ಋಣ ಪರಿಹಾರ ಕಾಯ್ದೆ ಬಗ್ಗೆ ಇಲಾಖೆಯಿಂದ ಸ್ಪಷ್ಟನೆ :

August 31, 2019
7:15 PM

ಪುತ್ತೂರು: ಖಾಸಗಿ ಲೇವಾದೇವಿದಾರರಿಂದ ಮತ್ತು ನೋಂದಾವಣೆಗೊಂಡಿರದ ಖಾಸಗಿ ಸಂಸ್ಥೆಯಿಂದ , ಪಡೆದ ಸಾಲವನ್ನು ಋಣ ಮುಕ್ತ ಕಾಯ್ದೆ 2018 ರಂತೆ ಪರಿಗಣಿಸಲು ಅವಕಾಶ ಇರುತ್ತದೆ. ಅಲ್ಲದೆ, ಕರ್ನಾಟಕ  ಋಣ ಪರಿಹಾರ ಕಾಯ್ದೆ 2018 ಕ್ಕೆ ಸಂಬಂಧಿಸಿ ಅರ್ಜಿ ಸಲ್ಲಿಸುವ ಸಂಬಂಧ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿಯನ್ನು ಪುತ್ತೂರು ಸಹಾಯಕ ಆಯುಕ್ತರ ಕಚೇರಿಯಿಂದ ಉಚಿತವಾಗಿ ಪಡೆಯಬಹುದಾಗಿದೆ. ಇದರ ಹೊರತಾಗಿಯೂ, ಅರ್ಜಿಗೆ ಹಣ ನೀಡಿದ್ದಲ್ಲಿ , ಅರ್ಜಿ ಬರೆಯುವುದಕ್ಕೆ ಹಣ ನೀಡಿದ್ದಲ್ಲಿ ,  ಜಿಲ್ಲಾ ಆಡಳಿತ ಅಥವಾ ತಾಲೂಕು ಆಡಳಿತ ಹೊಣೆ ಆಗಿರುವುದಿಲ್ಲ ಎಂದು ಪುತ್ತೂರು ಉಪವಿಭಾಗ ಸಹಾಯಕ ಆಯುಕ್ತರ ಪ್ರಕಟಣೆ ತಿಳಿಸಿದೆ.

ಋಣಮುಕ್ತ ಕಾಯ್ದೆಯನ್ವಯ ಖಾಸಗಿ  ಲೇವಾದೇವಿದಾರರಿಂದ ಮತ್ತು ಗಿರವಿದಾರರಿಂದ ಸಾಲ ಪಡೆದಿದ್ದಲ್ಲಿ ಕರ್ನಾಟಕ ಋಣ ಪರಿಹಾರ ಕಾಯ್ದೆ 2018 ರಂತೆ ಪರಿಹಾರ ಪಡೆಯಲು ಅರ್ಹರಿರುವುದಾಗಿ ಪ್ರಕಟಿಸಲಾಗಿದ್ದು, ಈಗ ಅನೇಕ ಫಲಾನುಭವಿಗಳು ದೂರವಾಣಿ ಕರೆ ಮಾಡಿ ಸಹಕಾರಿ ಸಂಘಗಳಲ್ಲಿ, ಬ್ಯಾಂಕ್‍ಗಳಲ್ಲಿ, ಇತರೇ ಹಣಕಾಸು ಸಂಸ್ಥೆಯಿಂದ ಪಡಕೊಂಡ ಸಾಲ, ಚಿನ್ನಾಭರಣಗಳನ್ನು ಅಡವಿಟ್ಟು ಪಡೆದ ಸಾಲಗಳಿಗೆ ಅನ್ವಯಿಸುತ್ತದೆಯಾ ಎಂಬ ಬಗ್ಗೆ ವಿಚಾರಿಸುತ್ತಿದ್ದಾರೆ.

ಈ ಬಗ್ಗೆ ಸ್ಪಷ್ಟವಾಗಿ ಈ ರೀತಿ ತಿಳಿದುಕೊಳ್ಳಬೇಕು, ಸರಕಾರಿ ಕಂಪೆನಿಗಳು/ ಜೀವವಿಮಾ ನಿಗಮ/ ಸಹಕಾರಿ ಸಂಘಗಳು/ ಸೌಹಾರ್ದ ಸಹಕಾರಿ ಸಂಘಗಳು / ಬ್ಯಾಂಕುಗಳು/ ಕರ್ನಾಟಕ ಸಹಕಾರಿ ಸಂಘಗಳ ನೋಂದಣಿ ಕಾಯ್ದೆ 1960 ರಡಿ ನೋಂದಾವಣೆ ಆದ ಅತೀ ಸಣ್ಣ ಹಣಕಾಸು ಸಂಸ್ಥೆಗಳು , ಚಿಟ್ ಫಂಡ್ ಕಾಯ್ದೆಯನ್ವಯ ನೊಂದಾವಣೆಗೊಂಡ ಚಿಟ್ ಕಂಪೆನಿಗಳು ಕರ್ನಾಟಕ ಋಣ ಪರಿಹಾರ ಕಾಯ್ದೆ 2018 ರ ವ್ಯಾಪ್ತಿಗೆ ಒಳಪಡುವುದಿಲ್ಲ. ಖಾಸಗಿ ಲೇವಾದೇವಿದಾರರಿಂದ ಮತ್ತು ನೊಂದಾವಣೆಗೊಂಡಿರದ ಖಾಸಗಿ ಸಂಸ್ಥೆಯಿಂದ , ಪಡೆದ ಸಾಲವನ್ನು ಋಣ ಮುಕ್ತ ಕಾಯ್ದೆ 2018 ರಂತೆ ಪರಿಗಣಿಸಲು ಅವಕಾಶ ಇರುತ್ತದೆ ಎಂದು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ
July 31, 2026
9:21 PM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ
July 31, 2026
8:18 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?
July 31, 2026
6:08 PM
by: ಸಾಯಿಶೇಖರ್ ಕರಿಕಳ
ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು
July 31, 2026
5:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror