ಸುಳ್ಯ: ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವರಿಗೆ ಊರ ಹಾಗೂ ಪರ ಊರ ಭಕ್ತರಿಂದ ಸೀಯಾಳ ಅಭಿಷೇಕ ನಡೆಯಿತು.
ಮಳೆ ಬಾರದೇ ಕೃಷಿಗೆ, ಕುಡಿಯಲು ನೀರಿಲ್ಲದೆ ಜನರು ಪರದಾಡಲು ಪ್ರಾರಂಭಿಸಿ ಇದೀಗ ದೇವರಿಗೆ ಮೊರೆಹೋಗುವುದೆಂದು ಕಾರ್ಯರ್ತೋಡಿ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಊರವರು ತೀರ್ಮಾನಿಸಿ ಇತ್ತೀಚೆಗೆ ಸೀಯಾಳ ಅಭಿಷೇಕ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಗದೀಶ್ ಪಡ್ಪು, ಶ್ರೀ ವ್ಯಾರ್ಘ ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮೋಕೆಸ್ತರರು ಡಿ.ಎಸ್ ಶೇಷಪ್ಪ ಗೌಡ, ವೆಂಕಟ್ರಮಣ ಡಿ ಎಸ್ ಶಿವರಾಮ ಬಳ್ಳಡ್ಕ, ಶ್ರೀಮತಿ ಜಯಂತಿ ಹರಿಶ್ಚಂದ್ರ, ಊರ ಹಾಗೂ ಪರ ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ದೇವಸ್ಥಾನದ ಅರ್ಚಕ ರಘುರಾಮ ಹಂದೆ ಹಾಗೂ ಬಳಗದವರು ಕಾರ್ಯಕ್ರಮವನ್ನು ನೆರವೇರಿಸಿದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವರಿಗೆ ಸೀಯಾಳಭಿಷೇಕ"