‘ಕಿನಾದಿ’ ಬ್ಯಾರಿ ಗಝಲ್ ಸಿಡಿ ಬಿಡುಗಡೆ

June 25, 2019
10:39 AM

ಮಂಗಳೂರು:ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಪೆರ್ನಾಲ್ ಸಂದೋಲ’ ಮತ್ತು ‘ಕಿನಾದಿ’ ಬ್ಯಾರಿ ಗಝಲ್ ಬಿಡುಗಡೆ ಮಾಡಲಾಯಿತು.

ಈ ಸಂದರ್ಭ ಮಾತನಾಡಿದ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್, ಅಕಾಡೆಮಿಗಳ ಅನುದಾನವನ್ನು 70 ಲಕ್ಷ ರೂ.ನಿಂದ ಒಂದು ಕೋಟಿ ರೂ.ಗೆ ಹೆಚ್ಚಿಸಲು ಕನ್ನಡ ಮತ್ತು ಸಂಸ್ಕೃತಿ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ್ದೇನೆ. ಮುಂದಿನ ಬಜೆಟ್ನಲ್ಲಿ ಘೋಷಣೆ ನಿರೀಕ್ಷೆ ಇದೆ ಎಂದು  ಹೇಳಿದರು. ಒಂದು   ಕಾಲದಲ್ಲಿ ಬ್ಯಾರಿ ಕ್ಯಾಸೆಟ್ ಬಿಡುಗಡೆ ಮಾಡಲು ಹಣವೂ ಇಲ್ಲದೆ, ಜಾಗವೂ ಇಲ್ಲದೆ ಕಷ್ಟಪಡುವ ಪರಿಸ್ಥಿತಿ ಇತ್ತು. ನಂತರ ಬ್ಯಾರಿ ಸಾಹಿತ್ಯ ಪರಿಷತ್ ಮತ್ತಿತರ ಸಂಘಟನೆಗಳ ಮೂಲಕ ಸುಧಾರಣೆ ಆಯಿತು. ಈಗ ಅಕಾಡೆಮಿ ನೇತೃತ್ವದಲ್ಲಿ ಹಲವು ಅತ್ಯುತ್ತಮ ಕಾರ್ಯಕ್ರಮ ಆಗುತ್ತಿವೆ. ಬ್ಯಾರಿ ಗಝಲ್ ಮೂಲಕ ಬ್ಯಾರಿ ಸಂಗೀತ ಕ್ಷೇತ್ರದಲ್ಲಿ ದೊಡ್ಡ ಮೈಲುಗಲ್ಲು ತಲುಪಿದಂತಾಗಿದೆ. ಸಂಗೀತಕ್ಕೆ ಜಾತಿ, ಧರ್ಮದ ಹಂಗಿಲ್ಲ. ಕೊಡುಕೊಳ್ಳುವಿಕೆ ಮೂಲಕ ಸಾಹಿತ್ಯ ಕ್ಷೇತ್ರ ವಿಸ್ತಾರಗೊಳ್ಳಬೇಕು ಎಂದು ಸಚಿವರು ಹೇಳಿದರು.

Advertisement

ಬ್ಯಾರಿ ಅಕಾಡೆಮಿ ಅಧ್ಯಕ್ಷ ಕರಂಬಾರ್ ಮಹಮದ್ ಅಧ್ಯಕ್ಷತೆ ವಹಿಸಿ, ಒಂದೂವರೆ ವರ್ಷದಲ್ಲಿ ಅಕಾಡೆಮಿ ಗುಣಮಟ್ಟದ ಕಾರ್ಯಕ್ರಮಗಳನ್ನು ನೀಡಿದೆ. ಇಂದು ಗಝಲ್ ಸಿಡಿ ಬಿಡುಗಡೆ ಮಾಡಿದ್ದು, ಇನ್ನೊಂದು ಮಹತ್ವದ ಯೋಜನೆಯಾಗಿ ಬ್ಯಾರಿ ವ್ಯಾಕರಣ ಗ್ರಂಥ ಶೀಘ್ರ ಬಿಡುಗಡೆ ಮಾಡಲಿದೆ ಎಂದರು.

ಕೆನರಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಅಧ್ಯಕ್ಷ ಪಿ.ಬಿ.ಅಬ್ದುಲ್ ಹಮೀದ್, ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ಅಧ್ಯಕ್ಷ ಜಗದೀಶ್ ಶೆಟ್ಟಿ, ಬಂಟ್ವಾಳ ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ಅಬ್ಬಾಸ್ ಅಲಿ, ಗಾಯಕ ಮುಹಮ್ಮದ್ ಹನೀಫ್ ಉಪ್ಪಳ ಶುಭ ಹಾರೈಸಿದರು. ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ., ಗಾಯಕ ಠಾಗೂರ್ ದಾಸ್ ಉಪಸ್ಥಿತರಿದ್ದರು.

Advertisement

ಸಿಡಿ ನಿರ್ಮಾಣದ ಕಲಾವಿದರಾದ ಮುಹಮ್ಮದ್ ಬಡ್ಡೂರು, ಠಾಗೂರ್ ದಾಸ್, ಪದ್ಮಿನಿ ನಾಯಕ್, ಸುಹೈಲ್ ಬಡ್ಡೂರ್, ಪುರುಷೋತ್ತಮ್ ಕೊಪ್ಪಲ್, ಶಿನೋಯ್ ವಿ.ಜೋಸೆಫ್ ಮತ್ತಿತರರನ್ನು ಸನ್ಮಾನಿಸಲಾಯಿತು.

ಬ್ಯಾರಿ ಅಕಾಡೆಮಿ ಸದಸ್ಯ ಬಶೀರ್ ಬೈಕಂಪಾಡಿ ಸ್ವಾಗತಿಸಿದರು. ಬಹುಭಾಷಾ ಸಾಹಿತಿ ಮುಹಮ್ಮದ್ ಬಡ್ಡೂರು ಪ್ರಾಸ್ತಾವಿಕ ಮಾತನಾಡಿದರು. ಸದಸ್ಯ ಮುಹಮ್ಮದ್ ಆರಿಫ್ ಪಡುಬಿದ್ರಿ ವಂದಿಸಿದರು. ಕಾರ್ಯಕ್ರಮದ ಸದಸ್ಯ ಸಂಚಾಲಕ ಹುಸೈನ್ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಬಳಿಕ ಠಾಗೂರ್ ದಾಸ್ ಅವರಿಂದ ಬ್ಯಾರಿ ಗಝಲ್ ಕಾರ್ಯಕ್ರಮ ನಡೆಯಿತು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror