ಈ ಕಾರ್ಮಿಕರಿಗೆ ನೀವು “ಭೇಷ್” ಹೇಳಬಲ್ಲಿರಾ…….?

May 1, 2019
4:41 PM
ಸುಬ್ರಹ್ಮಣ್ಯ: ಇವರಿಗೆ ಸ್ವಚ್ಛತೆಯೇ ದೇವರು…!, ಸ್ವಚ್ಛತೆಯೇ ಸಂಭ್ರಮ….!. ಇವರಿಗೆ ನಾವು ಅಭಿನಂದನೆ ಹೇಳದೇ ಇದ್ದರೇ ಅದು ನಮ್ಮ ಲೋಪವಾಗದೇ ಇದ್ದೀತು. ಏಕೆ ಗೊತ್ತಾ…?
ಕಾರ್ಮಿಕ ದಿನಾಚರಣೆಯ ಪ್ರಯುಕ್ತ ಎಲ್ಲೆಡೆ ರಜೆ. ಆದರೆ ಕುಕ್ಕೆ ಸುಬ್ರಹ್ಮಣ್ಯದ  ಗ್ರಾ.ಪಂ ವ್ಯಾಪ್ತಿಯ ಸ್ವಚ್ಛತೆ ಕಾರ್ಮಿಕರ ಪಾಲಿಗೆ  ಸಂಭ್ರಮ ಹಾಗೂ ಸಾಮಾನ್ಯ ದಿನವಾಯಿತು. ಸ್ವಚ್ಛತೆಗೆ ರಜೆ ಎಂಬುದು ಇಲ್ಲ ಎಂಬ ಸಂದೇಶವನ್ನೂ ಈ ಕಾರ್ಮಿಕರು ತೋರಿಸಿದ್ದಾರೆ. ಹೀಗಾಗಿ ಅವರಿಗೆ “ಸುಳ್ಯನ್ಯೂಸ್.ಕಾಂ” ವಿಶೇಷ ಶುಭಾಶಯ ಸಲ್ಲಿಸುತ್ತದೆ.
ಮೇ.1 ರಂದು ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಸರಕಾರಿ  ಕಚೇರಿಗಳಿಗೂ ರಜೆ. ಈ ರಜೆಯನ್ನು ಎಲ್ಲಾ ನೌಕರರು ಆರಾಮವಾಗಿ ಕಳೆದರೆ ಇಲ್ಲಿನ ಸ್ವಚ್ಛತಾ ಸಿಬಂದಿಗಳು ಮಾತ್ರಾ ಹೆಚ್ಚು ದುಡಿದರು. ಸ್ವಚ್ಛತೆಗೆ ಆದ್ಯತೆ ನೀಡಿದರು. ಈ ಮೂಲಕ ಇಡೀ ನಾಡಿಗೆ ನೀಡಿದ ಸಂದೇಶ ದೊಡ್ಡದು. ಬುಧವಾರ ಕಾರ್ಮಿಕರ ದಿನವಾಗಿದ್ದರೂ, ತ್ಯಾಜ್ಯ ವಿಲೆವಾರಿ ಸಂಗ್ರಹ ವಾಹನದ  ಸ್ವಚ್ಛತಾ ವಿಲೆವಾರಿ ಕಾರ್ಮಿಕರು ಹಾಗೂ ಗ್ರಾ.ಪಂ ಸ್ವಚ್ಛತೆ ಸಿಬಂದಿಗಳು  ಎಂದಿನಂತೆ ತಮ್ಮ ಕೆಲಸದಲ್ಲಿ ನಿರತರಾಗಿದ್ದರು.
ಸ್ವಚ್ಛತೆಯಲ್ಲಿ ನಿರತರಾಗಿರುವ ಸಿಬಂದಿಗಳು

 

Advertisement
Advertisement
 ಎರಡು ದಿನಗಳ ಹಿಂದಷ್ಟೇ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ ಸ್ವಚ್ಛ ಮಾಡಿದ ಯುವಬ್ರಿಗೇಡ್ ತಂಡದ ಸದಸ್ಯರು ಸುಮಾರು 10 ಟನ್ ತ್ಯಾಜ್ಯ ಸಂಗ್ರಹ ಮಾಡಿದ್ದರು.
ಧಾರ್ಮಿಕ ಕ್ಷೇತ್ರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ಸ್ಥಳೀಯಾಡಳಿತಕ್ಕೆ ಸವಾಲಿನ ಕೆಲಸ.ಒಂದು ದಿನ ಕಸ ಎತ್ತದಿದ್ದರೆ.ನಗರದ ಅಂಗಡಿ ಮುಂಗಟ್ಟುಗಳ ಎದುರಿನಿಂದ ತ್ಯಾಜ್ಯ ಸಂಗ್ರಹಿಸದೆ ಇದ್ದರೆ ನಗರದಲ್ಲಿ  ದೊಡ್ಡ ಪ್ರಮಾಣದ ಸ್ವಚ್ಛತೆ ಕೊರತೆಯಾಗುತ್ತದೆ. ಹೀಗಾಗಿ ಪ್ರತಿನಿತ್ಯ ತ್ಯಾಜ್ಯ ಸಂಗ್ರಹ ವಿಲೆವಾರಿ ಕಾರ್ಯವನ್ನು  ಪೂರ್ಣಗೊಳಿಸುವುದು  ಅನಿವಾರ್ಯವಾಗಿದೆ. ಇದನ್ನು ಮನಗಂಡು ರಜೆ ಮಾಡದ  ಈ ಗೌರವಾನ್ವಿತ ಕಾರ್ಮಿಕರು ತಮ್ಮ ಸೇವೆಯನ್ನು ಮಾಡಿದ್ದಾರೆ. ಹೀಗಾಗಿ ಈ ಕಾರ್ಮಿಕರಿಗೆ ಶ್ಲಾಘನೆ ವ್ಯಕ್ತವಾಗಿದೆ.
ಈ ನಡುವೆ ಸ್ವಚ್ಛತಾ ಕಾರ್ಮಿಕರಿಗೆ ರಜೆ ನೀಡದೇ ಇರುವ ಬಗ್ಗೆ ಕೆಲವು ಅಪಸ್ವರಗಳು ಕೇಳಿಬಂದಿದೆ. ಹಾಗಿದ್ದರೂ ಸಾಮಾಜಿಕ ವಲಯದಲ್ಲಿ ಈ ಕಾರ್ಮಿಕರ ಮೇಲಿನ ಗೌರವ ಹೆಚ್ಚಾಗಿದೆ. ಸ್ವಚ್ಛ ಸಮಾಜದಲ್ಲಿ ಈ ಕಾರ್ಮಿಕರ ಪಾತ್ರ ದೊಡ್ಡದಿದೆ ಎಂದು ಸಾಬೀತು ಮಾಡಿದ್ದಾರೆ.
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಪ್ರಜಾಪ್ರಭುತ್ವದಲ್ಲಿ ನೋಟಾ (NOTA)‌ | ಸುಶ್ರುತ ದೇಲಂಪಾಡಿ ಹೀಗೆ ಬರೆಯುತ್ತಾರೆ…
April 24, 2024
3:09 PM
by: ದ ರೂರಲ್ ಮಿರರ್.ಕಾಂ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ
ಪರಿಸರ ಸ್ನೇಹಿ ಕೈಚೀಲಗಳ ಕುರಿತು ಒಂದಿಷ್ಟು ಮಾಹಿತಿ ನಿಮಗಾಗಿ | ನಮ್ಮ ದೇಶದ ಡಿಫೆನ್ಸ್ ರೀಸರ್ಚ ಡೆವಲಪ್ಮೆಂಟ್ ಸೆಂಟರ್‌ನಿಂದ ತಯಾರಿ |
April 20, 2024
5:07 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror