ಕೆರೆಯಿಂದ ಕಾಡಿಗೆ ಓಡಿತು ಕಾಡುಕೋಣ….

May 4, 2019
11:41 PM

ಸುಳ್ಯ:ಮಾವಿನಕಟ್ಟೆ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನ ಕೆರೆಗೆ ಬಿದ್ದಿದ್ದ ಕಾಡುಕೋಣದ ಮರಿ ಶನಿವಾರ ಸಂಜೆಯ ಹೊತ್ತಿಗೆ ಕಾಡು ಸೇರಿತು. ಶನಿವಾರ ಬೆಳಗ್ಗಿನಿಂದಲೇ ಸತತ ಪ್ರಯತ್ನದ ಬಳಿಕ ಕಾಡು ಸೇರಲು ಸಾಧ್ಯವಾಯಿತು.

ಸುಳ್ಯ  ತಾಲೂಕಿನ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನ ಉದಯಗಿರಿ  ಇಲ್ಲಿಯ ಕೆರೆಗೆ ಶುಕ್ರವಾರ ರಾತ್ರಿ  ಆಯ ತಪ್ಪಿ ಕಾಡುಕೋಣ ಬಿದ್ದಿತ್ತು. ಶನಿವಾರ ಬೆಳಗ್ಗೆ ಸ್ಥಳೀಯರಿಗೆ ತಿಳಿದು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಬಳಿಕ ಸಂಜೆಯವರೆಗೆ ಕಾರ್ಯಾಚರಣೆ ನಡೆದಿತ್ತು.

 

ಕಾಡುಕೋಣ ಬಿದ್ದ  ವಿಷಯ ತಿಳಿದು ಜನ ಸಾಗರವೇ ಕೆರೆಯ ಕಡೆಗೆ ಬಂದಿತ್ತು. ಬೆಳಗ್ಗಿನಿಂದಲೇ ಕಾಡು ಕೋಣ ರಕ್ಷಣೆ ಕಾರ್ಯ ಪ್ರಾರಂಭವಾಯಿತು. ನೀರಿಗೆ ಬಿದ್ದು ಸುಸ್ತಾಗಿದ್ದ ಕಾಡುಕೋಣವನ್ನು  ಕೋಣವನ್ನು ಹೊರ ಹಾಕುವುದು‌ ತ್ರಾಸದಾಯಕವಾಯಿತು. ಅರಣ್ಯ ಇಲಾಖೆಯ ಅಧಿಕಾರಿಗಳ ಮಾರ್ಗದರ್ಶನ ದಲ್ಲಿ ಯುವಕರ ಶ್ರಮದಿಂದ ಸಂಜೆಯ ವರೆಗೂ ಕಾರ್ಯ ಮುಂದುವರೆಯಿತು. ಕಾಡುಕೋಣವನ್ನು ರಕ್ಷಣೆ ಮಾಡುವುದು ಎಲ್ಲರ ಕಾಳಜಿಯಾಗಿತ್ತು. ಬೆಳಗ್ಗೆ ಅಡಿಕೆ ಮರದ ಪಾಲ ಹಾಕಿದ್ದರೆ ನಂತರ ಹಗ್ಗದ ಸಹಾಯದಿಂದ ಮೇಲೆಳೆದು ಓಡುವಂತೆ ಮಾಡಲಾಯಿತು. ಕೊನೆಗೂ ಸಂಜೆಯ ವೇಳೆಗೆ ಕಾಡುಕೋಣ ಕಾಡು ಸೇರಿತು.

ಈ  ಕಾರ್ಯದಲ್ಲಿ ಸಹಕರಿಸಿದ ಎಲ್ಲರಿಗೂ ಅರಣ್ಯ ಇಲಾಖೆ ವಂದನೆ ಸಲ್ಲಿಸಿದೆ. ವನ್ಯ ಜೀವಿಗಳ ರಕ್ಷಣೆ ನಮ್ಮದು. ಪರಿಸರ ಉಳಿಸಿ ಎಂಬ ಘೋಷ ವಾಕ್ಯ ಮೊಳಗಿತು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ
March 14, 2025
6:57 AM
by: The Rural Mirror ಸುದ್ದಿಜಾಲ
ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ
March 14, 2025
6:54 AM
by: The Rural Mirror ಸುದ್ದಿಜಾಲ
ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |
March 14, 2025
6:51 AM
by: The Rural Mirror ಸುದ್ದಿಜಾಲ
ಬೆಳ್ಳಿ ಧರಿಸುವುದು ಎಲ್ಲಾ ರಾಶಿಯವರಿಗೆ ಉತ್ತಮವೇ…? | ಯಾವೆಲ್ಲಾ ರಾಶಿಗಳಿಗಳಿಗೆ ಹಾನಿ..?
March 14, 2025
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror