ಕಸಾಪ ಸಂಪಾಜೆ ಹೋಬಳಿ ಘಟಕದ ಸಭೆ

August 25, 2019
1:51 PM

ಸಂಪಾಜೆ: ಕನ್ನಡ ಸಾಹಿತ್ಯ ಪರಿಷತ್ತು ಸಂಪಾಜೆ ಹೋಬಳಿ ಘಟಕದ ಸಭೆ ಸಂಪಾಜೆ ಪಯಸ್ವಿನಿ ಸಹಕಾರಿ ಸದನದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಹೋಬಳಿ ಮಟ್ಟದ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಪಾಜೆ ಹೋಬಳಿ ಘಟಕ ಕಸಾಪ ಸಮಿತಿಯ ಅಧ್ಯಕ್ಷರಾಗಿ ಸಂಪಾಜೆ ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅನಂತ ಉರುಬೈಲು, ಕಾರ್ಯದರ್ಶಿಗಳಾಗಿ ಯಕ್ಷಗಾನ ಭಾಗವತರಾದ ಬಿ.ಜೆ.ಯಶೋಧರ, ಸಾಹಿತಿ ಸಹನಾ ಕಾಂತಬೈಲು, ಕೋಶಾಧಿಕಾರಿಯಾಗಿ ಕೊಡಗು ಸಂಪಾಜೆ ಗ್ರಾ.ಪಂ.ಅಧ್ಯಕ್ಷ ಕುಮಾರ್ ಚೆದ್ಕಾರ್, ಗೌರವ ಸಲಹೆಗಾರರಾಗಿ ವೆಂಕಪ್ಪ ಮಾಸ್ತರ್ ಮತ್ತು ಜಿಲ್ಲಾ ಸಮಿತಿ ಸದಸ್ಯರಾಗಿ ಲೋಕನಾಥ್ ಅಮೆಚೂರ್ ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರನ್ನೂ ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಂದರ ಬಿಸಿಲುಮನೆ, ನಿವೃತ ಶಿಕ್ಷಕ ಇಬ್ರಾಹಿಂ ಮಾಸ್ತರ್, ಜಾನಪದ ಕಲಾವಿಧ ದೇವಪ್ಪ ಕೊಯನಾಡು, ಲೋಕನಾಥ್ ಅಮೆಚೂರ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror