ಅನ್ ಲಾಕ್-2.0 | ಗರೀಬ್ ಕಲ್ಯಾಣ್ ಯೋಜನೆ ಮುಂದಿನ 5 ತಿಂಗಳವರೆಗೆ ವಿಸ್ತರಣೆ | ಲಾಕ್ಡೌನ್​ ಸಡಿಲಿಕೆ ವೇಳೆ ನಿರ್ಲಕ್ಷ್ಯ ಬೇಡ | ಪ್ರಧಾನಿ ನರೇಂದ್ರ ಮೋದಿ ಕರೆ

June 30, 2020
5:34 PM

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹರಡುವುದು ತಡೆಗೆ ವಿವಿಧ ಕ್ರಮ ಕೈಗೊಳ್ಳಲಾಗುತ್ತಿದೆ. ಇದೀಗ ವಿವಿಧ ಕ್ರಮಗಳ ನಡುವೆ ಪ್ರಧಾನಮಂತ್ರಿ ನರೇಂದ್ರ ಮೋದಿ  ಅವರು ಬಡವರು ಹಸಿವಿನಿಂದ ಬಳಲಬಾರದು ಎಂಬ ಕಾರಣದಿಂದ  ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಮುಂದಿನ 5 ತಿಂಗಳವರೆಗೂ ವಿಸ್ತರಣೆ ಮಾಡಲಾಗುತ್ತದೆ ಎಂದು ಪ್ರಧಾನಿ ಘೋಷಿಸಿದ್ದಾರೆ.

ಮಂಗಳವಾರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,  ಕೆಲವು ತಿಂಗಳುಗಳಿಂದ ದೇಶದಲ್ಲಿ ಬಡವರು ಮತ್ತು ಕೂಲಿ ಕಾರ್ಮಿಕರು ಹಾಗೂ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಕೇಂದ್ರ ಸರ್ಕಾರದಿಂದ ಹಣವನ್ನು ಜಮೆ ಮಾಡಲಾಗಿದೆ. ಇದೀಗ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ರೋಜಗಾರ್ ಯೋಜನೆ ಅಡಿಯಲ್ಲಿ ದೇಶದ 80 ಕೋಟಿ ಬಡವರಿಗೆ ಪ್ರತಿ ತಿಂಗಳು 5 ಕೆಜಿ ಅಕ್ಕಿ ಮತ್ತು ಗೋಧಿ ಹಾಗೂ 1 ಕೆಜಿ ಬೇಳೆಯನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತದೆ   ಎಂದರು.

ಜೂನ್​ 1 ರಿಂದ ದೇಶದಲ್ಲಿ  ಲಾಕ್ಡೌನ್ ಸಡಿಲಿಕೆ ಮಾಡಲಾಗಿದೆ.  ಅನ್​ಲಾಕ್​.1 ರಲ್ಲಿ ಹಂತಹಂತವಾಗಿ ಲಾಕ್​ಡೌನ್​ ಸಡಿಲಿಕೆ ಮಾಡಿಕೊಂಡು ಬರಲಾಯಿತು. ಆದರೆ, ಈ ವೇಳೆ ಜನರು ಹೆಚ್ಚು ನಿರ್ಲಕ್ಷತನ ತೋರಿದರು. ಸಾಮಾಜಿಕ ಅಂತರ ಮರೆತರು. ಇದಕ್ಕೂ ಮುನ್ನ ನಾವು ಜನರಿಗೆ ಮಾಸ್ಕ್​ ಧರಿಸುವಂತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುಂತೆ ಹಾಗೂ ದಿನದಲ್ಲಿ ಹಲವು ಬಾರಿ 20 ಸೆಕೆಂಡ್ ಕೈ ತೊಳೆದುಕೊಳ್ಳುವಂತೆ ಮುನ್ನೆಚ್ಚರಿಕೆ ನೀಡಿದ್ದೆವು. ಆದರೆ, ಜನರು ಇವುಗಳನ್ನು ಸರಿಯಾಗಿ ಪಾಲನೆ ಮಾಡಲೇ ಇಲ್ಲ ಎಂದು ಪ್ರಧಾನಿಗಳು ವಿಷಾದ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಇನ್ನಷ್ಟು ಜಾಗ್ರತೆ ತುಂಬಾ ಅವಶ್ಯಕವಾಗಿದೆ. ಕಂಟೈನ್ಮೆಂಟ್​ ಝೋನ್​ಗಳಲ್ಲಿ ಹೆಚ್ಚಿನ ಜಾಗ್ರತೆ ವಹಿಸಿ ಎಂದು ಕರೆ ನೀಡಿದರು.ದೇಶದಲ್ಲಿ ಮತ್ತೆ ಲಾಕ್​ಡೌನ್​ ಮುಂದುವರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ  ಪ್ರಧಾನಿಗಳು ಆರ್ಥಿಕ ಚಟುವಟಿಕೆಗಳನ್ನು ಮುಂದುವರಿಸುವುದಾಗಿ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ
July 13, 2026
10:46 PM
by: ದ ರೂರಲ್ ಮಿರರ್.ಕಾಂ
ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
July 12, 2026
9:03 PM
by: ದ ರೂರಲ್ ಮಿರರ್.ಕಾಂ
ಚೀನಾಕ್ಕೆ ಹಲಸಿನ ಹಣ್ಣು ರಫ್ತು: ಬಾಂಗ್ಲಾದೇಶದ ವಿದೇಶಿ ವಿನಿಮಯ ಆದಾಯ ಹೆಚ್ಚುವ ನಿರೀಕ್ಷೆ
July 11, 2026
6:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror