ಆರ್ ಸಿ ಇ ಪಿ ಬಗ್ಗೆ ಆತಂಕ ಬೇಡ- ಸಂಸದ ನಳಿನ್ ಕುಮಾರ್ ಕಟೀಲ್

November 1, 2019
8:34 PM

ಸುಳ್ಯ: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ(ಆರ್‍ಸಿಇಪಿ) ಕುರಿತು ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆರ್‍ಸಿಇಪಿ ಈಗ ಚರ್ಚೆಯಲ್ಲಿದೆಯಷ್ಟೆ. ರೈತರಿಗೆ ವಿರೋಧವಾಗುವ ಯಾವುದೇ ಯೋಜನೆ ಜಾರಿಯಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರ್‍ಸಿಇಪಿ ಸಂಬಂಧಪಟ್ಟು ಕೇಂದ್ರ ಸರ್ಕಾರ ಈಗಾಗಲೇ ಕೃಷಿಕರು ಮತ್ತು ಟ್ರೇಡ್ ಯೂನಿಯನ್‍ಗಳ ಜೊತೆ ಮಾತುಕತೆ ನಡೆಸಿದೆ. ಆರ್‍ಸಿಇಪಿ ನೇರವಾಗಿ ಹೇರಿಕೆ ಮಾಡುವುದಿಲ್ಲ ಎಂದು ಪ್ರಧಾನಿಯವರೇ ಸ್ಪಷ್ಟ ಪಡಿಸಿದ್ದಾರೆ. ಈ ವಿಚಾರದಲ್ಲಿ ರೈತರಲ್ಲಿ ಯಾವುದೇ ಆತಂಕ ಬೇಡ. ರೈತ ವಿರೋಧಿ ಯೋಜನೆಯನ್ನು ಸರಕಾರ ಜಾರಿಗೊಳಿಸುವುದಿಲ್ಲ. ರಾಜ್ಯದಲ್ಲಿಯೂ ಅಡಿಕೆ ಕೃಷಿ ಇದೆ. ಹಾಲಿನ ವ್ಯವಹಾರ ನಡೆಸುವವರಿದ್ದಾರೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳು ಕೂಡಾ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಯಾವುದೇ ಯೋಜನೆ ರೈತರಿಗೆ ತೊಂದರೆ ಆಗುತ್ತದೆ ಅಂದರೆ ನಾವು ಎಲ್ಲರೂ ಸೇರಿ ಅದನ್ನು ವಿರೋಧಿಸುತ್ತೇವೆ ಎಂದು ಹೇಳಿದರು.

ಅಡಿಕೆ ಹಳದಿ ಎಲೆ ರೋಗಕ್ಕೆ ಪರಿಹಾರದ ಕುರಿತು ಸಂಸದರ ಗಮನ ಸೆಳೆದಾಗ, ಜಿಲ್ಲೆಯ ಎಲ್ಲ ಅಡಿಕೆ ಬಳೆಗಾರರ ನಾಯಕರನ್ನು ಕರೆದು ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಅವರಿಗೆ ಬೇಕಾದ ರೀತಿಯಲ್ಲಿ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ
May 28, 2026
7:20 AM
by: ದ ರೂರಲ್ ಮಿರರ್.ಕಾಂ
ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!
May 27, 2026
8:51 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ
May 27, 2026
8:15 PM
by: ಮಿರರ್‌ ಡೆಸ್ಕ್
ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
May 27, 2026
8:07 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror