ಕೆಟ್ಟುಹೋದ ಪರಿವರ್ತಕ ಬದಲಿಸಲು ಪರಪ್ಪು ಪ್ರದೇಶದ ಬಳಕೆದಾರರಿಂದ ಆಗ್ರಹ

April 23, 2019
10:25 AM

ಕಡಬ: ಕಳೆದ ಕೆಲವು ಸಮಯದಿಂದ ಕಡಬದ ಪರಪ್ಪು ಪ್ರದೇಶದಲ್ಲಿನ ವಿದ್ಯುತ್ ಪರಿವರ್ತಕ ಕೆಟ್ಟು ಹೋಗಿ ನಿರಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಕಡಬ ಮೆಸ್ಕಾಂ ಉಪ ವಿಭಾಗದ ಕಚೇರಿಗೆ ತೆರಳಿದ ಬಳಕೆದಾರರು ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳನ್ನು ಆಗ್ರಹಿಸಿದರು.

Advertisement
Advertisement

ಬಳಕೆದಾರರ ನಿಯೋಗದ ನೇತೃತ್ವ ವಹಿಸಿದ್ದ ಸ್ಥಳೀಯ ಮುಂದಾಳು ವೇಣುಗೋಪಾಲ ರೈ ಕೊಲ್ಲಡ್ಕ ಅವರು ಕಡಬ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಜಿಕುಮಾರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ ವಿದ್ಯುತ್ ಸಮಸ್ಯೆಯಿಂದಾಗಿ ನಮ್ಮ ಪರಿಸರದಲ್ಲಿ ಅಡಿಕೆ ತೋಟಗಳು ಹಾಗೂ ಇತರ ಕೃಷಿಗಳು ನೀರಿಲ್ಲದೇ ಕರಟಿ ಹೋಗುತ್ತಿವೆ. ನೀರಾವರಿ ಪಂಪ್‍ಗಳು ಚಾಲೂ ಆಗುತ್ತಿಲ್ಲ. ಮೊದಲೇ ಧಾರಣೆ ಕುಸಿತ, ಕಾರ್ಮಿಕರ ಸಮಸ್ಯೆಯಿಂದಾಗಿ ಕಂಗೆಟ್ಟಿರುವ ಕೃಷಿಕರು ವಿದ್ಯುತ್ ಸಮಸ್ಯೆಯ ಹೊಡೆತಕ್ಕೆ ಬಸವಳಿದು ಹೋಗಿದ್ದಾರೆ. ಪರಪ್ಪು, ಕೊಲ್ಲಡ್ಕ, ಕೋಡಿ, ಕಜೆಮಾರು, ಪಲ್ಲತ್ತಾರು ಪ್ರದೇಶಕ್ಕೆ ವಿದ್ಯುತ್ ಪೂರೈಸುವ ಪರಿವರ್ತಕ ಕೆಟ್ಟು ಹೋಗಿರುವ ಕುರಿತು ಮೆಸ್ಕಾಂ ಗೆ ದೂರು ನೀಡಿ 15 ದಿನ ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸ್ಥಳೀಯ ಸುಮಾರು 36 ಮನೆಯವರು ಕುಡಿಯಲೂ ನೀರಿಲ್ಲದೆ ಪರದಾಡುತ್ತಿದ್ದಾರೆ ಎಂದು ದೂರಿದರು. ಕೂಡಲೇ ಹೊಸ ಪರಿವರ್ತಕ ಅಳವಡಿಸಲು ಕ್ರಮ ಕೈಗೊಳ್ಳದೇ ಇದ್ದಲ್ಲಿ ಊರಿನ ಎಲ್ಲಾ ವಿದ್ಯುತ್ ಬಳೆಕೆದಾರರನ್ನು ಸೇರಿಸಿಕೊಂಡು ಕಡಬ ಮೆಸ್ಕಾಂ ಕಚೇರಿ ಮುಂದೆ ಧರಣಿ ನಡೆಸುವುದಾಗಿ ಅವರು ಎಚ್ಚರಿಸಿದರು.
ಕೃಷಿಕ ವಾಸುದೇವ ಗೌಡ ಕೋಡಿ ಅವರು ಮಾತನಾಡಿ ನಾವು ಹಲವು ವರ್ಷ ಬೆವರು ಸುರಿಸಿ ಮಾಡಿದ ಕೃಷಿಗೆ ನೀರಿಲ್ಲದೆ ನಮ್ಮ ಕಣ್ಣೆದುರೇ ಕರಟಿ ಹೋಗುತ್ತಿದೆ. ಜನರಿಗೆ ಕುಡಿಯಲೂ ನೀರಿಲ್ಲದಂತಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದರು. ಗ್ರಾ.ಪಂ.ಸದಸ್ಯ ಹರ್ಷ ಕೋಡಿ, ಸ್ಥಳೀಯ ಪ್ರಮುಖರಾದ ಜಯರಾಮ ಗೌಡ ಅರ್ತಿಲ, ಮೋಹನ ಗೌಡ ಗೋಡಾಲ್, ಗಿರಿಧರ ರೈ ಪಜಕಳ, ಪುರಂದರ ರೈ ಪಿಜಕಳ, ಉಮೇಶ್ ನಾಯ್ಕ, ಪ್ರಸಾದ ಗೌಡ ಅಲುಂಗೂರು, ಯತೀಂದ್ರ ಗೌಡ ಗೋಡಾಲ್ ಮುಂತಾದವರು ನಿಯೋಗದಲ್ಲಿದ್ದರು.
ಮನವಿಗೆ ಪ್ರತಿಕ್ರಿಯಿಸಿ ಮಾತನಾಡಿದ ಕಡಬ ಮೆಸ್ಕಾಂ ಎಇಇ ಸಜಿಕುಮಾರ್ ಅವರು ಸದ್ಯಕ್ಕೆ ತಾತ್ಕಾಲಿಕ ನೆಲೆಯಲ್ಲಿ 3 ಫೇಸ್ ವಿದ್ಯುತ್ ನೀಡಲು ವ್ಯವಸ್ಥೆ ಕಲ್ಪಿಸಿ 2 ದಿನಗಳೊಳಗೆ ಹೆಚ್ಚು ಸಾಮರ್ಥ್ಯದ ಪರಿವರ್ತಕ ಅಳವಡಿಸಿ ಸಮಸ್ಯೆ ಬಗೆಹರಿಸಿಕೊಡುವುದಾಗಿ ಭರವಸೆ ನೀಡಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಗ್ರಾಮ ಪಂಚಾಯತಿಗಳ ಮೂಲಕ ಸಹಜ ಬೇಸಾಯ ಅನುಷ್ಠಾನವಾಗಬೇಕು | ಸಹಜ ಕೃಷಿ ವಿಜ್ಞಾನಿ ಡಾ| ಮಂಜುನಾಥ
June 1, 2024
1:10 PM
by: The Rural Mirror ಸುದ್ದಿಜಾಲ
‘ಹಸಿರೋತ್ಸವ’ | ಐಕಾಂತಿಕದಲ್ಲಿ ನಡೆಯುವ ಸಹಜ ಕೃಷಿ ಮತ್ತು ಸಹಜ ಜೀವನ ಉತ್ಸವ | ಹಸಿರಿನೊಂದಿಗೆ ಬೆರೆಯಿರಿ |
June 1, 2024
12:47 PM
by: The Rural Mirror ಸುದ್ದಿಜಾಲ
ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ
May 16, 2024
5:58 PM
by: The Rural Mirror ಸುದ್ದಿಜಾಲ
ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ
May 12, 2024
11:34 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror