ಉಡುಪಿ : ಭಾನುವಾರ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಬಂಡೆಗೆ ಬಡಿದು ಮಗುಚಿಬಿದ್ದು, ದೋಣಿಯಲ್ಲಿದ್ದ ನಾಲ್ವರು ಮೀನುಗಾರರು ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕರಿಮಂಜೇಶ್ವರ ಸಮೀಪದ ಕೊಡೇರಿಯಿಂದ ಭಾನುವಾರ ಬೆಳಗ್ಗೆ ಸಾಗರ್ ಶ್ರೀ ಹೆಸರಿನ ದೋಣಿಯಲ್ಲಿ 11 ಮೀನುಗಾರರು ಸಮುದ್ರಕ್ಕಿಳಿದಿದ್ದರು. ಮೀನುಗಾರಿಕೆಗೆ ತೆರಳಿದ್ದ ದೋಣಿ ಅಲೆಗಳ ಅಬ್ಬರಕ್ಕೆ ಸಿಲುಕಿದೆ. ಇದರಿಂದ ನಾಗರಾಜ್ ಖಾರ್ವಿ, ಲಕ್ಷ್ಮಣ್ ಖಾರ್ವಿ, ಶೇಖರ್, ಮಂಜುನಾಥ್ ನೀರಿನಲ್ಲಿ ಮುಳುಗಿ ಮೃತಪಟ್ಟರೆಂದು ತಿಳಿದುಬಂದಿದೆ. ಈ ನಾಲ್ವರ ಮೃತದೇಹ ಈಗಾಗಲೇ ಪತ್ತೆಯಾಗಿದೆ. ಉಳಿದ ಮೀನುಗಾರರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಗಂಗೊಳ್ಳಿ ಕರಾವಳಿ ಕಾವಲು ಠಾಣೆಯ ಸಿಬ್ಬಂದಿಗಳು ತೆರಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

