ಕಳೆದು ಹೋದ ಆ ಹೊತ್ತು

June 9, 2019
7:00 PM

ಅಮ್ಮ ಕೊಟ್ಟ ಕೈ ತುತ್ತು
ಅಪ್ಪ ಕೊಟ್ಟ ಸಿಹಿ ಮುತ್ತು
ಅಜ್ಜಿ ಕಥೆಗಾಗಿ ಹಂಬಲಿಸುತ್ತಿದ್ದ ಹೊತ್ತು
ಇಂದು ಕಳೆದು ಹೋದ ಅಮೂಲ್ಯ ಸಂಪತ್ತು||೧||

ಮರಳಲಿ ಮನೆ ಕಟ್ಟಿದ ಆ ದಿನಗಳು
ಅಪ್ಪನ ಹೆಗಲೇರಿ ಆಡಿದ ನೆನಪುಗಳು
ಓಡಿ ಆಡಿ ಬಿದ್ದಾಗ ಆದ ಗಾಯಗಳು
ಇಂದಿನ ಬದುಕಿಗೆ ಸುಂದರ ಸ್ವಪ್ನಗಳು||೨||

ಬಾಲ್ಯ ಕಳೆದಿದೆ,ಯೌವ್ವನ ಬಂದಿದೆ
ಸೈಕಲ್ ಗಾಡಿ ಗುಜುರಿ ಅಂಗಡಿ ಸೇರಿದೆ
ಮನೆಯ ಮುಂದೆ ಕಾರು ಬಂದು ನಿಂತಿದೆ
ಯೌವನದ ಅಮಲಿನಲಿ ಬದುಕೇ ಬದಲಾಗಿದೆ||೩||

ಆಧುನಿಕತೆಯ ಸೋಗಿನಲಿ ಕಾಲ ಓಡುತಿದೆ
ಭರದ ನಡಿಗೆಯಲಿ ಕಾಲ್ಗಳು ಸೋತಿದೆ
ಬಾಲ್ಯದ ನಗು ಇಂದು ಸತ್ತು ಹೋಗಿದೆ
ಹೋರಾಟವೇ ಇಂದಿನ ಬದುಕಾಗಿದೆ||೪||

ಮತ್ತೊಮ್ಮೆ ಹೋಗಬೇಕು ಬಾಲ್ಯದ ನೆನಪಿಗೆ
ಹುರುಪು ತುಂಬುವುದು ಇಂದಿನ ಬದುಕಿಗೆ
ಎಲ್ಲರ ಬಾಳಲ್ಲೂ ಬಾಲ್ಯದ ಸವಿ ಇರಲಿ ಹೀಗೆ
ನೀಡಲಿ ಹೊಸ ಚೈತನ್ಯ ಮುಂದಿನ ಬಾಳಿಗೆ||೫||

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ಕೆಲವು ಸಂಬಂಧಗಳನ್ನು ಉಳಿಸುವುದು ಮೌನವೇ..
August 21, 2026
6:28 AM
by: ಮಹೇಶ್ ಪುಚ್ಚಪ್ಪಾಡಿ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror