ಎಚ್ಚರಿಕೆ…. ನಾಕೂರುಗಯದಲ್ಲಿ ಮೊಸಳೆ ಇದೆ….!

May 7, 2019
12:00 PM

ಪಂಜ: ಎಚ್ಚರಿಕೆ…. ಎಚ್ಚರಿಕೆ… ಕಡಬ ತಾಲೂಕಿನ ನಾಕೂರುಗಯದಲ್ಲಿ  ಮೊಸಳೆ ಇದೆ. ತೀರ್ಥಸ್ನಾನ ಮಾಡುವ ಭಕ್ತರೇ, ನದಿಗೆ ಹಾಲೆರೆಯುವ ಭಕ್ತರೇ ಸ್ವಲ್ಪ ಗಮನಿಸಿಕೊಳ್ಳಿ.

Advertisement
Advertisement

 

Advertisement

ಕಡಬ ತಾಲೂಕಿನ ಪುಳಿಕುಕ್ಕು ಬಳಿಯ ನಾಕೂರುಗಯದಲ್ಲಿ ಮೊಸಳೆ ಕಂಡುಬಂದಿದೆ. ಈ ಮೊಸಳೆ ಗಯದಲ್ಲಿ ಮಾತ್ರವಲ್ಲ ಪುಳಿಕುಕ್ಕು ಪ್ರದೇಶದ ಕುಮಾರಧಾರಾ ನದಿಯಲ್ಲಿ  ಓಡಾಡುತ್ತಿರುತ್ತದೆ ಎಂದು ಈಗ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಕಳೆದ ವರ್ಷ ನದಿ ಸಮೀಪದ ಕೃಷಿಕರ ನಾಯಿಯನ್ನು ಹಿಡಿದಿದೆ ಎಂದೂ ತಿಳಿಸಿದ್ದಾರೆ.

Advertisement

Advertisement

ನಾಕೂರುಗಯಕ್ಕೆ ಅನೇಕ ಭಕ್ತಾದಿಗಳು ಪ್ರತಿದಿನ ಆಗಮಿಸುತ್ತಾರೆ. ತೀರ್ಥಸ್ನಾನ ಮಾಡಲು ಆಗಮಿಸಿದರೆ, ಇನ್ನೂ ಕೆಲವರು ನದಿಗೆ ಹಾಲು ಬಿಡಲು ಆಗಮಿಸುತ್ತಾರೆ. ಈ ನಾಕೂರುಗಯದಲ್ಲಿ ನೀರಿನ ಒಳಗಡೆ ದೇವಸ್ಥಾನ ಇದೆ ಎಂಬ ನಂಬಿಕೆ ಭಕ್ತರಲ್ಲಿದೆ ಇದೆ. ಹೀಗಾಗಿ ಭಕ್ತಿಯಿಂದ ಆಗಮಿಸುವ ಜನರಿಗೆ ಮೊಸಳೆಯ ಸಂಗತಿ ತಿಳಿಯದೆ ನೀರಿಗೆ ಇಳಿಯುವ ಸಂದರ್ಭ ಅಪಾಯ ಆಗುವ ಸಾಧ್ಯತೆ ಇದೆ. ಈ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಮೊಸಳೆ ವ್ಯಕ್ತಿಯನ್ನು ಹಿಡಿದುಕೊಂಡು ಮೊಸಳೆ ನೀರೊಳಗೆ ಮುಳುಗಿದ ದೃಶ್ಯ ಹರಿದಾಡುತ್ತಿತ್ತು. ಈಗ ಇಲ್ಲೂ ಅಂತಹ ಅಪಾಯ ತಪ್ಪಿಸಲು ಕ್ರಮ ಆಗಬೇಕಿದೆ. ಜಾಗೃತಿ ಮೂಡಬೇಕಿದೆ.

Advertisement

ಈ ಕಾರಣದಿಂದ ಅರಣ್ಯ ಇಲಾಖೆ ಹಾಗೂ ಸ್ಥಳೀಯ ಪಂಚಾಯತ್ ಗಮನಿಸಿ ಸೂಚನಾ ಫಲಕ ಅಳವಡಿಕೆ ಮಾಡಬೇಕಿದೆ. ಎಚ್ಚರಿಕಾ ಫಲಕ ಅಳವಡಿಕೆ ಬಗ್ಗೆ ನಾಕೂರು ಗಯ ಹಿತರಕ್ಷಣಾ ವೇದಿಕೆಯೂ ಗಮನಹರಿಸಬೇಕಿದೆ.

 

Advertisement
  • ಚಿತ್ರ ಕೃಪೆ: ಶಿವಸುಬ್ರಹ್ಮಣ್ಯ  ಕಲ್ಮಡ್ಕ , ಪತ್ರಕರ್ತ 
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಹಳದಿ ಎಲೆರೋಗ | ಜನಪ್ರತಿನಿಧಿಗಳು ಮಾಡಬೇಕಾದ್ದೇನು..? | ಸರ್ಕಾರ ಮಾಡಬೇಕಾದ್ದೇನು..? | ಚುನಾವಣಾ ಸಮಯದಲ್ಲಿ ಏಕೆ ಚರ್ಚೆಯಾಗುತ್ತಿಲ್ಲ..?‌ |
April 23, 2024
7:00 AM
by: ಮಹೇಶ್ ಪುಚ್ಚಪ್ಪಾಡಿ
ತಾಪಮಾನ, ನೀರಿನ ಕೊರತೆ | ಇನ್ನಷ್ಟು ಗಂಭೀರ ಸ್ಥಿತಿಗೆ ತೆರಳಲಿದೆ ನಾಡು | ಪರಿಸರ ಕಾಳಜಿ ಗೆ ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ನಿಶ್ಚಿತ | ಪರಿಸರವಾದಿ ದಿನೇಶ್‌ ಹೊಳ್ಳ ಹೇಳಿದ್ದೇನು..?
April 10, 2024
11:09 PM
by: ಮಹೇಶ್ ಪುಚ್ಚಪ್ಪಾಡಿ
ಪರಿಸರ ಶಾಲೆ | ಮಕ್ಕಳಿಗೆ ಪಾಠದ ಅಂಕದಷ್ಟೇ ಪರಿಸರ ಕಾಳಜಿಯೂ ಅಗತ್ಯ | ಪುತ್ತೂರಿನ ಈ ಪ್ಲೇ ಸ್ಕೂಲ್‌ ಮಾದರಿ ಏಕೆ..?
April 6, 2024
2:11 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror