ಕಾಞಂಗಾಡ್-ಕಾಣಿಯೂರು ರೈಲ್ವೇ ಹಳಿ ನಿರ್ಮಿಸಲು ಎಲ್ಲಾ ಪ್ರಯತ್ನ- ರಾಜ್‍ಮೋಹನ್ ಉಣ್ಣಿತ್ತಾನ್

June 9, 2019
9:55 PM

ಸುಳ್ಯ: ಕೇರಳ ಮತ್ತು ಕರ್ನಾಟಕದ ಗಡಿ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಪೂರಕಾಗಬಲ್ಲ ಮತ್ತು ಎರಡೂ ರಾಜ್ಯಗಳ ಮಧ್ಯೆ ಕ್ರಾಂತಿಕಾರಿ ಸಂಪರ್ಕ ಕಲ್ಪಿಸುವ ಕಾಞಂಗಾಡ್-ಕಾಣಿಯೂರು ರೈಲ್ವೇ ಹಳಿ ನಿರ್ಮಾಣಕ್ಕೆ ಎಲ್ಲಾ ಪ್ರಯತ್ನಗಳನ್ನೂ ಮಾಡಲು ಸಿದ್ಧ ಎಂದು ಕಾಸರಗೋಡಿನ ನೂತನ ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್ ಹೇಳಿದ್ದಾರೆ.

Advertisement
Advertisement

ಕಾಞಂಗಾಡ್ ನಗರ ಅಭಿವೃದ್ಧಿ  ಕ್ರಿಯಾ ಸಮಿತಿಯು ಸಂಸದರ ಜೊತೆ ನಡೆಸಿದ ಮಾತುಕತೆಯ ವೇಳೆ ಈ ಭರವಸೆ ನೀಡಿದ್ದಾರೆ. ಕೇರಳ ರಾಜ್ಯ ಸರಕಾರ ಹಳಿ ನಿರ್ಮಾಣಕ್ಕೆ ಕೈಜೋಡಿಸುವುದಾಗಿ ಕೇಂದ್ರ ರೈಲ್ವೇ ಸಚಿವಾಲಯಕ್ಕೆ ಈಗಾಗಲೇ ಪತ್ರ ನೀಡಿದ್ದಾರೆ. ಹಳಿ ನಿರ್ಮಾಣಕ್ಕೆ ಭೂ ಸ್ವಾಧೀನಕ್ಕೆ ಬೇಕಾದ ಖರ್ಚಿನ ಅರ್ಧಾಂಶವನ್ನು ನೀಡುವುದಾಗಿ ಪತ್ರದಲ್ಲಿ ತಿಳಿಸಿದೆ. ಕೇರಳ ಮುಖ್ಯಮಂತ್ರಿ ಮತ್ತು ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿ ಈ ವಿಚಾರದ ಕುರಿತು ರಾಜ್ಯ ಸರ್ಕಾರದ ನಿಲುವಿನ ಬಗ್ಗೆ ಸ್ಪಷ್ಟತೆಯನ್ನು ಪಡೆಯಲಾಗುವುದು. ಕರ್ನಾಟಕ ಮುಖ್ಯಮಂತ್ರಿಯನ್ನು ಭೇಟಿಯಾಗಿ ಹಳಿ ನಿರ್ಮಾಣ ವೆಚ್ಚದ ಅರ್ಧ ಖರ್ಚನ್ನು ಭರಿಸಲು ಕರ್ನಾಟಕ ರಾಜ್ಯ ಒಪ್ಪುವಂತೆ ವಿನಂತಿಸಲಾಗುವುದು. ಕೇಂದ್ರ ರೈಲ್ವೇ ಖಾತೆ ಸಚಿವರನ್ನು ಮತ್ತು ರೈಲ್ವೇ ಬೋರ್ಡ್ ಅಧ್ಯಕ್ಷರನ್ನು ಭೇಟಿ ಮಾಡಿ ಕಾಞಂಗಾಡ್-ಕಾಣಿಯೂರು ಹಳಿ ಎಂಬ ಕನಸನ್ನು ನನಸು ಮಾಡಲು ಎಲ್ಲಾ ಪ್ರಯತ್ನಗಳನ್ನೂ ಮಾಡಲಾಗುವುದು ಎಂದು ರಾಜ್‍ಮೋಹನ್ ಉಣ್ಣಿತ್ತಾನ್ ಕ್ರಿಯಾ ಸಮಿತಿ ಪದಾಧಿಕಾರಿಗಳಿಗೆ ಭರವಸೆ ನೀಡಿದ್ದಾರೆ.

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ
June 14, 2025
10:29 PM
by: The Rural Mirror ಸುದ್ದಿಜಾಲ
ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ
June 14, 2025
10:21 PM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ
June 14, 2025
9:57 PM
by: The Rural Mirror ಸುದ್ದಿಜಾಲ
ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶಾಲೆ – ಸಚಿವ ಮಧುಬಂಗಾರಪ್ಪ
June 14, 2025
9:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group