ಕಸಾಯಿಖಾನೆಯಿಂದ ರಕ್ಷಿಸಲ್ಪಟ್ಟ ಓಂಗೋಲ್ ತಳಿಯ ಹೋರಿಗಳು

July 31, 2019
7:13 PM

ಕಾಸರಗೋಡು: ಕಸಾಯಿಖಾನೆಗೆ ಮಾರಾಟವಾಗಿದ್ದ ಹೋರಿಗಳಿಗೆ ಜೀವದಾನ ನೀಡಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

Advertisement

ಕಾಸರಗೋಡಿನಲ್ಲಿ ಕಸಾಯಿಖಾನೆಗೆ ಮಾರಾಟವಾಗಿದ್ದ ಓಂಗೋಲ್ ತಳಿಯ ಐದು ಹೋರಿಗಳನ್ನು ರಕ್ಷಿಸಲಾಗಿದೆ.  ಶ್ರೀರಾಮಚಂದ್ರಾಪುರ ಮಠದ ಗೋಸಂಜೀವಿನಿ ಯೋಜನೆಯಡಿ ಕಟುಕರಿಂದ ಖರೀದಿಸಿ ಹೋರಿಗಳಿಗೆ ಜೀವದಾನ ಮಾಡಲಾಗಿದೆ.

ಕಸಾಯಿಖಾನೆಗೆ ಮಾರಾಟ ಮಾಡಲು  ಮಧ್ಯವರ್ತಿಯೊಬ್ಬರು ಆಂಧ್ರಪ್ರದೇಶದಿಂದ ಐದು ಎತ್ತುಗಳನ್ನು ಖರೀದಿಸಿ ತಂದು ರಸ್ತೆ ಬದಿಯಲ್ಲಿ ಕಟ್ಟಿದ್ದರು. ಓಂಗೋಲ್ ತಳಿಯ ಈ ಐದು ಎತ್ತುಗಳು ವಧಾಸ್ಥಾನಕ್ಕೆ ಮಾರಾಟವಾಗಿವೆ ಎಂಬ ಮಾಹಿತಿ ದೊರೆತ ತಕ್ಷಣ, ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ಮಾರ್ಗದರ್ಶನದಲ್ಲಿ, ಶ್ರೀಮಠದ ಕಾಮದುಘಾ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಕಟುಕರ ಜತೆ ಮಾತುಕತೆ ನಡೆಸಿದರು. ಅದಕ್ಕೆ ತಗಲುವ ವೆಚ್ಚ ಪಾವತಿಸಿ ಹೋರಿಗಳನ್ನು ವಧೆ ಮಾಡದಂತೆ ಕೋರಿದರು. ಅದರಂತೆ 3.2 ಲಕ್ಷ ರೂಪಾಯಿ ವೆಚ್ಚದಲ್ಲಿ ಐದು ಹೋರಿಗಳನ್ನು ಖರೀದಿಸಿ, ಪೂಚಕ್ಕಾಡು ಗೋಶಾಲೆಗೆ ಕಳುಹಿಸಲಾಗಿದೆ.

ಬೆಳಗ್ಗೆ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿ ಗೋಸಂರಕ್ಷಣೆಗೆ ನೆರವು ನೀಡುವಂತೆ ಮನವಿ ಮಾಡಲಾಗಿತ್ತು. ನೂರಾರು ಮಂದಿ ಸ್ಪಂದಿಸಿದ್ದರು. ಕಟುಕರ ಪಾಲಾಗುವ ಭಾರತೀಯ ತಳಿಯ ಗೋವುಗಳು ಹಾಗೂ ಎತ್ತುಗಳನ್ನು ಖರೀದಿಸಿ, ಅವುಗಳನ್ನು ಶ್ರೀಮಠದ ಗೋಶಾಲೆಯಲ್ಲಿ ಪೋಷಿಸುವ ಸಲುವಾಗಿಯೇ ಶ್ರೀರಾಮಚಂದ್ರಾಪುರ ಮಠ ಗೋಸಂಜೀವಿನಿ ಯೋಜನೆಯನ್ನು ಆರಂಭಿಸಿದೆ. ಮಲೆಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ತಮಿಳುನಾಡಿನ ಆಡಿ ಜಾತ್ರೆಯಲ್ಲಿ ಮಾರಾಟವಾಗಲಿದ್ದ 1500ಕ್ಕೂ ಹೆಚ್ಚು ಗೋವುಗಳನ್ನು ಒಂದೂವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಗೋಸಂಜೀವಿನಿ ಯೋಜನೆಯಡಿ ಈ ಹಿಂದೆ ಖರೀದಿಸಿ ಸಂರಕ್ಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಅಂತೆಯೇ ಕಾಸರಗೋಡು, ಭಟ್ಕಳ ಮತ್ತಿತರ ಕಡೆಗಳಲ್ಲಿ ವಧಾಸ್ಥಾನ ಸೇರಲಿದ್ದ ಹಲವು ಹೋರಿಗಳನ್ನು ಈ ಹಿಂದೆಯೂ ರಕ್ಷಿಸಲಾಗಿದೆ.

ಶ್ರೀಮಠದ ಡಾ.ಜಯಪ್ರಕಾಶ್ ಲಾಡ, ತಿರುಮಲ ಪ್ರಸನ್ನ, ಶ್ರೀಕೃಷ್ಣ ಮೀನಗದ್ದೆ, ನಿಶಾಂತ್ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಕಲಿ, ಕಳಪೆ ಗುಣಮಟ್ಟದ ರಸಗೊಬ್ಬರ ಪೂರೈಕೆ | ಕಠಿಣ ಕ್ರಮಕ್ಕೆ  ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ನಿರ್ದೇಶನ
July 17, 2025
10:13 PM
by: The Rural Mirror ಸುದ್ದಿಜಾಲ
ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ | ಮಳೆಗೆ ಎಲ್ಲೆಲ್ಲಿ ಏನೇನಾಯ್ತು…? |
July 17, 2025
8:51 PM
by: The Rural Mirror ಸುದ್ದಿಜಾಲ
ಗ್ರಾಮೀಣಾಭಿವೃದ್ಧಿಯೇ ನಮ್ಮ ಗುರಿ ಎಂದ ಶಾಲಿನಿ ರಜನೀಶ್
July 16, 2025
9:24 PM
by: The Rural Mirror ಸುದ್ದಿಜಾಲ
ಕಳಪೆ ಗೊಬ್ಬರ ಮಾರಿದ್ದ ಆರೋಪ | ರಾಣೆಬೆನ್ನೂರಿನಲ್ಲಿ ಕೇಸು ದಾಖಲು
July 16, 2025
8:52 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group