ಚಾರ್ಮಾಡಿ ಘಾಟಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅನುವು

September 15, 2019
6:03 PM

ಮಂಗಳೂರು: ಭಾರೀ ಮಳೆಯ ಕಾರಣದಿಂದ ಆ.8 ರಂದು ಚಾರ್ಮಾಡಿ ಘಾಟಿಯ 14 ಕಡೆ ಕುಸಿತವಾಗಿತ್ತು. ಹೀಗಾಗಿ ಒಂದು ತಿಂಗಳ ಕಾಲ ವಾಹನ ಸಂಚಾರ ಬಂದ್ ಮಾಡಲು ಲೋಕೋಪಯೋಗಿ ಇಲಾಖೆ ಜಿಲ್ಲಾಡಳಿತಕ್ಕೆ ಮನವಿ ಮಾಡಿತ್ತು. ಹೀಗಾಗಿ ಆ.15 ರಿಂದ ಸೆ.14 ರವರೆಗೆ ವಾಹನ ಸಂಚಾರ ನಿಷೇಧವಾಗಿತ್ತು. ಇದೀಗ ಸೆ.15 ರಿಂದ ಲಘು ವಾಹನಗಳ ಓಡಾಟಕ್ಕೆ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಜಿಲ್ಲಾಡಳಿತ ಅನಿಮತಿ ನೀಡಿದೆ.

ರಾತ್ರಿ 6 ಗಂಟೆಯಿಂದ ಎಲ್ಲಾ ರೀತಿಯ ವಾಹನ ಓಡಾಟಕ್ಕೆ ನಿಷೇಧ ಹೇರಲಾಗಿದೆ. ಘಾಟಿ ಪ್ರದೇಶದಲ್ಲಿ 20 ಕಿಮೀ ವೇಗದ ಮಿತಿಯನ್ನು ನಿಗದಿಪಡಿಸಲಾಗಿದೆ. ರಸ್ತೆ ಹಾನಿಯಾಗಿರುವುದಿಂದ ಜಾಗರೂಕತೆಯ ಚಾಲನೆಗೆ ಸೂಚನೆ ನೀಡಲಾಗಿದ್ದು, ಮುಂಜಾಗ್ರತಾ ಕ್ರಮಕ್ಕಾಗಿ ಫೋಟೊ ಹಾಗೂ ಸೆಲ್ಪೀ ತೆಗೆಯುವುದು  ನಿಷೇಧವಿದೆ ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರು ಅಧಿಸೂಚನೆಯಲ್ಲಿ  ತಿಳಿಸಿದ್ದಾರೆ.

ಭಾರೀ ಮಳೆಯ ಕಾರಣದಿಂದಾಗಿ ಚಾರ್ಮಾಡಿ ಘಾಟಿ ಭಾರೀ ಕುಸಿತವಾಗಿ ಮುಂದೆ ವಾಹನ ಸಂಚಾರವೇ ಕಷ್ಟ ಎಂದೇ ಹೇಳಲಾಗಿತ್ತು. ಘಾಟಿ ರಸ್ತೆ ಕುಸಿತ ನೋಡಿದ ಎಲ್ಲರೂ ವಾಹನ ಸಂಚಾರ ಬಹಳ ವರ್ಷ ಸಾಧ್ಯವಿಲ್ಲ ಎಂದು ಅನೇಕರು ಹೇಳಿದ್ದರೆ, ಕೆಲವರು ಇನ್ನು ವಾಹನ ಸಂಚಾರ ಶಾಶ್ವತವಾಗಿ ಬಂದ್ ಎಂದು ಹೇಳಿದ್ದರು. ಆದರೆ ನಮ್ಮ ರಸ್ತೆಯನ್ನು ಸುಸ್ಥಿತಿಗೆ ತಂದು ಸದ್ಯ ಲಘುವಾಹನ ಓಡಾಟಕ್ಕೆ ಸಾಧ್ಯವಾಗುವಂತೆ ಮಾಡಿದ್ದಾರೆ. ಸಂಪಾಜೆ ಘಾಟಿಯಲ್ಲೂ ಕಳೆದ ಬಾರಿ ಕುಸಿತವಾದಾಗ ತಕ್ಷಣ ಕ್ರಮ ಕೈಗೊಂಡು ವಾಹನ ಓಡಾಡುವಂತೆ ಮಾಡಿದ್ದಾರೆ. ಇಂಜಿಯರ್ ದಿನದಂದೇ ವಾಹನ ಓಡಾಟಕ್ಕೆ ಅನುವು ಆಗುವಂತೆ ಮಾಡಿರುವುದು  ನಮ್ಮ ಇಂಜಿನಿಯರ್ ಗಳ ಹೆಮ್ಮೆ ಹಾಗೂ ಭರವಸೆ ಹುಸಿಯಾಗಲಿಲ್ಲ.

 

ಆ.14 ರಂದು ಹಿಂದೆ ಸುಳ್ಯ ನ್ಯೂಸ್ ಮಾಡಿರುವ ಪಾಸಿಟಿವ್  ವರದಿ :

ನಮ್ಮ ಇಂಜಿನಿಯರ್ ಗಳು ಚಾರ್ಮಾಡಿ ರಸ್ತೆ ದುರಸ್ತಿ ಮಾಡುತ್ತಾರೆ…..

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror