ಎಂ.ಎಸ್.ರಘುನಾಥ ರಾವ್ ಅವರ ವೃತ್ತಿ ಬದುಕಿನ ಕಥನ ‘ಅಕ್ಷರಯಾನ’ ಲೋಕಾರ್ಪಣೆ

July 11, 2020
11:34 AM

ಪುತ್ತೂರು: ಜೀವನ ಪಾಠಕ್ಕಿಂತ ಮಿಗಿಲಾದ ಪಾಠ ಬೇರೊಂದಿಲ್ಲ. ಓರ್ವನ ಅನುಭವ ಇನ್ನೊಬ್ಬನಿಗೆ ಕೈದೀವಿಗೆಯಾಗುತ್ತದೆ. ಶ್ರಮದ ಮೂಲಕ ಬದುಕನ್ನು ಕಟ್ಟುವುದು ಹೇಳಿದಷ್ಟು ಸುಲಭವಲ್ಲ. ಈ ರೀತಿ ಬೆಳೆದ ರಘುನಾಥ ರಾಯರು ವೃತ್ತಿ ಬದ್ಧತೆಯಿಂದ ಮುದ್ರಣ ಕ್ಷೇತ್ರಕ್ಕೆ ಗೌರವ ತಂದಿದ್ದಾರೆ. ರಾಜೇಶ್ ಪವರ್ ಪ್ರೆಸ್ ಪುತ್ತೂರಿನ ಹೆಮ್ಮೆಯ ಸಂಸ್ಥೆಯಾಗಿ ಬೆಳೆದಿದೆ ಎಂದು ಸವಣೂರಿನ ವಿದ್ಯಾರಶ್ಮೀ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ ಹೇಳಿದರು.

Advertisement

ದರ್ಭೆಯ ರಾಜೇಶ್ ಪವರ್ ಪ್ರೆಸ್ಸಿನಲ್ಲಿ ಜರುಗಿದ ಸರಳ ಸಮಾರಂಭದಲ್ಲಿ ಎಂ.ಎಸ್.ರಘುನಾಥ ರಾಯರ ವೃತ್ತಿ ಬದುಕಿನ ಅನುಭವ ಗಾಥೆ ‘ಅಕ್ಷರಯಾನ’ ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡುತ್ತಾ, “ಹಿರಿಯರು ಬದುಕಿ ತೋರಿಸಿದ ಜೀವನದ ದರ್ಶನಗಳು ಯುವಕರಿಗೆ ಸ್ಫೂರ್ತಿಯ ದೀವಿಗೆಯಾಗುತ್ತದೆ. ಅಕ್ಷರಯಾನವು ಕಾಲದ ದಾಖಲಾತಿಯಾಗುವುದರಲ್ಲಿ ಸಂಶಯವಿಲ್ಲ.” ಎಂದರು.

ಅಕ್ಷರಯಾನದ ಸಂಪಾದಕ ಹಾಗೂ ಪತ್ರಕರ್ತ, ಲೇಖಕ ನಾ. ಕಾರಂತ ಪೆರಾಜೆಯವರು ಕೃತಿಯನ್ನು ಪರಿಚಯಿಸುತ್ತಾ, “ಮುದ್ರಣ ಕ್ಷೇತ್ರದಲ್ಲಿ ಇಂತಹ ಅನುಭವ ಕಥನ ಅಪರೂಪ” ಎಂದರು.

ಹಿರಿಯ ಸಾಹಿತಿ ಗೋಪಾಲಕೃಷ್ಣ ಶಗ್ರಿತ್ತಾಯರು ರಘುನಾಥ ರಾಯರ ಒಟ್ಟೂ ಬದುಕನ್ನು ಹಾಡಿನ ಮೂಲಕ ಪ್ರಸ್ತುತಪಡಿಸಿ ಅಭಿನಂದಿಸಿದರು. ಕಲಾವಿದ ಪ್ರಸನ್ನ ರೈ ಸವಣೂರು, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯಗುರು ಆಶಾ ಬೆಳ್ಳಾರೆ, ವಿವೇಕಾನಂದ ಶಿಶುಮಂದಿರದ ಆಡಳಿತ ಮಂಡಳಿಯ ಅಧ್ಯಕ್ಷ ಅಶೋಕ ಕುಂಬಳೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ರಘುನಾಥ ರಾಯರು ಸ್ವಾಗತಿಸಿದರು. ನಾರಾಯಣ ನಿರ್ವಹಿಸಿ, ವಂದಿಸಿದರು. ಶ್ಯಾಮಲಾ ರಘುನಾಥ ರಾವ್, ರಾಜೇಶ್, ಸ್ವಪ್ನಾ, ಕು.ಅನಘಾ, ಕು.ಅನನ್ಯಾ.. ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದರು. ಪ್ರೆಸ್ಸಿನ ಲೆಕ್ಕಪತ್ರಗಳ ಉಸ್ತುವಾರಿಯಾಗಿರುವ ಲೋನಾ ಪಿಂಟೋ ಸಹಿತ ಸಿಬ್ಬಂದಿಗಳು ಈ ಸಮಾರಂಭಕ್ಕೆ ಸಾಕ್ಷಿಯಾದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 24-02-2026 | ತುಂತುರು ಮಳೆ, ಮೋಡದ ವಾತಾವರಣ ಮುಂದುವರಿಕೆ | ಮಾರ್ಚ್ ಮೊದಲ ವಾರದಿಂದ ಬಿಸಿಲು ಹೆಚ್ಚಳ ಸಾಧ್ಯತೆ
February 24, 2026
2:05 PM
by: ಸಾಯಿಶೇಖರ್ ಕರಿಕಳ
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಔಷಧ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಸಾಧನೆ | ಲಸಿಕೆ ತಯಾರಿಕೆಯಲ್ಲಿ ಜಾಗತಿಕ ಮುಂಚೂಣಿ
February 24, 2026
6:46 AM
by: ಮಿರರ್‌ ಡೆಸ್ಕ್
ಮುಂದಿನ ವರ್ಷದಿಂದ 1–10ನೇ ತರಗತಿಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯ | ಸಚಿವ ಮಧು ಬಂಗಾರಪ್ಪ ಘೋಷಣೆ
February 24, 2026
6:39 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror