ಕೆಎಸ್‍ಎಸ್ ಕಾಲೇಜು ಕುಸುಮಸಾರಂಗದ ರಂಗ ಶಿಕ್ಷಣ ಶಿಬಿದ ಸಮಾರೋಪ

July 9, 2019
12:00 PM

ಸುಬ್ರಹ್ಮಣ್ಯ : ಪಠ್ಯದಲ್ಲಿ ಕಲಿಸಲಾಗದ ಶಿಕ್ಷಣವನ್ನು ಪಾಠವನ್ನು ರಂಗಭೂಮಿ ಕಲಿಸುತ್ತದೆ. ಸಮಾಜದಲ್ಲಿ ಪರಿಪೂರ್ಣ ವ್ಯಕ್ತಿಯಾಗಿ ರೂಪುಗೊಳ್ಳಲು ಪಠ್ಯೇತರ ಚಟುವಟಿಯೇ ಮಾನದಂಡ. ರಂಗಭೂಮಿ ಸದಾ ಜೀವಂತವಾದುದು ಎಂದು ಕೆಎಸ್‍ಎಸ್ ಕಾಲೇಜು ಪೂರ್ವ ವಿದ್ಯಾರ್ಥಿ ದಿವಾಕರ ಮುಂಡಾಜೆ ಹೇಳಿದರು.
ಅವರು ಸುಬ್ರಹ್ಮಣ್ಯ ಕೆಎಸ್‍ಎಸ್ ಕಾಲೇಜಿನಲ್ಲಿ  ನಡೆದ ಕುಸುಮಸಾರಂಗ-2019 ಮತ್ತು ಐಕ್ಯೂಎಸಿ ಸಹಯೋಗದಲ್ಲಿ 27ನೇ ವರ್ಷದ ರಂಗ ಶಿಕ್ಷಣ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಸಮಾಜದ ಗೌರವಕ್ಕೆ ಪಾತ್ರರಾಗಲು ಪಠ್ಯೇತರ ಚಟುವಟಕೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
ಕಾಲೇಜು ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ ಅವರು ಪ್ರಸ್ತಾವನೆಗೈದು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಸ್ಪೂರ್ತಿಯನ್ನು ತುಂಬಲು ನಾಟಕಕ್ಕೆ ಪ್ರೋತ್ಸಾಹ ನೀಡುತ್ತಿದ್ದೇವೆ ಎಂದರು.
ಕಾಲೇಜು ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮೋಹನದಾಸ್ ರೈ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಯೋಜಕ ಬಾಲಕೃಷ್ಣ ಪೈ, ಕುಸುಮಸಾರಂಗದ ಸ್ಥಾಪಕ ನಿರ್ದೇಶಕ ತುಕರಾಮ್ ಯೇನೆಕಲ್ಲು, ಪೂರ್ವ ವಿದ್ಯಾರ್ಥಿ ರಾಮಚಂದ್ರ ಮುಖ್ಯ ಅತಿಥಿಗಳಾಗಿದ್ದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕ ವಿನ್ಯಾಸ್ ಎಚ್ ವಂದಿಸಿದರು. ಲೋಹಿತ್ ಎಂ.ಡಿ ವಂದಿಸಿದರು. ಬಳಿಕ ಕುಸುಮಸಾರಂಗ ವಿದ್ಯಾರ್ಥಿಗಳು ನಟಿಸಿದ ಪ್ರೋ ಜಯಪ್ರಕಾಶ್ ಮಾವಿನಕುಳಿ ರಚಿಸಿದ ಅಭಿಯಾನ ನಾಟಕ ಪ್ರದರ್ಶನಗೊಂಡಿತು. ಉಪನ್ಯಾಸಕರು, ಪೋಷಕರು, ಪೂರ್ವ ವಿದ್ಯಾರ್ಥಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ ಅವಶೇಷ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ
September 2, 2026
2:30 PM
by: ಸಾಯಿಶೇಖರ್ ಕರಿಕಳ
ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror