ಎ 29 ರಿಂದ ಅಗಳಿ ಶ್ರೀ ಸದಾಶಿವ ದೇವರ ಜಾತ್ರೋತ್ಸವ

April 27, 2019
1:20 PM

ಕಾಣಿಯೂರು: ಕಾೈಮಣ ಗ್ರಾಮದ ಅಗಳಿ ಶ್ರೀ ಸದಾಶಿವ ದೇವಸ್ಥಾನದ ಪುನರ್ ಪ್ರತಿಷ್ಠಾಪನಾ ಜಾತ್ರೋತ್ಸವವು ಬ್ರಹಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಎ 29, 30ರಂದು ನಡೆಯಲಿದೆ.

ಎ 29ರಂದು ಬೆಳಿಗ್ಗೆ ತೋರಣ ಮುಹೂರ್ತ, ಹಸಿರು ಹೊರೆಕಾಣಿಕೆ ಸಮರ್ಪಣೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ತಂತ್ರಿಗಳ ಆಗಮನ, ರಾತ್ರಿ ಪ್ರಾರ್ಥನೆ, ವಾಸ್ತು ರಕ್ಷೋಘ್ನ ಹೋಮ, ವಾಸ್ತುಬಲಿ, ವಾಸ್ತು ಕಲಶಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ಕಾೈಮಣ ಮತ್ತು ಬೆಳಂದೂರು ಅಂಗನವಾಡಿ ಪುಟಾಣೆಗಳಿಂದ ವಿವಿಧ ನೃತ್ಯ ನಡೆಯಲಿದೆ. ಬಳಿಕ ಗೋಪಾಲಕೃಷ್ಣ ಪಟೇಲ್ ಚಾರ್ವಾಕ ಇವರ ಸಂಯೋಜನೆಯಲ್ಲಿ ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ ಪೌರಾಣಿಕ ಯಕ್ಷಗಾನ “ಶಿವಭಕ್ತ ವೀರಮಣಿ- ಗರುಡ ಗರ್ವಭಂಗ ” ನಡೆಯಲಿದೆ.

ಎ 30ರಂದು ಬೆಳಿಗ್ಗೆ ಗಣಪತಿ ಹವನ, ಬಿಂಬ ಶುದ್ಧಿ, ಕಲಶ ಪೂಜೆ, ಕಲಶಾಭಿಷೇಕ, ಶ್ರೀ ದೇವರಿಗೆ ಪುಷ್ಪಕನ್ನಡಿ ಸಮರ್ಪಣೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ದೀಪಾರಾಧನೆ, ರಾತ್ರಿ ರಂಗಪೂಜೆ, ಶ್ರೀ ದೇವರ ಬಲಿ ಉತ್ಸವ, ಬಟ್ಟಲು ಕಾಣಿಕೆ, ಮಂತ್ರಾಕ್ಷತೆ, ಅನ್ನಸಂತರ್ಪಣೆ ನಡೆದ, ಬಳಿಕ ಶ್ರೀ ಉಳ್ಳಾಕುಲು ಮತ್ತು ರಕ್ತೇಶ್ವರಿ ದೈವಗಳ ನೇಮೋತ್ಸವ ನಡೆಯಲಿದೆ ಎಂದು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಪದ್ಮಯ್ಯ ಗೌಡ ಕರಂದ್ಲಾಜೆ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror