ಕೃಪಾ ಮನೆಯಲ್ಲಿ ಸಂತಸ

April 30, 2019
9:26 AM

ಪಂಜ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 624 ಅಂಕಗಳೊಂದಿಗೆ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ  ಸುಬ್ರಹ್ಮಣ್ಯದ ಕುಮಾರಸ್ವಾಮಿ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ  ಕೃಪಾ ಕೆ ಆರ್ ಮನೆಯಲ್ಲಿ ಹೆತ್ತವರಿಗೆ ಸಂಭ್ರಮ ಹಾಗೂ ಸಂತಸ. ಕೃಪಾಗೆ ಈಗ ಎಲ್ಲೆಡೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದಿದೆ.

ಕಡಬ ತಾಲೂಕಿನ ಬಳ್ಪ ಸಮೀಪದ ಕಣ್ಕಲ್ ರವಿ ಅಮ್ಮಣ್ಣಾಯ ಅವರ ಪುತ್ರಿ ಕೃಪಾ ಕೆ ಆರ್ ನಿರಂತರ ಅಭ್ಯಾಸದ ಮೂಲಕ  ಉತ್ತಮ ಅಂಕ ಪಡೆದಿದ್ದಾರೆ. ಗ್ರಾಮೀಣ ಭಾಗದ ಈ ವಿದ್ಯಾರ್ಥಿನಿ ಯಾವುದೇ ಕೋಚಿಂಗ್ ಗೆ ತೆರಳದದೆ ಸತತ ಅಭ್ಯಾಸದ ಮೂಲಕ ಈ ಸಾಧನೆ ಮಾಡಿದ್ದಾರೆ. ಕೃಪಾ ಈ ಸಾಧನೆಗೆ ಕುಮಾರಸ್ವಾಮಿ ಆಂಗ್ಲಮಾದ್ಯಮ ಶಾಲೆಯ ಸಂಚಾಲಕ ಗಣೇಶ್ ಪ್ರಸಾದ್ , ಚಂದ್ರಶೇಖರ್  ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾರತ್ನ ಅಭಿನಂದನೆ ಸಲ್ಲಿಸಿದ್ದಾರೆ.

ಉತ್ತಮ ಅಂಕದ ನಿರೀಕ್ಷೆ ಇತ್ತು ಎನ್ನುವ ಕೃಪಾ , ವಿಜ್ಞಾನ ವಿಭಾಗದಲ್ಲಿ ಒಂದು ಅಂಕ ಕಡಿಮೆಯಾಗುವ ನಿರೀಕ್ಷೆ ಇತ್ತು, ಆದರೆ ಆಂಗ್ಲ ವಿಭಾಗದಲ್ಲಿ ಒಂದು ಅಂಕ ಕಡಿಮೆಯಾಗಿದೆ ಎನ್ನುತ್ತಾರೆ. ಈ ಸಾಧನೆಗೆ ಹೆತ್ತವರು ಹಾಗೂ ಶಾಲೆಯ ಸಹಕಾರವೇ ಕಾರಣ ಎನ್ನುತ್ತಾರೆ.

ಅಭಿನಂದನೆ ಸಲ್ಲಿಸಿದ ಪಂಜದ ವೆಂಕಟ್ರಮಣ ಭಟ್

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ
March 14, 2025
11:03 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ
March 14, 2025
10:57 PM
by: The Rural Mirror ಸುದ್ದಿಜಾಲ
ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ
March 14, 2025
6:57 AM
by: The Rural Mirror ಸುದ್ದಿಜಾಲ
ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ
March 14, 2025
6:54 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror