ಇಸ್ರಾಯ್ ಕ್ಲಬ್ ನ ಉದ್ಘಾಟನೆ ಹಾಗು ಲಾಂಛನ ಬಿಡುಗಡೆ

September 7, 2019
9:15 PM

ಸುಳ್ಯ:ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಡಿಯನ್ ಸೊಸೈಟಿ ಆಫ್ ಹೀಟಿಂಗ್, ರೆಫ್ರಿಜರೇಶನ್ ಆಂಡ್ ಏರ್ ಕಂಡೀಷನಿಂಗ್ ಇಂಜಿನಿಯರ್ಸ್ (ಇಸ್ರಾಯ್) ಕ್ಲಬ್ ನ ಉದ್ಘಾಟನೆ ಹಾಗೂ ಲಾಂಛನ ಅನಾವರಣ ಸಮಾರಂಭ ಯಾಂತ್ರಿಕ ವಿಭಾಗದಿಂದ ನಡೆಯಿತು. ಯಾಂತ್ರಿಕ ವಿಭಾಗದ ಮುಖ್ಯಸ್ಥ ಡಾ. ಉಮಾಶಂಕರ್ ಕೆ. ಎಸ್. ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮೂಡಬಿದ್ರೆಯ ಎಸ್.ಕೆ.ಎಫ್ ಬೋಯ್ಲರ್ಸ್ ಆಂಡ್ ಡ್ರೈಯರ್ಸ್ ಪ್ರೈ.ಲಿಮೊಟೆಡ್ ನ ತಾಂತ್ರಿಕ ನಿರ್ದೇಶಕ ಪ್ರಜ್ವಲ್ ಆಚಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಕಾರ್ಯಕ್ರಮದ ಸಂಯೋಜಕ ಸುಧೀರ್ ಕೆ.ವಿ. ಸ್ವಾಗತಿಸಿ, ಗೋಕುಲ್ ದಾಸ್ ಅವರು ವಂದಿಸಿದರು. ಉದ್ಘಾಟನಾ ಸಮಾರಂಭದ ಬಳಿಕ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ನ ಮಹತ್ವದ ಬಗ್ಗೆ ಪ್ರಜ್ವಲ್ ಆಚಾರ್ ಮಾಹಿತಿ ನೀಡಿದರು. ಕ್ಲಬ್ ನ 3ನೇ ವರ್ಷದ ಯಾಂತ್ರಿಕ ವಿದ್ಯಾರ್ಥಿಗಳಿಗೆ ತಮ್ಮ ಸಂಸ್ಥೆಯ ವತಿಯಿಂದ ಯಾಂತ್ರಿಕ ತರಬೇತಿಯನ್ನು ನೀಡುವುದಾಗಿ ಅವರು ಹೇಳಿದರು.

ಪ್ರೋ. ರಾಘವೇಂದ್ರ ಕಾಮತ್ ಹಾಗೂ ಶಶಾಂಕ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror