ಅರಂತೋಡಿನಲ್ಲಿ ಫೆ.19 ಮತ್ತು 20ರಂದು ದ್ಸಿಕ್ರ್ ಸ್ವಲಾತ್ ಕಾರ್ಯಕ್ರಮ

February 13, 2020
5:09 PM

ಸುಳ್ಯ: ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ತಿಂಗಳಿಗೊಮ್ಮೆ ಶೇಕ್ ಮುಹಿಯ್ಯದ್ದೀನ್ ಜಿಸ್ತಿ ಅಜೀರ್ ಖ್ವಾಜಾ ರವರ ಹೆಸರಿನಲ್ಲಿ ಆಚರಿಸಿಕೊಂಡು ಬರುತ್ತಿರುವ ದ್ಸಿಕ್ರ್ ಸ್ವಲಾತ್ ಮಜ್ಲಿಸ್ ಕಾರ್ಯಕ್ರಮ ಹಾಗೂ ಏಕದಿನ ಮತಪ್ರಭಾಷಣ ಕಾರ್ಯಕ್ರಮವು ಫೆ.19ಮತ್ತು ಫೆ.20ರಂದು ಅರಂತೋಡು ಮಸೀದಿ ವಠಾರದಲ್ಲಿ ನಡೆಯಲಿದೆ.

Advertisement
Advertisement
Advertisement
Advertisement

ಫೆ.19ರಂದು ರಾತ್ರಿ 7 ಗಂಟೆಗೆ ಕಲ್ಲೆಗ ಜುಮ್ಮಾಮಸೀದಿ ಖತೀಬರಾದ ಬಹು ಉಸ್ತಾದ್ ಅಬೂಬಕ್ಕರ್ ಸಿದ್ದೀಕ್ ಜಲಾಲಿಯವರಿಂದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಫೆ.20 ರಂದು ಮಗ್ರಿಬ್ ನಂತರ ನಡೆಯುವ ಸ್ವಲಾತ್ ಮಜ್ಲಿಸ್ ಕಾರ್ಯಕ್ರಮಕ್ಕೆ ಬಹು ಶೈಖುನಾ ನಾಲಾಂಗೇರಿ ಉಸ್ತಾದ್ ಕಣ್ಣೂರು ಕೇರಳರವರ ನೇತೃತ್ವದಲ್ಲಿ ನಡೆಯಲಿದ್ದು, ಬಹು ಡಾ ಅಹ್ಮದ್ ಕಬೀರ್ ಬಾಖವಿ ಅಲ್ ಬಾನಿ ಕೇರಳ ಇವರಿಂದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಖತೀಬರಾದ ಬಹು ಅಲ್ ಹಾಜ್ ಇಸ್ ಹಾಕ್ ಬಾಖವಿ ವಹಿಸಲಿದ್ದಾರೆ.

Advertisement

ಮುಖ್ಯ ಅತಿಥಿಯಾಗಿ ಪೆರಾಜೆ ಜುಮ್ಮಾ ಮಸೀದಿ ಖತೀಬರಾದ ಬಹು ಅಬೂಬಕ್ಕರ್ ಸಖಾಫಿ, ಪೇರಡ್ಕ ಜುಮ್ಮಾ ಮಸೀದಿ ಖತೀಬರಾದ ಅಲ್ಹಾಜ್ ಅಶ್ರಫ್ ಫೈಝಿ, ಕಲ್ಲುಗಂಡಿ ಜುಮ್ಮಾ ಮಸೀದಿ ಖತೀಬರಾದ ಬಹು ಅಬ್ದುಲ್ಅಝೀಝ್ ಬಾಖವಿ, ಸಂಪಾಜೆ ಜುಮ್ಮಾಮಸೀದಿ ಖತೀಬರಾದ ಬಹು ಅಲ್ ಜಮಾಲುದ್ದೀನ್ ಅಮಾನಿ, ನವಾಜ್ ದಾರಿಮಿ, ಬಶೀರ್ ಮದನಿ, ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಅಶ್ರಫ್ ಗುಂಡಿ, ತೆಕ್ಕಿಲ್ ಪ್ರತಿಷ್ಠಾನ ಅಧ್ಯಕ್ಷ ಟಿ.ಎಮ್ .ಶಹೀದ್, ಅರಂತೋಡು ಜಮಾ ಅತ್ ಉಪಾಧ್ಯಕ್ಷ ಹಾಜಿ ಕೆ.ಎಮ್ .ಮಹಮ್ಮದ್ , ದ್ಸಿಕ್ರ್ ಸ್ವಲಾತ್ ಸಮಿತಿ ಉಪಾಧ್ಯಕ್ಷ ಕೆ.ಎಮ್ ಅಬೂಬಕ್ಕರ್ , ಜಮಾ ಅತ್ ಕಾರ್ಯದರ್ಶಿ ಕೆ.ಎಮ್ .ಮೂಸಾನ್, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್, ಎಸ್ ಕೆ ಎಸ್ಎಸ್ ಎಫ್ ಅರಂತೋಡು ಶಾಖೆಯ ಅಧ್ಯಕ್ಷ ರಾದ ತಾಜುದ್ದೀನ್ ಎಸ್ ಅರಂತೋಡು,ಯುವ ಉದ್ಯಮಿ ಯು.ಎ.ಇ.ಸೈಫುದ್ದೀನ್ ಪಠೇಲ್ ಸೇರಿದಂತೆ ಉಲಮಾ ಉಮರಾ ನೇತಾರರು ಭಾಗವಹಿಸಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜ.26 | ಸಾರಡ್ಕದಲ್ಲಿ ಕೃಷಿ ಹಬ್ಬ | ವಿವಿಧ ಗೋಷ್ಠಿಗಳು |
January 25, 2025
5:01 PM
by: ದ ರೂರಲ್ ಮಿರರ್.ಕಾಂ
ಮಂಗಳೂರು | ಕದ್ರಿ ಉದ್ಯಾನದಲ್ಲಿ ಜ.23 ರಿಂದ  ಫಲಪುಷ್ಪ ಪ್ರದರ್ಶನ | 20 ಸಾವಿರಕ್ಕೂ ಅಧಿಕ ಹೂವಿನ ಗಿಡಗಳ ಪ್ರದರ್ಶನ |
January 11, 2025
7:18 AM
by: The Rural Mirror ಸುದ್ದಿಜಾಲ
ಡಿ. 29 | ಕುಂಬಳೆಯಲ್ಲಿ ಕಲಾವಿದ ಕುಂಬಳೆ ಶ್ರೀಧರ ರಾವ್ ಸ್ಮೃತಿ | ‘ಕಲಾ ಶ್ರೀಧರ’ ಕೃತಿ ಅನಾವರಣ |
December 26, 2024
11:28 AM
by: ದ ರೂರಲ್ ಮಿರರ್.ಕಾಂ
ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |
October 23, 2024
8:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror