ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Advertisement

ಕಾಣಿಯೂರು:ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ವತಿಯಿಂದ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ  43ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.

Advertisement

ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ  ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ,  ದೇವರ ಮೇಲೆ ಭಕ್ತಿಯಿದ್ದಾಗ, ದೇವರ ಆದೇಶವನ್ನು ಪಾಲನೆ ಮಾಡುವ ಮೂಲಕ ಸಮಾಜದಲ್ಲಿ ಉನ್ನತ ಸ್ಥಾನ ದೊರೆಯಲು ಸಾಧ್ಯವಾಗುತ್ತದೆ . ಸತ್ಯನಾರಾಯಣ ದೇವರ ಆರಾಧನೆ ಮಾಡುವುದರಿಂದ ಸಕಲ ಫಲಗಳು ಪ್ರಾಪ್ತಿಯಾಗಿ ಬದುಕಿನ ಉನ್ನತ್ತಿಯಾಗುತ್ತದೆ. ಸಾಮೂಹಿಕ ಭಜನೆಯಿಂದ, ಭಕ್ತಿ ಭಾವದ ಆರಾಧನೆಯಿಂದ ಮನಶಾಂತಿ ಸಿಗುತ್ತದೆ ಎಂದರು.

Advertisement
Advertisement

ಅರ್ಚಕರಾದ ಸತ್ಯನಾರಾಯಣ ಕಾರಂತ ರಾಮಕುಂಜ, ಅನಂತರಾಮ ಉಪಾಧ್ಯಾಯ ತುಂಬ್ಯ, ದೀಪಕ್ ಕಲ್ಪಡ ವಿವಿಧ ಪೂಜಾ ವಿಧಿ ವಿಧಾನ ನೆರವೇರಿಸಿದರು.

ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಗೌರವಾಧ್ಯಕ್ಷ ಚಿದಾನಂದ ಉಪಾಧ್ಯಾಯ ಕಲ್ಪಡ ಸ್ವಾಗತಿಸಿದರು. ಮಂಡಳಿಯ ಪದಾಧಿಕಾರಿಗಳು ಸ್ವಾಮೀಜಿಯವರಿಗೆ ಫಲವಸ್ತು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷರಾದ ವಾಸುದೇವ ನಾಯ್ಕ್ ತೋಟ, ಕಾರ್ಯದರ್ಶಿ ಜಯಂತ ಅಬೀರ ಹಾಗು ಸದಸ್ಯರು ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯಿಂದ ಶ್ರೀ ಸತ್ಯನಾರಾಯಣ ಪೂಜೆ"

Leave a comment

Your email address will not be published.


*