ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮೂಲಮೃತ್ತಿಕಾ ಪ್ರಸಾದ ವಿತರಣೆ

November 23, 2019
9:30 AM

ಸುಬ್ರಹ್ಮಣ್ಯ:ಕುಕ್ಕೇಸುಬ್ರಹ್ಮಣ್ಯದಲ್ಲಿ ಮಹಾಪ್ರಸಾದ ಮೂಲಮೃತ್ತಿಕೆಯನ್ನು ಶನಿವಾರ ತೆಗೆಯಲಾಗುತ್ತದೆ.  ದೇವಳದ ಗರ್ಭಗುಡಿಯಿಂದ  ಪ್ರಧಾನ ಅರ್ಚಕ  ಸೀತಾರಾಮ ಎಡಪಡಿತ್ತಾಯರು  ವೈದಿಕ ವಿದಿವಿಧಾನಗಳೊಂದಿಗೆ ಮೂಲಪ್ರಸಾದ ತೆಗೆಯಲಿದ್ದಾರೆ.ಬಳಿಕ ಪ್ರಸಾದ ವಿತರಣೆ ನಡೆಯುತ್ತದೆ.  ಶ್ರೀದೇವಳದಲ್ಲಿ ಮೂಲಮೃತ್ತಿಕಾ ಪ್ರಸಾದ ತೆಗೆಯಲು ಇರುವುದರಿಂದ ಇಂದು ಮದ್ಯಾಹ್ನ 2 ಗಂಟೆಯ ನಂತರ ಭಕ್ತಾಧಿಗಳಿಗೆ ಶ್ರೀ ದೇವರ ದರುಶನಕ್ಕೆ ಅವಕಾಶ ಮಾಡಲಾಗಿದೆ. ಶ್ರೀದೇವರ ಜಾತ್ರಾಮಹೋತ್ಸವವು  ನ.24ರಂದು ಆರಂಭಗೊಂಡು ಡಿ.9ರವರೆಗೆ ನಡೆಯಲಿದೆ.

Advertisement

ಮೂಲಮೃತ್ತಿಕಾ ಪ್ರಸಾದವನ್ನು ವರ್ಷದಲ್ಲಿ ಒಂದೇ ಬಾರಿ ಮಾತ್ರಾ ತೆಗೆಯಲಾಗುವುದು. ಮೂಲ ಮೃತ್ತಿಕಾ ಪ್ರಸಾದವು ವಿವಿಧ ರೋಗಗಳ ಪರಿಹಾರಕ್ಕೆ ದಿವ್ಯ ಔಷಧ ಎಂಬ ನಂಬಿಕೆ ಇದೆ.

ಇಂದು ಸಭೆ:

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಲಕ್ಷದೀಪೋತ್ಸವ ರಥೋತ್ಸವದ ಸಮಯದಲ್ಲಿ ಈ ಹಿಂದಿನಂತೆ ಒಂದು ಲಕ್ಷ ಹಣತೆಯನ್ನು ಉರಿಸುವ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಇಂದು ಸಂಜೆ 3.00 ಗಂಟೆಗೆ ಶ್ರೀ ದೇವಳದ ಆಡಳಿತ ಕಚೇರಿಯ  ಸಭಾಂಗಣದಲ್ಲಿ ಭಕ್ತರ ಸಭೆಯನ್ನು ಕರೆಯಲಾಗಿದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಏನಾಗುತ್ತಿದೆ…? | 500 ರೂಪಾಯಿ ಯಾವಾಗ ಆಗುತ್ತೆ…?
July 17, 2025
6:27 AM
by: ಮಹೇಶ್ ಪುಚ್ಚಪ್ಪಾಡಿ
ಕುಂಡಲಿಯ ರಹಸ್ಯ | ಈ ರಾಶಿಯವರಿಗೆ 12ನೇ ಮನೆಯಿಂದ ಗುಪ್ತ ಶತ್ರುಗಳ ಎಚ್ಚರಿಕೆ
July 17, 2025
5:48 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕುಶಾಲಿ ಗೌಡ, ಬೆಂಗಳೂರು
July 16, 2025
10:47 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಅನ್ವಿತಾ ಸಿ
July 16, 2025
10:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group