ಉತ್ತರ ಪ್ರದೇಶದಲ್ಲಿ ಮತ್ತೆ ಇಬ್ಬರು ಸಂತರ ಹತ್ಯೆ | ಆರೋಪಿಗಳ ಬಂಧನ

April 28, 2020
1:58 PM

ಉತ್ತರಪ್ರದೇಶ : ಉತ್ತರ ಪ್ರದೇಶದ ಬುಲಂದ್‌ಶಹರ್‌  ಜಿಲ್ಲೆಯ ಪಾಗೋನ ಗ್ರಾಮದ  ಶಿವದೇವಾಲಯದ ಒಳಗೆ ಇಬ್ಬರು ಸಾಧುಗಳು ಕೊಲೆಯಾಗಿರುವುದು ಕಂಡುಬಂದಿದೆ. ಘಟನೆಗೆ ಸಂಬಂಧಿಸಿ ಆರೋಪಿಯನ್ನು  ಬಂಧಿಸಲಾಗಿದ್ದು ತನಿಖೆ ನಡೆಯುತ್ತಿದೆ.

Advertisement

ಮಂಗಳವಾರ ಬೆಳಿಗ್ಗೆ ಜನರು ದೇವಸ್ಥಾನಕ್ಕೆ ಆಗಮಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.  ಮೃತರನ್ನು ಜಗಂದಾಸ್ (55) ಮತ್ತು ಸೇವಾದಾಸ್ (35) ಎಂದು ಗುರುತಿಸಲಾಗಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ಮಾಹಿತಿ ಪಡೆದು ಜಿಲ್ಲೆಯ ಅದಿಕಾರಿಗಳಿಗೆ ತಕ್ಷಣ  ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಲು ಸೂಚಿಸಿದ್ದಾರೆ.  ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲು ಆದೇಶಿಸಿದ್ದಾರೆ.

ಆರಂಭಿಕ ತನಿಖೆಯ ಪ್ರಕಾರ ಆರೋಪಿಯು ಕೆಲ ದಿನಗಳ ಹಿಂದೆ ದೇವಸ್ಥಾನ ಸಾಧುವಿಗೆ ಸಂಬಂಧಿಸಿದ ವಸ್ತು ಕಳ್ಳತನ ಮಾಡಿದ್ದ ಇದಕ್ಕಾಗಿ ಸಾಧು ಗದರಿಸಿದ್ದರು. ಅದಾದ ಬಳಿಕ ಇಂದು ಹತ್ಯೆ ನಡೆದಿದೆ ಎಂದು ತಿಳಿದುಬಂದಿದೆ ಎಂದು ಬುಲಂದ್‌ಶಹರ್ ಪೊಲೀಸ್ ಅಧಿಕಾರಿ ಸಂತೋಷ್ ಕುಮಾರ್ ಸಿಂಗ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

( ANI)

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂಧನ ಆಮದು ದೇಶಗಳ ಗುಂಪು ವಿಸ್ತರಿಸಿದ ಭಾರತ – 2 ಲಕ್ಷ ಚ.ಕಿ.ಮೀ. ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಪರಿಶೋಧನೆ
July 17, 2025
9:51 PM
by: The Rural Mirror ಸುದ್ದಿಜಾಲ
ಮೇಘಾಲಯದಲ್ಲಿ “ಜಾಕ್‌ ಫ್ರುಟ್‌ ಮಿಶನ್”‌ ಮೂಲಕ ಹಲಸು ಬೆಳೆಗೆ ಪ್ರೋತ್ಸಾಹ | ಮೇಘಾಲಯದ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಹಲಸಿನ ಹಣ್ಣು ಗಿಫ್ಟ್‌ |
July 15, 2025
8:01 AM
by: The Rural Mirror ಸುದ್ದಿಜಾಲ
ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ
July 14, 2025
11:16 PM
by: ದ ರೂರಲ್ ಮಿರರ್.ಕಾಂ
ಬಾಹ್ಯಾಕಾಶದಲ್ಲಿ ಹೆಸರುಕಾಳು, ಮೆಂತ್ಯ ಮೊಳಕೆಯೊಡೆಯುವ ಪ್ರಯೋಗ ಪ್ರಗತಿಯಲ್ಲಿ – ನಾಸಾ ಸ್ಪಷ್ಟನೆ
July 9, 2025
8:46 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group