ಕೆರೆ ಸಂಜೀವಿನಿ: ನೋಡಲ್ ಅಧಿಕಾರಿಗಳಿಗೆ ಪ್ರೇರಣಾ ತರಬೇತಿ

July 22, 2019
11:49 PM

ಧರ್ಮಸ್ಥಳ : ಜನರಿಗಾಗಿ, ಜನರಿಂದಲೇ ಕೆರೆಗಳ ಹೂಳೆತ್ತುವ ಕೆಲಸವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ ಮಾಡಲಾಗುತ್ತಿದೆ. ಇದರಿಂದಾಗಿ ಬಯಲು ಸೀಮೆಯ ಎಲ್ಲಾ ಕುಟುಂಬಗಳಿಗೆ ಕುಡಿಯಲು ಹಾಗೂ ಕೃಷಿಗೆ ಬೇಕಾದಷ್ಟು ನೀರು ಒದಗಿಸಲಾಗುವುದು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕಡಾ.ಎಲ್.ಎಚ್.ಮಂಜುನಾಥ್ ಹೇಳಿದರು.

ಅವರು ಕೆರೆ ಸಂಜೀವಿನಿ ನೋಡಲ್ ಅಧಿಕಾರಿಗಳಿಗೆ ಏರ್ಪಡಿಸಿದ ಪ್ರೇರಣಾ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ 63 ಕೆರೆಗಳ ಹೂಳೆತ್ತಲು ಅನುದಾನ ಮಂಜೂರಾಗಿದ್ದು ದುಂದು ವೆಚ್ಚ ಮಾಡದೆ ಅನುದಾನವನ್ನು ವಿನಿಯೋಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಪ್ರಾದೇಶಿಕ ನಿರ್ದೇಶಕ ಶ್ರೀಹರಿ ಮಾಹಿತಿ, ಮಾರ್ಗದರ್ಶನ ನೀಡಿದರು.
ಕೆರೆ ವಿಭಾಗದ ನಿರ್ದೇಶಕ ಲಕ್ಷ್ಮಣ್, ಎಂ.ಮತ್ತುಯೋಜನಾಧಿಕಾರಿ ಪ್ರವೀಣ್‍ಕುಮಾರ್, ಎಂಜಿನಿಯರ್ ಸಂಕೇತ್, ತಾಂತ್ರಿಕತಜ್ಞ ಡಿ.ಜಿ. ವೆಂಕಟರಾಮಯ್ಯ, ಬೂದಪ್ಪಗೌಡ ಅಧಿಕಾರಿಗಳಿಗೆ ತರಬೇತಿ ನೀಡಿದರು. ರಾಜ್ಯದ ವಿವಿಧ ಭಾಗಗಳಿಂದ 32 ನೋಡಲ್ ಅಧಿಕಾರಿಗಳು ತರಬೇತಿಯಲ್ಲಿ ಭಾಗವಹಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror