#ಆತ್ಮನಿರ್ಭರ ಭಾರತದ ಕಡೆಗೆ ಹೆಜ್ಜೆ | ಸುಳ್ಯ ತಾಲೂಕಿನಲ್ಲಿ ತರಕಾರಿ ಬಿತ್ತನೆ ಬೀಜಗಳ ವಿತರಣೆ ಆರಂಭ | ಸ್ವಾವಲಂಬಿ-ಸಾವಯವದ ಚಿಂತನೆ

June 10, 2020
2:30 PM

ಸುಳ್ಯ ತಾಲೂಕಿನಲ್ಲಿ ತರಕಾರಿ ಬೀಜಗಳ ವಿತರಣೆ  ವಿವಿಧ ಸಹಕಾರಿ ಸಂಘಗಳ ಸಹಕಾರದೊಂದಿಗೆ ಗ್ರಾಮ ವಿಕಾಸ ಸಮಿತಿ ಆಶ್ರಯದಲ್ಲಿ  ನಡೆಯುತ್ತಿದೆ. ವಿವಿಧ ಬಗೆಯ ತರಕಾರಿ ಬೀಜಗಳ ವಿತರಣೆ ಮಾಡಲಾಗುತ್ತಿದ್ದು ಆತ್ಮನಿರ್ಭರ ಭಾರತ ಹಾಗೂ ಸ್ವಾವಲಂಬಿ ಗ್ರಾಮದ ಕನಸಿನ ಬೀಜ ಬಿತ್ತಲಾಗುತ್ತಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕ, ಜಾಲ್ಸೂರು, ಕನಕಮಜಲು, ಮಂಡೆಕೋಲು, ಗುತ್ತಿಗಾರು, ಪಂಜ , ಏನೆಕಲ್ಲು, ಕಳಂಜ-ಬಾಳಿಲ,  ಮೊದಲಾದ ಕಡೆಗಳಲ್ಲಿ ತರಕಾರಿ ಬೀಜ ವಿತರಣೆ ನಡೆಯುತ್ತಿದೆ.


ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ , ಕುಕ್ಕುಜಡ್ಕಮತ್ತು ಗ್ರಾಮ ವಿಕಾಸ ಸಮಿತಿ ಅಮರಮುಡ್ನೂರು-ಪಡ್ನೂರು ಇದರ ಜಂಟಿ ಆಶ್ರಯದಲ್ಲಿ ಗ್ರಾಮದ ರೈತರಿಗೆ ತರಕಾರಿ ಬೀಜಗಳ ವಿತರಣಾ ಕಾರ್ಯಕ್ರಮವು ಅಮರ ಸಹಕಾರ ಸಭಾಭವನದಲ್ಲಿ ಜರುಗಿತು.

ಹರಿಶ್ಚಂದ್ರ ಗೌಡ ಮೊಂಟಡ್ಕ ಗ್ರಾಮ ವಿಕಾಸ ಸಮಿತಿ ಅಮರಮುಡ್ನೂರು ಇವರು ಅಧ್ಯಕ್ಷತೆ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಿಭಾಗ ಗ್ರಾಮ ವಿಕಾಸ ಸಂಯೋಜಕ ಪ್ರವೀಣ್ ಸರಳಾಯ,ತರಕಾರಿ ಬೀಜ ವಿತರಣೆಯ ಕುರಿತು ರೈತರಿಗೆ ಮಾಹಿತಿ ನೀಡಿದರು. ಸಾವಯವ ಬದುಕಿನ ಜೊತೆ ವಿಷಮುಕ್ತ ಬದುಕು ನಮ್ಮದಾಗಬೇಕು, ಅಲ್ಲದೆ ತರಕಾರಿ ಬೆಳೆಯ ಮೂಲಕ ಸ್ವಾವಲಂಬನೆಯ ಕಡೆಗೆ ಹೆಜ್ಜೆ ಹಾಕಬೇಕಾಗಿದೆ ಎಂದರು.

ಅಮರಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ  ಸೀತಾ ಹೆಚ್ ,ಚೊಕ್ಕಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ರಾಘವೇಂದ್ರ ಪಿ. ಕೆ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ್ ಕುಮಾರ್ ಪೊಯ್ಯೆಮಜಲು, ಸ್ವಾಗತಿಸಿ, ಪ್ರದೀಪ್ ಬೊಳ್ಳೂರು ವಂದಿಸಿದರು. ಗಣೇಶ್ ಪಿಲಿಕಜೆ ಕಾರ್ಯಕ್ರಮ ನಿರೂಪಿಸಿದರು.

ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಗ್ರಾಮದ ರೈತರು ತರಕಾರಿ ಬಿತ್ತನೆ ಬೀಜಗಳನ್ನು ಪಡೆದುಕೊಂಡರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror