಅಡ್ಡಮತದಾನ ನಡೆದಿರುವುದು  ಪಕ್ಷಕ್ಕೆ ಹಾಗೂ ಸಂಘ ಪರಿವಾರಕ್ಕೆ ಮುಜುಗರ ತಂದಿತ್ತು. ಹೀಗಾಗಿ ಶಿಸ್ತು ಕ್ರಮ ಆಗಲೇಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಹಲವು ಬಾರಿ ಈ ಬಗ್ಗೆ ಪ್ರಯತ್ನ ನಡೆದರೂ ಆಗಿರಲಿಲ್ಲ. ಇದೀಗ ಆಟಿ ತಿಂಗಳಲ್ಲಿ ಈ ಪ್ರಕ್ರಿಯೆ ನಡೆಯುತ್ತಾ ? ಎಂಬುದನ್ನು ಬಿಜೆಪಿ ಕಾರ್ಯಕರ್ತರು ಪ್ರಶ್ನೆ ಮಾಡುತ್ತಾರೆ.

Advertisement
Advertisement

ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಮತದಾನ ಮಾಡಿರುವ ಸಹಕಾರಿ ಸಂಘದ ನಿರ್ದೇಶಕರು ಹಾಗೂ ಅಧ್ಯಕ್ಷರು ಸೇರಿದಂತೆ ಎಲ್ಲಾ 17 ಮಂದಿ ರಾಜೀನಾಮೆ ನೀಡಬೇಕು ಎಂಬ ಸೂಚನೆ ಬಿಜೆಪಿ, ಸಂಘಪರಿವಾರ  ನೀಡಿದರೂ ಜಾರಿಯಾಗಿಲ್ಲ. ಯಾರೊಬ್ಬರೂ ರಾಜೀನಾಮೆ ನೀಡಿಲ್ಲ. ಇದೀಗ ಆಟಿ ತಿಂಗಳಲ್ಲಿ  ಈ ಪ್ರಕ್ರಿಯೆ ನಡೆಯುತ್ತಾ ? ಎಂಬ ಮತ್ತೊಂದು ಪ್ರಶ್ನೆ ಎದ್ದಿದೆ. ಹಲವು ಬಾರಿ ಮುಂದೂಡಿದ್ದ ಶಿಸ್ತು ಕ್ರಮ ಈ ಬಾರಿ ಆಗುತ್ತಾ ಎಂಬ ಪ್ರಶ್ನೆಗಳು ಕಾರ್ಯಕರ್ತರು ಕೇಳುತ್ತಾರೆ. ರಾಜೀನಾಮೆ ನೀಡದೇ ಇರುವವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗುತ್ತದೆ ಎಂದು ಹೇಳಿದರೂ ಸೂಚನೆ ಜಾರಿಯಾಗಿಲ್ಲ.ಇಲ್ಲಿ 17 ಮಂದಿಯಲ್ಲಿ ಪಕ್ಷದ ಅಭ್ಯರ್ಥಿಗೆ ಮತ ಚಲಾವಣೆ ಮಾಡಿದವರಿಗೂ ಅಡ್ಡಮತದಾನ ಮಾಡಿದವರಿಗೂ ಒಂದೇ    ಮಾನದಂಡವೇ ಅಥವಾ ಬೇರೆ ಕ್ರಮಗಳು ಇವೆಯೇ ಎಂದೂ ಕಾರ್ಯಕರ್ತರೊಳಗೆ ಈ ಹಿಂದೆ ಚರ್ಚೆಯಾಗಿತ್ತು. ಇದೀಗ ಮತ್ತೆ ಅಡ್ಡಮತದಾನ ಪ್ರಕ್ರಿಯೆ ಚರ್ಚೆಯಾಗುತ್ತಿದೆ.

ಇದಕ್ಕೂ ಮುನ್ನ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಮತದಾನ ಮಾಡಿದ  ಎರಡು ಮಂದಿಯನ್ನು ಬಿಜೆಪಿಯು ಪಕ್ಷದ ಎಲ್ಲ ಹುದ್ದೆಗಳಿಂದ ಕೈ ಬಿಡಲಾಗಿದೆ ಎಂದು ಪ್ರಕಟಣೆ ನೀಡಲಾಗಿತ್ತು, ಆದರೆ ನಾವು ಬಿಜೆಪಿಯ ಯಾವುದೇ ಹುದ್ದೆಯಲ್ಲಿ ಇಲ್ಲ ಎನ್ನುವ ಮೂಲಕ ಮತ್ತೊಂದು ತಿರುವನ್ನು  ನೀಡಿದ್ದರು.

ಇದೀಗ ಅಡ್ಡ ಮತದಾನ ಮಾಡಿದ ಹಾಗೂ ಪಕ್ಷದ ಅಭ್ಯರ್ಥಿಗೆ ಮತದಾನ ಮಾಡಿದ ಎಲ್ಲರನ್ನೂ ಬಿಜೆಪಿಯು, ಸಂಘಪರಿವಾರವು  ಪಕ್ಷದಿಂದ, ಸಂಘಟನೆಯಿಂದ ಉಚ್ಛಾಟನೆ  ಯಾವಾಗ ಮಾಡುತ್ತದೆ, ಏನು ಕ್ರಮವಾಗುತ್ತದೆ ಎಂಬುದು ಕುತೂಹಲ ಹಾಗೂ ಪ್ರಶ್ನೆಯಾಗಿಯೇ ಉಳಿದಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ
January 30, 2026
8:10 AM
by: ದ ರೂರಲ್ ಮಿರರ್.ಕಾಂ
“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ
January 30, 2026
8:05 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ
January 30, 2026
7:57 AM
by: ಮಿರರ್‌ ಡೆಸ್ಕ್
ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
January 30, 2026
7:27 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror