ಅರಂತೋಡಿನಲ್ಲಿ ಹಜ್ಜ್ ಯಾತ್ರೆ ಗೆ ತೆರಳುವವರಿಗೆ ಬೀಳ್ಕೊಡುಗೆ

July 12, 2019
6:21 PM

ಅರಂತೋಡು :ಅರಂತೋಡು ಬದ್ರಿಯಾ ಜುಮ್ಮಾಮಸೀದಿ ವತಿಯಿಂದ ಹಜ್ ಯಾತ್ರೆ ಗೆ ತೆರಳಲಿರುವ ಅರಂತೋಡು ಮಸೀದಿಯ ಖತೀಬರಾದ ಇಸಾಕ್ ಬಾಖವಿ, ಪೇರಡ್ಕ ಮಸೀದಿ ಖತೀಬರಾದ ಅಶ್ರಫ್ ಫೈಝಿ ಸುಕಂದಕಟ್ಟೆ,ಪೇರಡ್ಕ ಮದರಸದ ಸದರ್ ಮುಅಲ್ಲಿಂ ಝಕರಿಯಾ ದಾರಿಮಿ,ಅಬ್ದುಲ್ ಹಮೀದ್ಅಡಿಮರಡ್ಕ ರವರಿಗೆ ಬೀಳ್ಕೊಡುಗೆ ಸಮಾರಂಭವು ಅರಂತೋಡು ಮದರಸದ ಹಾಲ್ ನಲ್ಲಿ ನಡೆಯಿತು.

ಕಾರ್ಯಕ್ರಮ ಅಧ್ಯಕ್ಷತೆಯನ್ನು ಅರಂತೋಡು ಜಮಾಅತ್ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್ ವಹಿಸಿದರು. ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಖತೀಬರಾದ ಬಹು ಇಸಾಖ್ ಬಾಖವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಇಸ್ಲಾಂ ಧರ್ಮದ ಐದು ಪುಣ್ಯ ಕಾರ್ಯದಲ್ಲಿ ಹಜ್ಜ್ ಕರ್ಮ ಒಂದಾಗಿದ್ದು .ಹಜ್ಜ್ ಕಾರ್ಯ ನಿರ್ವಹಿಸಲು ಒಲಿದವರು ಭಾಗ್ಯವಂತವರು ಎಂದು ಹೇಳಿದರು.ಈ ಸಂದರ್ಭದಲ್ಲಿ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕ ಅಬ್ದುಲಾ ಮಾಸ್ಟರ್ ಪ್ರಸ್ತಾವಿಕ ಭಾಷಣ ಮಾಡಿದರು.

ಸ್ವಲಾತ್ ಸಮಿತಿ ಉಪಾಧ್ಯಕ್ಷ ಅಬೂಬಕ್ಕರ್ ಪಾರೆಕ್ಕಲ್,ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್‌ ಮಜೀದ್ ,ನಾಸಿರುದ್ದೀನ್ ಪಠೇಲ್ ಮುಅಸ್ಸಿನ್ ಬಶೀರ್ ದಾರಿಮಿ,ನುಸ್ರತುಲ್ ಇಸ್ಲಾಂ ಮದರಸ ಮ್ಯಾನೇಜ್‌ಮೆಂಟ್ ಸಂಚಾಲಕ ಕೆ.ಎಮ್ .ಮೂಸಾನ್,ಜಮಾಅತ್ ನ ಮಾಜಿ ಅಧ್ಯಕ್ಷರು ,‍ಸಲಹಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು . ಜಮಾಅತ್ ಕಾರ್ಯದರ್ಶಿ ಅಶ್ರಫ್ ಗುಂಡಿ ಸ್ವಾಗತಿಸಿದರು.ಎ.ಹೆಚ್.ವೈ.ಎ ಕಾರ್ಯದರ್ಶಿ ಫಸಿಲು ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?
September 8, 2026
9:43 AM
by: ದ ರೂರಲ್ ಮಿರರ್.ಕಾಂ
ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror