ಕಳೆದು ಹೋದ ಆ ಹೊತ್ತು

June 9, 2019
7:00 PM

ಅಮ್ಮ ಕೊಟ್ಟ ಕೈ ತುತ್ತು
ಅಪ್ಪ ಕೊಟ್ಟ ಸಿಹಿ ಮುತ್ತು
ಅಜ್ಜಿ ಕಥೆಗಾಗಿ ಹಂಬಲಿಸುತ್ತಿದ್ದ ಹೊತ್ತು
ಇಂದು ಕಳೆದು ಹೋದ ಅಮೂಲ್ಯ ಸಂಪತ್ತು||೧||

Advertisement
Advertisement

ಮರಳಲಿ ಮನೆ ಕಟ್ಟಿದ ಆ ದಿನಗಳು
ಅಪ್ಪನ ಹೆಗಲೇರಿ ಆಡಿದ ನೆನಪುಗಳು
ಓಡಿ ಆಡಿ ಬಿದ್ದಾಗ ಆದ ಗಾಯಗಳು
ಇಂದಿನ ಬದುಕಿಗೆ ಸುಂದರ ಸ್ವಪ್ನಗಳು||೨||

ಬಾಲ್ಯ ಕಳೆದಿದೆ,ಯೌವ್ವನ ಬಂದಿದೆ
ಸೈಕಲ್ ಗಾಡಿ ಗುಜುರಿ ಅಂಗಡಿ ಸೇರಿದೆ
ಮನೆಯ ಮುಂದೆ ಕಾರು ಬಂದು ನಿಂತಿದೆ
ಯೌವನದ ಅಮಲಿನಲಿ ಬದುಕೇ ಬದಲಾಗಿದೆ||೩||

ಆಧುನಿಕತೆಯ ಸೋಗಿನಲಿ ಕಾಲ ಓಡುತಿದೆ
ಭರದ ನಡಿಗೆಯಲಿ ಕಾಲ್ಗಳು ಸೋತಿದೆ
ಬಾಲ್ಯದ ನಗು ಇಂದು ಸತ್ತು ಹೋಗಿದೆ
ಹೋರಾಟವೇ ಇಂದಿನ ಬದುಕಾಗಿದೆ||೪||

ಮತ್ತೊಮ್ಮೆ ಹೋಗಬೇಕು ಬಾಲ್ಯದ ನೆನಪಿಗೆ
ಹುರುಪು ತುಂಬುವುದು ಇಂದಿನ ಬದುಕಿಗೆ
ಎಲ್ಲರ ಬಾಳಲ್ಲೂ ಬಾಲ್ಯದ ಸವಿ ಇರಲಿ ಹೀಗೆ
ನೀಡಲಿ ಹೊಸ ಚೈತನ್ಯ ಮುಂದಿನ ಬಾಳಿಗೆ||೫||

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ಕಾಲದ ದೋಷವೇ..? ನಮ್ಮ ಮನಸ್ಸಿನ ದೋಷವೇ..?
February 10, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಹೊಸರುಚಿ | ಆರೋಗ್ಯಕರ ಗುಜ್ಜೆ ಕರಿ | ದೋಸೆ–ಚಪಾತಿಗೆ ಸೂಪರ್ ರುಚಿ
February 7, 2026
10:00 PM
by: ದಿವ್ಯ ಮಹೇಶ್
ದ್ವೇಷ ಬೆಂಕಿಯಾಗುತ್ತದೆ, ಕ್ಷಮೆ ಬೆಳಕಾಗುತ್ತದೆ
February 7, 2026
9:42 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮದುವೆ ಎಂದರೆ ಹೆದರಿಕೆ
February 5, 2026
10:03 PM
by: ಡಾ.ಚಂದ್ರಶೇಖರ ದಾಮ್ಲೆ

You cannot copy content of this page - Copyright -The Rural Mirror