ಕಾರಂತರು ಈಗ ಹೆಚ್ಚು ಪ್ರಸ್ತುತ- ಜಯಂತ ಕಾಯ್ಕಿಣಿ

October 11, 2019
2:28 PM

ಪುತ್ತೂರು: ಡಾ. ಶಿವರಾಮ ಕಾರಂತರು ಹಿಂದೆಂದಿಗಿಂತಲೂ ಕಾರಂತರು ಈಗ ಹೆಚ್ಚು ಪ್ರಸ್ತುತ. ಜಾತಿ, ಧರ್ಮ, ಭಾಷೆ, ಲಿಂಗಗಳ ಹೆಸರಿನಲ್ಲಿ ಮನುಷ್ಯರನ್ನು ಒಡೆಯುವ ರಾಜಕಾರಣ ಮಾಡುವ ಕಾಲದಲ್ಲಿ ಕಾರಂತರಂಥ ಪ್ರತ್ಯೇಕತಾವಾದಿಯಲ್ಲದ ಏಕತಾವಾದಿ ಪ್ರಸ್ತುತರಾಗುತ್ತಾರೆ ಎಂದು ಕವಿ ಜಯಂತ ಕಾಯ್ಕಿಣಿ ಹೇಳಿದರು.

ಕನ್ನಡ ಮತ್ತು ಸಂಸ್ಕತಿ ಇಲಾಖೆ ಬೆಂಗಳೂರು, ಶಿವರಾಮ ಕಾರಂತ ಬಾಲವನ ಪುತ್ತೂರು ಮತ್ತು ಸಹಾಯಕ ಆಯುಕ್ತರ ಕಚೇರಿ ಪುತ್ತೂರು ಸಂಯುಕ್ತ ಆಶ್ರಯದಲ್ಲಿ ಬಾಲವನದಲ್ಲಿ ನಡೆದ ಡಾ.ಕೆ.ಶಿವರಾಮ ಕಾರಂತರ 118ನೇ ಜನ್ಮ ದಿನೋತ್ಸವ ಕಾರ್ಯಕ್ರಮದ ಸಮಾರೋಪದಲ್ಲಿ ಬಾಲವನ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.
ಜಿಲ್ಲಾಧಿಕಾರಿ ಸಿಂಧೂ ವಿ. ರೂಪೇಶ್, ಕಾರಂತರ ಪುತ್ರಿ ಕ್ಷಮಾ ರಾವ್, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ.ಚಿದಾನಂದ ಕೆ.ವಿ, ಪುತ್ತೂರು ನಗರಸಭೆ ಪೌರಾಯುಕ್ತೆ ರೂಪಾ ಶೆಟ್ಟಿ, ವಿಶ್ರಾಂತ ಪ್ರಾಂಶುಪಾಲ ಡಾ. ಮಾಧವ ಭಟ್, ಬಾಲವನ ಅಭಿವೃದ್ಧಿ ಸಮಿತಿ ಸದಸ್ಯ ಸವಣೂರು ಸೀತಾರಾಮ ರೈ, ರಾಜ್ಯ ಸಮಿತಿ ಸದಸ್ಯ ಐ.ಕೆ.ಬೊಳುವಾರ್, ತಹಸೀಲ್ದಾರ್ ಅನಂತ ಶಂಕರ್, ತಾಪಂ ಇಒ ನವೀನ್ ಭಂಡಾರಿ ಉಪಸ್ಥಿತರಿದ್ದರು.

ಸಹಾಯಕ ಆಯುಕ್ತ ಎಚ್.ಕೆ. ಕೃಷ್ಣಮೂರ್ತಿ ಸ್ವಾಗತಿಸಿದರು, ವಿವೇಕಾನಂದ ಕಾಲೇಜಿನ ಉಪನ್ಯಾಸಕ ಡಾ.ಎಚ್.ಜಿ.ಶ್ರೀಧರ್ ಕಾರ್ಯಕ್ರಮ ನಿರ್ವಹಿಸಿದರು.

ಉದ್ಘಾಟನೆ:
ಕಾರ್ಯಕ್ರಮವನ್ನು ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಉದ್ಘಾಟಿಸಿದರು. ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಮತ್ತು ಬಾಲವಿಜ್ಞಾನಿ ಅಮನ್ ಕೆ.ಎ. ಅವರನ್ನು ಸನ್ಮಾನಿಸಲಾಯಿತು. ಕಾರಂತರು ಮತ್ತು ಪರಿಸರ ವಿಚಾರ ಗೋಷ್ಠಿಯಲ್ಲಿ ಮುಂಬೈ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ತಾಳ್ತಜೆ ವಸಂತ ಕುಮಾರ್ ಕಾರಂತರನ್ನು ತೆರೆದಿಟ್ಟರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ
June 2, 2026
11:08 AM
by: ದ ರೂರಲ್ ಮಿರರ್.ಕಾಂ
ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ
June 2, 2026
7:05 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ
June 2, 2026
6:57 AM
by: ದ ರೂರಲ್ ಮಿರರ್.ಕಾಂ
ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್
June 1, 2026
9:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror