ಕುಲ್ಕುಂದ ಬಸವೇಶ್ವರ ದೇವಳದ ಪ್ರತಿಷ್ಠಾ ವಾರ್ಷಿಕೋತ್ಸವ

June 6, 2019
12:00 PM

ಸುಬ್ರಹ್ಮಣ್ಯ: ಐತಿಹಾಸಿಕ ಕುಲ್ಕುಂದದ ಬಸವನಮೂಲೆಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವವು ಶ್ರದ್ಧಾ ಭಕ್ತಿಯಿಂದ ನಡೆಯಿತು. ಈ ಪ್ರಯುಕ್ತ ಮಹಾಗಣಪತಿ ಹೋಮ, ವರುಣ ಜಪ ಸಹಿತ ಪರ್ಜನ್ಯ ಹೋಮ,ಶ್ರೀ ಬಸವೇಶ್ವರ ದೇವರಿಗೆ ಏಕಾದಶ ರುದ್ರಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನೆರವೇರಿತು. ಅಲ್ಲದೆ ವಿಶೇಷವಾಗಿ ಏಕಾದಶ ರುದ್ರಾಭಿಷೇಕ, ಮಹಾಗಣಪತಿ ಹೋಮ, ಪರ್ಜನ್ಯ ಹೋಮ, ರಂಗಪೂಜೆ ಮತ್ತು ನಾಗತಂಬಿಲ ಸೇವೆಗಳು ನಡೆಯಿತು.

Advertisement
Advertisement
Advertisement

ಅಧಿಕಾರ ಸ್ವೀಕಾರ:
ಇದೇ ಸಂದರ್ಭದಲ್ಲಿ ಶ್ರೀ ದೇವಳದ ನೂತನ ಆಡಳಿತ ಮಂಡಳಿಗೆ ಅಧಿಕಾರ ಹಸ್ತಾಂತರ ಸಮಾರಂಭ ನೆರವೇರಿತು.ಆಡಳಿತ ಮಂಡಳಿ ನೂತನ ಅಧ್ಯಕ್ಷ ಗಿರಿಧರ ಸ್ಕಂಧ ಅವರಿಗೆ ನಿರ್ಗಮನ ಅಧ್ಯಕ್ಷ ಶಿವಣ್ಣ ಗೌಡ ಜಾಡಿಮನೆ ಅಧಿಕಾರ ಹಸ್ತಾಂತರಿಸಿದರು.ಅಲ್ಲದೆ ವಾರ್ಷಿಕ ಲೆಕ್ಕಪತ್ರ ಮಂಡನೆ ನೆರವೇರಿತು.ಸಮಾರಂಭದಲ್ಲಿ ಶ್ರೀ ಬಸವೇಶ್ವರ ದೇವಳದ ಮನವಿ ಪತ್ರವನ್ನು ಬಿಡುಗಡೆಗೊಳಿಸಲಾಯಿತು.

Advertisement

ಸಮಾರಂಭದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ್ ಸ್ಕಂಧ ವಹಿಸಿದ್ದರು.ವಾಸ್ತುಶಿಲ್ಪಿ ಎಸ್.ಎಂ.ಪ್ರಸಾದ್ ಮುನಿಯಂಗಳ, ಕಲಾವಿದ ಕೆ.ಯಜ್ಞೇಶ್ ಆಚಾರ್, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ದೇವರಾಜ್ ಕೆ.ಎಸ್, ಅಧ್ಯಕ್ಷ ಎನ್.ಕೆ.ಮನೋಹರ ನಾಳ, ಬ್ರಹ್ಮಕಲಶೋತ್ಸವ ಸಮಿತಿಯ ಎ.ವೆಂಕಟ್ರಾಜ್, ರವೀಂದ್ರ ಕುಮಾರ್ ರುದ್ರಪಾದ, ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಶಿವಣ್ಣ ಗೌಡ ಜಾಡಿಮನೆ, ದಿನೇಶ್ ಬಿ.ಎನ್, ನಾಗೇಶ್ ಕೈಕಂಬ, ಗುಡ್ಡಪ್ಪ ಗೌಡ ಬೀಡಿನಗದ್ದೆ, ಶೀನಪ್ಪ ಗೌಡ ನಡುತೋಟ, ಶಿವರಾಮ ಪಳ್ಳಿಗದ್ದೆ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಗಣೇಶ ಚೌತಿ ಆಚರಣೆ | ಮುಂದಿನ ಎಲ್ಲಾ ಶತಮಾನಗಳೂ ಭಾರತದ್ದಾಗಿರಬೇಕು : ಸುಬ್ರಹ್ಮಣ್ಯ ನಟ್ಟೋಜ
September 21, 2023
9:50 AM
by: ದ ರೂರಲ್ ಮಿರರ್.ಕಾಂ
ವಿಷ್ಣುಗುಪ್ತ ವಿಶ್ವವಿದ್ಯಾಪೀಠ | ಮುಂದಿನ ವರ್ಷದಿಂದ ಪದವಿ ಶಿಕ್ಷಣ : ರಾಘವೇಶ್ವರ ಶ್ರೀ
September 20, 2023
9:17 PM
by: ದ ರೂರಲ್ ಮಿರರ್.ಕಾಂ
ಅನ್ನ ಬ್ರಹ್ಮ ಸ್ವರೂಪಿ | ಯಾವ ಕಾರಣಕ್ಕೂ ಭಗವಂತನಿಗೆ ಅವಮಾನಿಸಬೇಡಿ…!
September 20, 2023
7:39 PM
by: The Rural Mirror ಸುದ್ದಿಜಾಲ
ತಲಕಾವೇರಿಯಲ್ಲಿ ಅ.17ರ ಮಧ್ಯರಾತ್ರಿ 1:27ಕ್ಕೆ ತೀರ್ಥೋದ್ಭವ | ತೀರ್ಥರೂಪಿಣಿಯಾಗಿ ಉಕ್ಕಿ ಬರುವ ಕಾವೇರಿ |
September 20, 2023
2:04 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror