ಅಯ್ಯನಕಟ್ಟೆ ಜಾತ್ರೆಗೆ ವೈಭವದ ಚಾಲನೆ

January 29, 2020
5:54 AM

ಸುಳ್ಯ: ಹಲವು ದಶಕಗಳ ಬಳಿಕ ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಜಾತ್ರೆಗೆ ಮತ್ತೆ ವೈಭವದ ಚಾಲನೆ ನೀಡಲಾಗಿದೆ. ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಪನ್ನಗೊಂಡ ಬಳಿಕ ಮಂಗಳವಾರ ಜಾತ್ರೋತ್ಸವ ಆರಂಭಗೊಂಡಿತು.

ಗತ ವೈಭವವನ್ನು ನೆನೆಪಿಸಿ ಮತ್ತೆ ಆರಂಭಗೊಂಡ ಜಾತ್ರೋತ್ಸವಕ್ಕೆ ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಮಂದಿ ಆಗಮಿಸಿದ್ದರು. ಮೂರು ದಿನಗಳ ಕಾಲ ಅಯ್ಯನಕಟ್ಟೆ ಜಾತ್ರೋತ್ಸವ ನಡೆಯಲಿದೆ.

ಜ. 28ರಂದು ಬೆಳಗಿನ ಜಾವ ಐದಕ್ಕೆ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಸಪರಿವಾರ ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು ಬೆಳಿಗ್ಗೆ ಏಳಕ್ಕೆ ಕಲ್ಲಮಾಡದಲ್ಲಿ ಉಳ್ಳಾಕುಲು ಶ್ರೀಮುಡಿ ದೈವಗಳ ನೇಮ ನಡೆಯಿತು‌.

 

ಜ.29 ರಂದು ಬೆಳಗ್ಗೆ 7.30ಕ್ಕೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ, ಬೆಳಗ್ಗೆ 8.00ಕ್ಕೆ ಕಳಂಜ ಗುತ್ತಿನಿಂದ ಧೂಮಾವತಿ ದೈವದ ಭಂಡಾರ, ಬೆಳಗ್ಗೆ 8.30ಕ್ಕೆ ಬಾಳಿಲ ಮೂರುಕಲ್ಲಡ್ಕ ದೈವಸ್ಥಾನದಿಂದ ಕೊಡಮಣಿತ್ತಾಯ ದೈವದ ಭಂಡಾರ ಹೊರಡಲಿದೆ ಬೆಳಗ್ಗೆ 10ಕ್ಕೆ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ 2ರಿಂದ ಕಲ್ಲಮಾಡದ ಬಳಿ ಶಿರಾಡಿ, ಧೂಮಾವತಿ ಹಾಗೂ ಕೊಡಮಣಿತ್ತಾಯ ದೈವಗಳ ನೇಮ ನಡೆಯಲಿದೆ. ಜ. 30ರಂದು ಬೆಳಗ್ಗೆ 10 ಗಂಟೆಗೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ ಹೊರಟು ಅಪರಾಹ್ನ 2.30ಕ್ಕೆ ಕಲ್ಲಮಾಡದ ಬಳಿ ಶಿರಾಡಿ ದೈವದ ದೊಂಪದ ಬಲಿ ನೇಮೋತ್ಸವ, ಸಂಜೆ ಐದಕ್ಕೆ ಕಲ್ಲಮಾಡದಿಂದ ತಂಬಿನಮಕ್ಕಿವರೆಗೆ ಮಾರಿ ಹೊರಡಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಧರ್ಮಸ್ಥಳದಲ್ಲಿ ಭಕ್ತಸಾಗರ – ರಸ್ತೆಗಳಲ್ಲಿ ವಾಹನ ದಟ್ಟಣೆ
June 21, 2026
2:52 PM
by: ದ ರೂರಲ್ ಮಿರರ್.ಕಾಂ
“ಅನ್ನವೇ ಪರಮಾತ್ಮ” ಸಂದೇಶದೊಂದಿಗೆ ಗೋಕರ್ಣದಲ್ಲಿ ಈ ಬಾರಿ ರಾಘವೇಶ್ವರ ಶ್ರೀಗಳಿಂದ ‘ಅನ್ನಬ್ರಹ್ಮ ಚಾತುರ್ಮಾಸ್ಯ’
June 20, 2026
7:10 AM
by: ದ ರೂರಲ್ ಮಿರರ್.ಕಾಂ
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?
June 7, 2026
7:32 PM
by: ಮಿರರ್‌ ಡೆಸ್ಕ್
ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!
April 15, 2026
8:02 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror