ಎಸ್‍ಎಸ್‍ಎಲ್‍ಸಿ ಮರುಮೌಲ್ಯಮಾಪನದಲ್ಲಿ ಗರಿ ಮುಡಿಗೇರಿಸಿದ ವಿದ್ಯಾರ್ಥಿ

May 28, 2019
12:00 PM

ಬೆಳ್ಳಾರೆ: ಯಾವತ್ತೂ ಯಶಸ್ಸು ಜೊತೆಗೇ ಇರುತ್ತದೆ. ಆದರೆ ಪ್ರಯತ್ನವೆಂಬುದು ಮುಖ್ಯ. ಮಾಡಿರುವ ಪ್ರಯತ್ನಕ್ಕೆ ಯಶಸ್ಸಂತೂ ಇದ್ದೇ ಇದೆ. ಆದರೆ ಕೆಲವೊಮ್ಮೆ ತಡವಾಗಬಹುದು ಅಷ್ಟೇ. ಇದಕ್ಕೆ ಉದಾಹರಣೆ ಎಣ್ಮೂರಿನ  ವಿದ್ಯಾರ್ಥಿ  ಮಹಮ್ಮದ್ ಮಝೀಫ್.

Advertisement

ಈತ ಮಧ್ಯಮ ವರ್ಗದ ಕುಟುಂಬದ ವಿದ್ಯಾರ್ಥಿ. ತನ್ನ ಜೀವನವನ್ನು ತಾನೇ ರೂಪಸಿಕೊಳ್ಳಬೇಕೆಂಬ ಛಲಕ್ಕೆ ಬಿದ್ದು ಶಾಲಾ ರಜಾ ದಿನಗಳಂದು ಕೇಟರಿಂಗ್‍ನಲ್ಲಿ ದುಡಿಯುತ್ತಿದ್ದ. ಸರಕಾರಿ ಶಾಲೆಯಲ್ಲಿ ಓದಿ ತಾಲೂಕಿಗೆ ದ್ವಿತೀಯ ಹಾಗೂ ಶಾಲೆಗೆ ಮೊದಲಿಗನಾದ. ಇದು ಇತ್ತೀಚೆಗಷ್ಟೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 613(ಶೇ98.8) ಗಳಿಸಿದ ಎಣ್ಮೂರಿನ ಮಹಮ್ಮದ್ ಮಝೀಫ್ ಸಾಧನೆಯಾಗಿದೆ. ಮಹಮ್ಮದ್ ಮಝೀಫ್ ಮುರುಳ್ಯ ಗ್ರಾಮದ ರಾಗಿ ಪೇಟೆಯ ಟಿ. ಮಹಮ್ಮದ್ ಹಾಗು ಸಮೀನಾ ಆರ್ ದಂಪತಿಯ ಪುತ್ರ. ಎಣ್ಮೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ.  ಎಣ್ಮೂರು ಶಾಲಾ ಅಧ್ಯಾಪಕರು ಉತ್ತಮ ಫಲಿತಾಂಶಕ್ಕಾಗಿ ಮಾಡಿದ ಶತಪ್ರಯತ್ನಕ್ಕೆ ನಿರೀಕ್ಷೆಗೂ ಮೀರಿ ಪ್ರತಿಫಲ ಮಝೀಫ್‍ನಿಗೆ ದೊರೆತಿದೆ. ಅಂದ ಹಾಗೆ ಮಝೀಫ್ ವಿಶೇಷವಾಗಿ ಗಣಿತದಲ್ಲಿ 100 ಹಾಗೂ ಪ್ರಥಮ ಭಾಷೆ ಕನ್ನಡದಲ್ಲಿ 125 ಪೂರ್ಣ ಅಂಕಗಳನ್ನು ಪಡೆದುಕೊಂಡಿದ್ದಾನೆ.

ಮರುಮೌಲ್ಯಮಾಪನದಿಂದ 3 ಅಂಕ ಹೆಚ್ಚು ದೊರೆಯಿತು :
ಫಲಿತಾಂಶದಂದು ಕನ್ನಡದಲ್ಲಿ 3 ಅಂಕಗಳು ಕಡಿಮೆ ನಮೂದನೆಗೊಂಡಿದ್ದು, ಉತ್ತರ ಪತ್ರಿಕೆಗಳ ಪ್ರತಿಯನ್ನು ತರಸಿ ಪರಿಶೀಲಿಸಿದಾಗ ಕನ್ನಡದಲ್ಲಿ ಪೂರ್ತಿ 125 ಅಂಕಗಳು ಇದ್ದು ಅಂಕಗಳ ಮರು ಎಣಿಕೆಗೆ ಹಾಕಿದ್ದಾನೆ. ತಪ್ಪು ಎಣಿಕೆಯಿಂದಾಗಿ 610 ಅಂಕಗಳನ್ನು ಗಳಿಸಿದ್ದ ವಿದ್ಯಾರ್ಥಿ ಮಝೀಫ್ ಮರುಮೌಲ್ಯಮಾಪನದಲ್ಲಿ 3 ಅಂಕ ಹೆಚ್ಚು ಪಡೆದುಕೊಂಡು ಸುಳ್ಯ ತಾಲೂಕಿಗೆ ದ್ವಿತೀಯ ಹಾಗು ಎಣ್ಮೂರು ಸರಕಾರಿ ಪ್ರೌಢಶಾಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾನೆ.

 

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕಾನೂನು ಮತ್ತು ಸಂವಿದಾನದ ಅರಿವು ಕಾರ್ಯಾಗಾರ | ಶಿಕ್ಷಣ,ಕಾನೂನು,ಜಮೀನು ಸರ್ವರ ಹಕ್ಕು ಮತ್ತು ಕಡ್ಡಾಯವಾಗುವಂತೆ ಮಾಡಿದ್ದು ಅಂಬೇಡ್ಕರ್
January 28, 2025
9:16 PM
by: The Rural Mirror ಸುದ್ದಿಜಾಲ
ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ
ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ
November 26, 2024
5:53 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಸ್ವಾತಂತ್ರ್ಯ ಹೋರಾಟಗಾರರು | ತಾಲೂಕು ಮಟ್ಟದ ಭಾಷಣ ಸ್ಪರ್ಧೆ
October 23, 2024
8:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror