ಎಳೆಯ ವಿದ್ಯಾರ್ಥಿಗಳ ಬೌದ್ಧಿಕ ಜ್ಞಾನದ ವಿಕಸನಕ್ಕೆ ಚೆಸ್ ಆಟ ಪ್ರಯೋಜನಕಾರಿ

July 17, 2019
1:00 PM

ಸುಬ್ರಹ್ಮಣ್ಯ: ಎಳೆಯ ಮಕ್ಕಳಿಗೆ ಜ್ಞಾನಾರ್ಜನೆಗಾಗಿ ಬೌದ್ಧಿಕ ಸಂಪತ್ತು ಅಭ್ಯುದಯಗೊಳ್ಳಲು ಚೆಸ್ ಆಟ ಪ್ರಯೋಜನಕಾರಿಯಾಗಿದೆ.ಈ ಆಟವು ಚಾಕಚಕ್ಯತೆ ಮತ್ತು ಬುದ್ದಿಮತ್ತತೆಗೆ ಹೆಚ್ಚು ಒತ್ತು ನೀಡುತ್ತದೆ.ಆದುದರಿಂದ ಮಕ್ಕಳಲ್ಲಿ ಜ್ಞಾನ ಗಳಿಸಲು ಸಹಕಾರ ನೀಡುತ್ತದೆ.ಈ ಆಟವು ಏಕಾಗೃತಾ ಪಾಠವನ್ನು ಬೋಧಿಸುವುದರಿಂದ ಪಠ್ಯ ವಿಚಾರಗಳನ್ನು ಶೀಘ್ರ ಮನನ ಮಾಡಿಕೊಳ್ಳಲು ಉತ್ತಮವಾಗಿದೆ ಎಂದು ಚೆಸ್ ಆಟಗಾರ ಮತ್ತು ಉದ್ಯಮಿ ರತ್ನಾಕರ ಶೆಟ್ಟಿ ಹೇಳಿದರು.

Advertisement

ಸುಬ್ರಹ್ಮಣ್ಯದ ಅನುಗ್ರಹ ಎಜುಕೇಶನ್ ಟ್ರಸ್ಟ್ ಆಶ್ರಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನೂತನವಾಗಿ ಆರಂಭಗೊಂಡ ಚೆಸ್ ತರಬೇತಿ ತರಗತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾಲಯದಲ್ಲಿ ಮಕ್ಕಳಿಗೆ ಚೆಸ್ ತರಬೇತಿ ನೀಡುವುದರಿಂದ ಮಕ್ಕಳಿಗೆ ಬೌದ್ಧಿಕ ಸಂಪತ್ತು ಅನನ್ಯಗೊಳ್ಳುತ್ತದೆ.ಆದುದರಿಂದ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಚೆಸ್ ಆಟದ ಬಗ್ಗೆ ವಿಶೇಷ ತರಬೇತಿ ನೀಡುವುದು ಅತ್ಯವಶ್ಯಕ.ಅಲ್ಲದೆ ಮಕ್ಕಳನ್ನು ಈ ಕ್ರೀಡೆ ಆಡುವಂತೆ ಪ್ರೋತ್ಸಾಹಿಸಬೇಕು ಎಂದರು.

ವಿದ್ಯಾಲಯದ ಸಂಚಾಲಕ ಚಂದ್ರಶೇಖರ ನಾಯರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಚೆಸ್ ತರಬೇತುದಾರ ಜಗನ್ನಾಥ್ ಮಂಗಳೂರು ಮುಖ್ಯಅತಿಥಿಯಾಗಿದ್ದರು. ಶಾಲಾ ಮುಖ್ಯ ಶಿಕ್ಷಕಿ ವಿದ್ಯಾರತ್ನ ವೇದಿಕೆಯಲ್ಲಿದ್ದರು.

ವಿದ್ಯಾರ್ಥಿ ಶಾಬ್ಧಿಕ್ ಸ್ವಾಗತಿಸಿ, ಅನನ್ಯ ಎಂ.ಡಿ ವಂದಿಸಿದರು. ವಿದ್ಯಾರ್ಥಿ ವೆನೆಸ್ಸಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಉಪಸ್ಥಿತರಿದ್ದರು.ಈ ಬಳಿಕ ವಿದ್ಯಾರ್ಥಿಗಳಿಗೆ ಚೆಸ್ ತರಗತಿಗಳು ಆರಂಭಗೊಂಡಿತು. ಪ್ರಸಕ್ತ ವರ್ಷದಿಂದ ಪ್ರತಿ ಶುಕ್ರವಾರಂದು ಚೆಸ್ ತರಗತಿಯು ಸಂಸ್ಥೆಯಲ್ಲಿ ನಡೆಯಲಿದೆ.

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ
ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ
July 19, 2025
9:22 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ
July 19, 2025
9:09 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ
July 19, 2025
9:03 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group