ಕಳೆದು ಹೋದ ಆ ಹೊತ್ತು

June 9, 2019
7:00 PM

ಅಮ್ಮ ಕೊಟ್ಟ ಕೈ ತುತ್ತು
ಅಪ್ಪ ಕೊಟ್ಟ ಸಿಹಿ ಮುತ್ತು
ಅಜ್ಜಿ ಕಥೆಗಾಗಿ ಹಂಬಲಿಸುತ್ತಿದ್ದ ಹೊತ್ತು
ಇಂದು ಕಳೆದು ಹೋದ ಅಮೂಲ್ಯ ಸಂಪತ್ತು||೧||

Advertisement

ಮರಳಲಿ ಮನೆ ಕಟ್ಟಿದ ಆ ದಿನಗಳು
ಅಪ್ಪನ ಹೆಗಲೇರಿ ಆಡಿದ ನೆನಪುಗಳು
ಓಡಿ ಆಡಿ ಬಿದ್ದಾಗ ಆದ ಗಾಯಗಳು
ಇಂದಿನ ಬದುಕಿಗೆ ಸುಂದರ ಸ್ವಪ್ನಗಳು||೨||

ಬಾಲ್ಯ ಕಳೆದಿದೆ,ಯೌವ್ವನ ಬಂದಿದೆ
ಸೈಕಲ್ ಗಾಡಿ ಗುಜುರಿ ಅಂಗಡಿ ಸೇರಿದೆ
ಮನೆಯ ಮುಂದೆ ಕಾರು ಬಂದು ನಿಂತಿದೆ
ಯೌವನದ ಅಮಲಿನಲಿ ಬದುಕೇ ಬದಲಾಗಿದೆ||೩||

ಆಧುನಿಕತೆಯ ಸೋಗಿನಲಿ ಕಾಲ ಓಡುತಿದೆ
ಭರದ ನಡಿಗೆಯಲಿ ಕಾಲ್ಗಳು ಸೋತಿದೆ
ಬಾಲ್ಯದ ನಗು ಇಂದು ಸತ್ತು ಹೋಗಿದೆ
ಹೋರಾಟವೇ ಇಂದಿನ ಬದುಕಾಗಿದೆ||೪||

ಮತ್ತೊಮ್ಮೆ ಹೋಗಬೇಕು ಬಾಲ್ಯದ ನೆನಪಿಗೆ
ಹುರುಪು ತುಂಬುವುದು ಇಂದಿನ ಬದುಕಿಗೆ
ಎಲ್ಲರ ಬಾಳಲ್ಲೂ ಬಾಲ್ಯದ ಸವಿ ಇರಲಿ ಹೀಗೆ
ನೀಡಲಿ ಹೊಸ ಚೈತನ್ಯ ಮುಂದಿನ ಬಾಳಿಗೆ||೫||

 

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ಸಾಕೆನ್ನಿಸದಷ್ಟು ಎತ್ತರದ ಅಪೇಕ್ಷೆಗಳು, ಜೀವನವೇ ಸಾಕೆನ್ನಿಸುವ ಸಾವುಗಳು
March 26, 2025
9:17 AM
by: ಡಾ.ಚಂದ್ರಶೇಖರ ದಾಮ್ಲೆ
ಯುಗಾದಿ ಹಬ್ಬದಲ್ಲಿ ಪಂಚಗ್ರಾಹಿ ಯೋಗ | 6 ರಾಶಿಯವರಿಗೆ ಮಣ್ಣೂ ಹೊನ್ನಾಗುವ ಸಮಯ
March 25, 2025
10:06 AM
by: ದ ರೂರಲ್ ಮಿರರ್.ಕಾಂ
ಮತ್ತೆ ಮತ್ತೆ ಅಡಿಕೆಯ ಕ್ಯಾನ್ಸರ್‌ ಸುದ್ದಿ | ಆತಂಕ ಏಕೆಂದರೆ, ಭಾರತದ ಅರ್ಧ ಭಾಗದಲ್ಲಿದೆ ಅಡಿಕೆ ಕೃಷಿ |
March 25, 2025
8:30 AM
by: ಮಹೇಶ್ ಪುಚ್ಚಪ್ಪಾಡಿ
ಹೊಸರುಚಿ | ಗುಜ್ಜೆ ಕಬಾಬ್
March 25, 2025
8:00 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror