ಕುಕ್ಕೆ ಸುಬ್ರಹ್ಮಣ್ಯಕ್ಕೆ ಜಿಲ್ಲಾಧಿಕಾರಿ ಭೇಟಿ – ಚಂಪಾ ಷಷ್ಠಿ ಸಿದ್ಧತೆಗಳ ಪರಿಶೀಲನೆ

November 27, 2019
6:14 PM

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಭೇಟಿ ನೀಡಿ ಸಿದ್ಧತಾ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದರು. ದೇವಸ್ಥಾನದಲ್ಲಿ  ರಂಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಸಿದ್ಧತೆಗಳ ಮಾಹಿತಿ ಪಡೆದು ಸೂಕ್ತ ನಿರ್ದೇಶನಗಳನ್ನು ನೀಡಿದರು.

Advertisement

ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,  ಚಂಪಾ ಷಷ್ಠಿ ಮಹೋತ್ಸವದ ಯಶಸ್ಸಿಗೆ ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಪೊಲೀಸ್ ಭದ್ರತೆ ಹಾಗೂ  ಭದ್ರತೆ ದೃಷ್ಟಿಯಿಂದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ, ಕಳೆದ ಬಾರಿಗಿಂತ ಈ ಬಾರಿ 200 ಪೊಲೀಸರನ್ನು ಹೆಚ್ಚುವರಿಯಾಗಿ ನಿಯೋಜನೆ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದರು. ಇದುವರೆಗೆ 70 ಜನ ಬ್ರಹ್ಮರಥ ಸೇವಾರ್ಥಿಗಳು ಇದ್ದಾರೆ ಎಂದು ಮಾಹಿತಿ ನೀಡಿದರು.

ಪಾರ್ಕಿಂಗ್ ವ್ಯವಸ್ಥೆ: 

ಜಾತ್ರಾ ಉತ್ಸವಕ್ಕೆ ವಾಹನಗಳ ಸೂಕ್ತ ಪಾರ್ಕಿಂಗ್ ಗೆ ವ್ಯವಸ್ಥೆ ಮಾಡಲಾಗಿದ್ದು  ಸರಕಾರಿ ಬಸ್ ಗಳಿಗೆ ಕುಮಾರಧಾರ ಮತ್ತು ಇಂಜಾಡಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಉಚಿತವಾಗಿ ಮಿನಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.ಇತರ ವಾಹನಗಳಿಗೆ ಅಲ್ಲಲ್ಲಿ  ವ್ಯವಸ್ಥೆ ಮಾಡಲಾಗಿದೆ ಎಂದರು. 

Advertisement

ಈ ಸಂದರ್ಭ ದೇವಸ್ಥಾನದ ಆಡಳಿತಾಧಿಕಾರ, ಅಪರ ಜಿಲ್ಲಾಧಿಕಾರಿ ರೂಪಾ,  ಕಾರ್ಯ ನಿರ್ವಹಣಾಧಿಕಾರಿಯಾಗಿ, ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್ , ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ ಪೇರಾಲು ಉಪಸ್ಥಿತರಿದ್ದರು.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ – ಬೆಲೆ ಖಾತರಿ ಕಾನೂನು ಜಾರಿಗೆ ಒತ್ತಾಯ
January 17, 2026
7:15 AM
by: ದ ರೂರಲ್ ಮಿರರ್.ಕಾಂ
ಬಡವರಿಗೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟೌವ್ | ಉಜ್ವಲ ಯೋಜನೆ 2.0ಗೆ ಅರ್ಜಿ ಹೇಗೆ ?
January 17, 2026
7:09 AM
by: ಮಿರರ್‌ ಡೆಸ್ಕ್
ಅಡಿಕೆ ಸಿಪ್ಪೆಯಿಂದ ಪರಿಸರ ಸ್ನೇಹಿ ಪ್ಲಾಸ್ಟಿಕ್ | ವಿಜ್ಞಾನಿಗಳ ಮಹತ್ವದ ಸಂಶೋಧನೆ
January 17, 2026
7:00 AM
by: ದ ರೂರಲ್ ಮಿರರ್.ಕಾಂ
ಜ.30 ರಿಂದ ಮೂಡಬಿದ್ರಿಯಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ : | 11 ಜಿಲ್ಲೆಗಳ ಅಭ್ಯರ್ಥಿಗಳಿಗೆ ಅವಕಾಶ
January 16, 2026
9:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror