ಕಂಟೈನ್ಮೆಂಟ್‌ ಝೋನ್‌ ಹೊರತುಪಡಿಸಿ ಮಧ್ಯರಾತ್ರಿಯಿಂದ ಲಾಕ್ಡೌನ್ ಕೊಂಚ ಸಡಿಲಿಕೆ | ಕೃಷಿ ಮತ್ತು ಮೀನುಗಾರಿಕೆ ವಲಯಕ್ಕೆ ಸಂಪೂರ್ಣ ಅನುಮತಿ |

April 22, 2020
7:40 PM

ಬೆಂಗಳೂರು:  ರಾಜ್ಯದಲ್ಲಿ ಕಂಟೈನ್ಮೆಂಟ್‌ ಝೋನ್‌ ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ  ಲಾಕ್ಡೌನ್ ಕೊಂಚ ಸಡಿಲಿಕೆಗೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಇಂದು ಮಧ್ಯ ರಾತ್ರಿಯಿಂದಲೇ ಲಾಕ್‌ಡೌನ್‌ ನಿಯಮದಲ್ಲಿ ಸಡಿಲಿಕೆ ಮಾಡಿ ಆದೇಶಿಸಲಾಗಿದೆ.

Advertisement

ರಾಜ್ಯದಲ್ಲಿ ಹೆಚ್ಚು ಕೊರೊನಾ  ಪಾಸಿಟಿವ್​​ ಕಾಣಸಿಕೊಂಡಿರುವ ಕಂಟೈನ್ಮೆಂಟ್‌ ಝೋನ್‌, ರೆಡ್ ಝೋನ್ ಹಾಗೂ ಹಾಟ್ ಸ್ಫಾಟ್ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಲಾಕ್ಡೌನ್ ನಿರ್ಬಂಧ‌ ಸಡಿಲಗೊಳಿಸಲಾಗಿದೆ. ಇದರ ಪ್ರಕಾರ ಕೃಷಿ ಮತ್ತು ಮೀನುಗಾರಿಕೆ ವಲಯಕ್ಕೆ ಸಂಪೂರ್ಣ ಅನುಮತಿ ನೀಡಲಾಗಿದ್ದು ಇದರ ಜೊತೆಗೆ ಪ್ರಮುಖವಾಗಿ ಗ್ರಾಮೀಣ ಪ್ರದೇಶದಲ್ಲಿ ರಸ್ತೆಗೆ ಕಾಮಗಾರಿಗೆ ಅವಕಾಶ , ಕೋರಿಯಾರ್ ಸೇವೆಗೆ ಅನುಮತಿ ಸೇರಿದಂತೆ ಕೆಲವು ವಲಯಕ್ಕೆ ಆದ್ಯತೆ ನೀಡಲಾಗಿದೆ. ಮಾಲ್‌, ಚಿತ್ರಮಂದಿರ, ಆಟೋ, ವಿಮಾನ, ರೈಲು ಸಂಚಾರ, ಬಸ್ಸು, ಕ್ಯಾಬ್‌ ಮೊದಲಾದ ಸೇವೆಗಳಿಗೆ ಇರುವ ನಿರ್ಬಂಧ ಎಂದಿನಂತೆಯೇ ಮುಂದುವರೆಯಲಿದೆ.

ಯಾವುದರಲ್ಲಿ ಸಡಿಲಿಕೆ :

  •  ರಸಗೊಬ್ಬರ, ಎಪಿಎಂಸಿ ಮಾರ್ಕೆಟ್ ಸಂಪೂರ್ಣ ತೆರವು
  • ಕೃಷಿ ಮತ್ತು ಮೀನುಗಾರಿಕೆ ವಲಯಕ್ಕೆ ಸಂಪೂರ್ಣ ಅನುಮತಿ
  • ಕೃಷಿ ನೀರಾವರಿಗೆ ಯಾವುದೇ ನಿರ್ಬಂಧ ಇಲ್ಲ
  • ಅಂತರ​ರಾಜ್ಯ ವಾಹನ ಓಡಾಡಕ್ಕೆ ಅವಕಾಶ
  • ಕಟ್ಟಡ ನಿರ್ಮಾಣಕ್ಕೆ ಅನುಮತಿ
  • ಕಟ್ಟಡ ಕಾಮಾಗರಿಗಳಿಗೆ ಅನುಮತಿ
  • ಟೀ ಕಾಫಿ ಪ್ಲಾಂಟೇಷನ್​​ಗೆ ಅನುಮತಿ
  • ಗ್ರಾಮೀಣ ಪ್ರದೇಶದಲ್ಲಿ ರಸ್ತೆಗೆ ಕಾಮಗಾರಿಗೆ ಅವಕಾಶ
  • ಪಶುಸಂಗೋಪನೆಗೆ ಅವಕಾಶ
  • ಬ್ಯಾಂಕುಗಳ ನಿರ್ವಹಣೆಗೆ ಮುಂದುವರಿಕೆ
  • ಹೋಟೆಲ್​ಗಳಲ್ಲಿ ಪಾರ್ಸೆಲ್ ಸೇವೆಗಳಿಗೆ ಅವಕಾಶ
  • ಕೋರಿಯಾರ್ ಸೇವೆಗೆ ಅನುಮತಿ
  • ಪಾಸ್ ಇದ್ದವರಿಗೆ ಸಂಚಾರಕ್ಕೆ ಅವಕಾಶ

Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ
August 14, 2025
8:55 PM
by: The Rural Mirror ಸುದ್ದಿಜಾಲ
ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ
August 14, 2025
2:53 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ
August 14, 2025
2:48 PM
by: ಸಾಯಿಶೇಖರ್ ಕರಿಕಳ
ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!
August 14, 2025
7:39 AM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror

Join Our Group