ಎನ್.ಆರ್.ಸಿ. ಮತ್ತು ಸಿ.ಎ.ಎ. ವಿರುದ್ಧ ಜ.2ರಂದು ಸುಳ್ಯದಲ್ಲಿ ಪ್ರತಿಭಟನಾ ಸಭೆ

December 28, 2019
7:01 PM

ಸುಳ್ಯ: ಕೇಂದ್ರ ಸರಕಾರ ದೇಶಾದ್ಯಂತ ಜಾರಿಗೆ ತರಲು ಉದ್ದೇಶಿಸಿರುವ ಎನ್.ಆರ್.ಸಿ. ಮತ್ತು ಸಿ.ಎ.ಎ. ವಿರುದ್ಧ ಜನಾಂದೋಲನ ಮತ್ತು ಸಾರ್ವಜನಿಕ ಪ್ರತಿಭಟನಾ ಸಭೆಯು ಜ.2ರಂದು ಅಪರಾಹ್ನ 3ಕ್ಕೆ ಸುಳ್ಯದ ಗಾಂಧೀನಗರದಲ್ಲಿ ನಡೆಯಲಿದೆ ಎಂದು ಸುಳ್ಯ ತಾಲೂಕು ಮುಸ್ಲಿಂ ಹಿತರಕ್ಷಣಾ ವೇದಿಕೆಯ ಸಂಚಾಲಕ ಮಹಮ್ಮದ್ ಇಕ್ಬಾಲ್ ಎಲಿಮಲೆ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದ ಮುಸ್ಲೀಂ ಸಮುದಾಯವನ್ನು ಗುರಿಯಾಗಿರಿಸಿ ಜಾರಿಗೆ ತರಲು ಉದ್ದೇಶಿಸಿರುವ ಎನ್.ಆರ್.ಸಿ. ಮತ್ತು ಸಿ.ಎ.ಎ ಕರಾಳ ಕಾಯಿದೆಯಾಗಿದ್ದು, ಇದರ ವಿರುದ್ಧ ಸುಳ್ಯ ತಾಲೂಕು ವ್ಯಾಪ್ತಿಯ ಎಲ್ಲಾ ಮೊಹಲ್ಲಾಗಳ ಜಮಾಅತ್ ಸದಸ್ಯರನ್ನೊಳಗೊಂಡು ವಿವಿಧ ಮುಸ್ಲಿಂ ಸಂಘಟನೆಗಳ ಮತ್ತು ಸಮಾನ ಮನಸ್ಕ ಸಹಧರ್ಮಿಯರ ಹಾಗೂ ಎಲ್ಲಾ ಜಾತ್ಯಾತೀತ ಪಕ್ಷಗಳ ಸರ್ವ ರೀತಿಯ ಸಹಕಾರ ಮತ್ತು ಸಹಭಾಗಿತ್ವದೊಂದಿಗೆ ಸುಳ್ಯ ತಾಲೂಕು ಮುಸ್ಲಿಂ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ತಾಲೂಕಿನ ವಿವಿಧ ಭಾಗಗಳಿಂದ ಜನರು ಭಾಗವಹಿಸಿ, ದೇಶದ ಸಂವಿಧಾನದ ಉಳಿವಿಗಾಗಿ ಹಕ್ಕೊತ್ತಾಯ ಮಂಡಿಸಲಿದ್ದಾರೆ ಎಂದು ಅವರು ಹೇಳಿದರು.

ಪ್ರತಿಭಟನಾ ಸಭೆಯ ದಿನ ಸುಳ್ಯದ ವರ್ತಕರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಬೆಂಬಲ ನೀಡಬೇಕೆಂದು ಅವರು ವಿನಂತಿಸಿದ್ದಾರೆ. ಪ್ರತಿಭಟನಾ ಸಭೆಯ ಬಳಿಕ ಸುಳ್ಯ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ಅಧ್ಯಕ್ಷ ಇಸಾಕ್ ಸಾಹೇಬ್ ಪಾಜಪಳ್ಳ, ಪ್ರಮುಖರಾದ ಕೆ.ಎಂ.ಮುಸ್ತಫ, ಪಿ.ಎ.ಮಹಮ್ಮದ್, ಮಹಮ್ಮದ್ ಕುಂಞ ಗೂನಡ್ಕ, ಆರ್.ಕೆ.ಮಹಮ್ಮದ್, ಕೆ.ಎಸ್.ಉಮ್ಮರ್, ರಶೀದ್ ಜಟ್ಟಿಪಳ್ಳ, ಮೂಸಾ ಕುಂಞ ಪೈಂಬೆಚ್ಚಾಲು, ಡಿ.ಎಂ.ಶಾರಿಕ್,ಅಬ್ದುಲ್ ಮಜೀದ್, ರಫೀಕ್ ಪಡು, ಅಬೂಬಕ್ಕರ್ ಅಡ್ಕಾರ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ
July 24, 2026
6:22 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ
July 24, 2026
5:56 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror