ಕೃಷಿ ಉತ್ಪನ್ನಗಳ ಮಾರಾಟ ಸಂಸ್ಥೆಗಳಿಗೆ ಟಿ.ಡಿ.ಎಸ್‍ ವಿನಾಯಿತಿ : ಕ್ಯಾಂಪ್ಕೊಅಭಿನಂದನೆ

September 23, 2019
5:00 PM

ಮಂಗಳೂರು: ಕೇಂದ್ರ ಸರಕಾರವು ಇತ್ತೀಚೆಗೆ ತಂದಿದ್ದ, ಬ್ಯಾಂಕ್ ಖಾತೆಗಳಿಂದ ಹಿಂಪಡೆಯುವ ರೂ.1 ಕೋಟಿ ಮೇಲ್ಪಟ್ಟ ಹಣದ ಮೇಲಿನ 2% ಮೂಲತೆರಿಗೆ ಕಡಿತ (ಟಿ.ಡಿ.ಎಸ್.) ನಿಯಮವನ್ನು, ನೂತನವಾಗಿ ಹೊರಡಿಸಿರುವ ಸುತ್ತೋಲೆಯ ಅನುಸಾರ ಸೆ.1 ರಿಂದ ಅನ್ವಯವಾಗುವಂತೆ, ಸಡಿಲಗೊಳಿಸಿ ಆದೇಶ ಹೊರಡಿಸಿದೆ. ಕೃಷಿಕರ ಹಣಕಾಸು ಸಮಸ್ಯೆಗಳನ್ನು ಮನಗಂಡು ಕೇಂದ್ರ ಸರಕಾರವು ಈ ಆದೇಶವನ್ನು ಹೊರಡಿಸಿದ್ದು, ಎ.ಪಿ.ಎಮ್.ಸಿ. ಸದಸ್ಯತ್ವ ಹೊಂದಿ ಕಾರ್ಯಾಚರಿಸುವ ಎಲ್ಲಾ ವ್ಯಾಪಾರಿಗಳು ಮತ್ತು ಕೃಷಿ ಉತ್ಪನ್ನಗಳ ಮಾರಾಟ ಸಂಸ್ಥೆಗಳಿಗೆ ಈ ವಿನಾಯಿತಿ ಅನ್ವಯಿಸುತ್ತದೆ. ಈ ಮೂಲಕ ಸಂಸ್ಥೆಗಳ ಮೇಲಿನ ಟಿ.ಡಿ.ಎಸ್‍ ಭಾರವನ್ನು ಇಳಿಸಿ ಕೃಷಿಕ ಸಮುದಾಯದ ಸಂಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರಕಾರದ ಈ ಕ್ರಮಕ್ಕೆ ಕೃಷಿಕ ಸಮುದಾಯದ ಪರವಾಗಿ ಕ್ಯಾಂಪ್ಕೊ ಸಂಸ್ಥೆಯು ಅಭಿನಂದನೆಯನ್ನು ಸಲ್ಲಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement

ಈ ಹಿಂದೆ, 2% ಮೂಲತೆರಿಗೆ ನಿಯಮವನ್ನುಜಾರಿಗೆ ತಂದಿದ್ದ ಸಂದರ್ಭದಲ್ಲಿ, ಸಂಸ್ಥೆಯ ವತಿಯಿಂದ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕೇಂದ್ರ ಹಣಕಾಸು ಸಚಿವೆ  ನಿರ್ಮಲಾ ಸೀತಾರಾಮನ್ ಮತ್ತು ಹಣಕಾಸು ಖಾತೆರಾಜ್ಯ ಸಚಿವರಾದ ಅನುರಾಗ್‍ ಠಾಕೂರ್‍ ಅವರಿಗೆ, ಈ ನಿಯಮದಿಂದ ಕೃಷಿಕರಿಗೆ ತಲೆದೋರಬಹುದಾದ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟು, ನಿಯಮದ ಸಡಿಲಿಕೆಗಾಗಿ ಮನವಿ ಮಾಡಲಾಗಿತ್ತು. ಇದೀಗ, ಮನವಿಯನ್ನು ಪುರಸ್ಕರಿಸಿ ನಿಯಮದಲ್ಲಿ ಸಡಿಲಿಕೆತಂದಿರುವುದು ಕೃಷಿಕ ಸಮುದಾಯದಲ್ಲಿ ಸಂತಸವನ್ನುಂಟುಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 01-03-2025 | ಕರಾವಳಿ ಜಿಲ್ಲೆಯ ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಮಾ.4 ರಂದು ಕೂಡಾ ತುಂತುರು ಮಳೆ ನಿರೀಕ್ಷೆ |
March 1, 2025
2:22 PM
by: ಸಾಯಿಶೇಖರ್ ಕರಿಕಳ
ಎಥೆನಾಲ್ ಮಿಶ್ರಣ ಶೇ.20ಕ್ಕೆ ಹೆಚ್ಚಿಸುವ ಚಿಂತನೆ |
March 1, 2025
7:36 AM
by: ದ ರೂರಲ್ ಮಿರರ್.ಕಾಂ
ಭಾರತದಿಂದ 3.84 ಲಕ್ಷ ಮೆಟ್ರಿಕ್ ಟನ್ ಕಾಫಿ ರಫ್ತು |
March 1, 2025
7:30 AM
by: The Rural Mirror ಸುದ್ದಿಜಾಲ
ರೈತ ಉತ್ಪಾದಕ ಸಂಸ್ಥೆಗಳ ಮೇಳ | ರೈತ ಉತ್ಪಾದಕ ಸಂಸ್ಥೆಗಳಿಂದ ಕೃಷಿ ಕ್ಷೇತ್ರದ ಏಳಿಗೆಗೆ ಕೊಡುಗೆ
March 1, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror