ಕುಕ್ಕೆ ಸುಬ್ಬಪ್ಪನ ಕಾಣಿಕೆ ಹುಂಡಿಗೆ ಕೈ ಹಾಕಿ ಸಿಕ್ಕಿ ಬಿದ್ದ ಭೂಪ..!

May 17, 2019
11:00 PM

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಒಳಾಂಗಣದಲ್ಲಿ ದೇಗುಲದ ಕಾಣಿಕೆ ಹುಂಡಿಯಿಂದ ಕಳ್ಳತನ ಮಾಡುತಿದ್ದ ತುಮಕೂರು ಮೂಲದ ತಿಪಟೂರು ಅಶ್ವಿನ್ (20) ಎಂಬಾತ  ಶುಕ್ರವಾರ ಸಿಕ್ಕಿಬಿದ್ದಿದ್ದಾನೆ.

Advertisement
Advertisement
Advertisement

ಗುರುವಾರ ರಾತ್ರಿ  ದೇಗುಲದ ಒಳಾಂಗಣದಲ್ಲಿ ಅನುಮಾಸ್ಪದವಾಗಿ ಓಡಾಡುತ್ತಿದ್ದ ಅಶ್ವಿನ್ ಬಗ್ಗೆ ದೇಗುಲದ ಸೆಕ್ಯೂರಿಟಿಯಲ್ಲಿದ್ದವರ ಗಮನಕ್ಕೆ ಬಂದಿದೆ. ನಂತರ ಗಮನಿಸಿದಾಗ ಕುಕ್ಕೆಲಿಂಗ ಗುಡಿಯ ಎದುರಿನ ಹುಂಡಿಗೆ ಭಕ್ತರು ಹಾಕಿದ ಕಾಣಿಕೆ ಹುಂಡಿಯ ಮೇಲ್ಭಾಗದಿಂದ ಹಣ ತೆಗೆದು ಕಿಸೆಯಲ್ಲಿ ತುಂಬಿಸಿಕೊಳ್ಳುತಿದ್ದ. ಇದೇ ರೀತಿ ಎಲ್ಲ ಕಾಣಿಕೆ ಹುಂಡಿಗಳಿಂದ ಕಳವು ಮಾಡುತ್ತಿರುವುದು ಬಳಿಕ ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ಗೊತ್ತಾಗಿದೆ.

Advertisement

ದೇಗುಲದ ಕಾರ್ಯನಿರ್ವಾಹಣಾಧಿಕಾರಿ ಎಂ.ಎಚ್ ರವೀಂದ್ರ ಅವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ವಿಚಾರಣೆ ವೇಳೆ ಆತ ಒಪ್ಪಿಕೊಂಡಿದ್ದು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಈಗ ನ್ಯಾಯಾಂಗ ಅಶ್ವಿನ್ ಬಂಧನದಲ್ಲಿದ್ದಾನೆ.

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಂಚನೆ ಪ್ರಕರಣ | ಚೈತ್ರಾ ಗ್ಯಾಂಗ್‍ನ ಸಿಸಿಬಿ ಕಸ್ಟಡಿ ಇಂದು ಅಂತ್ಯ- ಬಹುತೇಕ ಮುಗಿದ ವಿಚಾರಣೆ : ಮತ್ತೆ ಕಸ್ಟಡಿಗಾ?, ಪರಪ್ಪನ ಅಗ್ರಹಾರಕ್ಕಾ?
September 23, 2023
11:44 AM
by: The Rural Mirror ಸುದ್ದಿಜಾಲ
ಹೆಂಡತಿ ಕಾಟಕ್ಕೆ ಬೇಸತ್ತ ಪತಿ ಆತ್ಮಹತ್ಯೆ…! | ಹಳ್ಳಿ ಗುಗ್ಗು ಎಂದು ಹೀಯಾಳಿಸುತ್ತಿದ್ದ ಪತ್ನಿ…! |
September 18, 2023
12:27 PM
by: ದ ರೂರಲ್ ಮಿರರ್.ಕಾಂ
ಚೈತ್ರಾ ಕುಂದಾಪುರ ವಂಚನೆ ಪ್ರಕರಣ | ಅಭಿನವ ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ. 19ಕ್ಕೆ ಮುಂದೂಡಿಕೆ |
September 16, 2023
5:51 PM
by: The Rural Mirror ಸುದ್ದಿಜಾಲ
ಕೊನೆಗೂ ಉಗ್ರನನ್ನು ಬಂಧಿಸಿದ NIA | ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ ಸೂತ್ರಧಾರ ದೆಹಲಿಯಲ್ಲಿ ಅರೆಸ್ಟ್‌ |
September 15, 2023
2:16 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror