ಕೆಎಸ್‍ಎಸ್ ಕಾಲೇಜು ಕುಸುಮಸಾರಂಗದ ರಂಗ ಶಿಕ್ಷಣ ಶಿಬಿದ ಸಮಾರೋಪ

July 9, 2019
12:00 PM

ಸುಬ್ರಹ್ಮಣ್ಯ : ಪಠ್ಯದಲ್ಲಿ ಕಲಿಸಲಾಗದ ಶಿಕ್ಷಣವನ್ನು ಪಾಠವನ್ನು ರಂಗಭೂಮಿ ಕಲಿಸುತ್ತದೆ. ಸಮಾಜದಲ್ಲಿ ಪರಿಪೂರ್ಣ ವ್ಯಕ್ತಿಯಾಗಿ ರೂಪುಗೊಳ್ಳಲು ಪಠ್ಯೇತರ ಚಟುವಟಿಯೇ ಮಾನದಂಡ. ರಂಗಭೂಮಿ ಸದಾ ಜೀವಂತವಾದುದು ಎಂದು ಕೆಎಸ್‍ಎಸ್ ಕಾಲೇಜು ಪೂರ್ವ ವಿದ್ಯಾರ್ಥಿ ದಿವಾಕರ ಮುಂಡಾಜೆ ಹೇಳಿದರು.
ಅವರು ಸುಬ್ರಹ್ಮಣ್ಯ ಕೆಎಸ್‍ಎಸ್ ಕಾಲೇಜಿನಲ್ಲಿ  ನಡೆದ ಕುಸುಮಸಾರಂಗ-2019 ಮತ್ತು ಐಕ್ಯೂಎಸಿ ಸಹಯೋಗದಲ್ಲಿ 27ನೇ ವರ್ಷದ ರಂಗ ಶಿಕ್ಷಣ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಸಮಾಜದ ಗೌರವಕ್ಕೆ ಪಾತ್ರರಾಗಲು ಪಠ್ಯೇತರ ಚಟುವಟಕೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
ಕಾಲೇಜು ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ ಅವರು ಪ್ರಸ್ತಾವನೆಗೈದು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಸ್ಪೂರ್ತಿಯನ್ನು ತುಂಬಲು ನಾಟಕಕ್ಕೆ ಪ್ರೋತ್ಸಾಹ ನೀಡುತ್ತಿದ್ದೇವೆ ಎಂದರು.
ಕಾಲೇಜು ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮೋಹನದಾಸ್ ರೈ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಯೋಜಕ ಬಾಲಕೃಷ್ಣ ಪೈ, ಕುಸುಮಸಾರಂಗದ ಸ್ಥಾಪಕ ನಿರ್ದೇಶಕ ತುಕರಾಮ್ ಯೇನೆಕಲ್ಲು, ಪೂರ್ವ ವಿದ್ಯಾರ್ಥಿ ರಾಮಚಂದ್ರ ಮುಖ್ಯ ಅತಿಥಿಗಳಾಗಿದ್ದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕ ವಿನ್ಯಾಸ್ ಎಚ್ ವಂದಿಸಿದರು. ಲೋಹಿತ್ ಎಂ.ಡಿ ವಂದಿಸಿದರು. ಬಳಿಕ ಕುಸುಮಸಾರಂಗ ವಿದ್ಯಾರ್ಥಿಗಳು ನಟಿಸಿದ ಪ್ರೋ ಜಯಪ್ರಕಾಶ್ ಮಾವಿನಕುಳಿ ರಚಿಸಿದ ಅಭಿಯಾನ ನಾಟಕ ಪ್ರದರ್ಶನಗೊಂಡಿತು. ಉಪನ್ಯಾಸಕರು, ಪೋಷಕರು, ಪೂರ್ವ ವಿದ್ಯಾರ್ಥಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಾವಣಗೆರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ | ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆಬಾವಿ
March 16, 2025
7:53 AM
by: The Rural Mirror ಸುದ್ದಿಜಾಲ
ಯಾದಗಿರಿ ಜಿಲ್ಲೆಗೆ ತಾಪಮಾನ ಎಚ್ಚರಿಕೆ | ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ
March 16, 2025
7:36 AM
by: The Rural Mirror ಸುದ್ದಿಜಾಲ
ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ
March 16, 2025
7:29 AM
by: The Rural Mirror ಸುದ್ದಿಜಾಲ
ರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಜಾನುವಾರು ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ
March 16, 2025
7:24 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror