ಕೆ.ವಿ.ಜಿ.ಅಮರಜ್ಯೋತಿಯಲ್ಲಿ ಸಂಭ್ರಮದ ವಾರ್ಷಿಕ ಕ್ರೀಡೋತ್ಸವ

December 7, 2019
7:44 PM

ಸುಳ್ಯ: ಡಿ.7 ರಂದು ಸುಳ್ಯದ ಕೆ.ವಿ.ಜಿ. ಅಮರಜ್ಯೋತಿ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಭ್ರಮದಿಂದ ಜರುಗಿತು.

ಕೆ.ವಿ.ಜಿ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಚಿದಾನಂದ ಬಾಳಿಲ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಾಲೇಜಿನ ಪ್ರಾಚಾರ್ಯರಾದ ಡಾ.ಯಶೋದಾ ರಾಮಚಂದ್ರ ಸಭಾಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳ ಪ್ರಾರ್ಥನೆಯ ಬಳಿಕ ಪ್ರಾಚಾರ್ಯರಾದ ಡಾ.ಯಶೋದಾ ರಾಮಚಂದ್ರ ಎಲ್ಲರನ್ನೂ ಸ್ವಾಗತಿಸಿದರು. ಆಕರ್ಷಕ ಪಥ ಸಂಚಲನದೊಂದಿಗೆ ಕ್ರೀಡಾ ಜ್ಯೋತಿಯನ್ನು ಬೆಳಗಿಸಲಾಯಿತು. ಕಾಲೇಜಿನ ಕ್ರೀಡಾ ಧ್ವಜಾರೋಹಣ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಅತಿಥಿಗಳು ಸದೃಢ ಶರೀರದಲ್ಲಿ ಸದೃಢ ಮನಸ್ಸಿರುತ್ತದೆ. ಮಕ್ಕಳನ್ನು ಅರೋಗ್ಯಕರ ನಾಗರಿಕರನ್ನಾಗಿ ಮಾಡುವಲ್ಲಿ ಆಟೋಟಗಳು ಬಹುಮುಖ್ಯ ಪಾತ್ರ ವಹಿಸುತ್ತವೆ. ಆ ನಿಟ್ಟಿನಲ್ಲಿ ಎಲ್ಲರೂ ಕ್ರೀಡಾ ಮನೋಭಾವದಿಂದ ಆಟೋಟಗಳಲ್ಲಿ ಭಾಗವಹಿಸಿ ಎಂದರು.

ಕೆ.ವಿ.ಜಿ. ಐ.ಪಿ.ಎಸ್ ಪ್ರಾಚಾರ್ಯರಾದ ಸುನಿಲ್ ಕುಮಾರ್.ಕೆ.ಸಿ. ಹಾಗೂ ಉಪಪ್ರಾಚಾರ್ಯರಾದ ದೀಪಕ್.ವೈ.ಆರ್ ಉಪಸ್ಥಿತರಿದ್ದರು. ಉಪನ್ಯಾಸಕಿಯರಾದ ಶೋಭಾ ಮತ್ತು ಮಲ್ಲಿಕಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಬಳಿಕ ವಿದ್ಯಾರ್ಥಿನಿಯರಿಂದ ಆಕರ್ಷಕ ಏರೋಬಿಕ್ಸ್ ನೃತ್ಯ ಮೂಡಿಬಂತು. ಕಾಲೇಜಿನ ನಾಲ್ಕು ತಂಡಗಳಾದ ಅಚೀವರ್ಸ್, ಬಿಲ್ಡರ್ಸ್, ಕ್ರಿಯೇಟರ್ಸ್ ಹಾಗೂ ಡೆವಲಪರ್ಸ್ ಇವುಗಳ ನಡುವೆ ನಡೆದ ಜಿದ್ದಾಜಿದ್ದಿನ ಪೈಪೋಟಿಯಲ್ಲಿ ಬಿಲ್ಡರ್ಸ್ ತಂಡವು ಪ್ರಥಮ ಸ್ಥಾನ ಗಳಿಸಿ ಡೆವಲಪರ್ಸ್ ತಂಡವು ಎರಡನೇ ಸ್ಥಾನ ಗಳಿಸಿತು. ಅಪರಾಹ್ನ ಸಮಾರೋಪದ ಬಳಿಕ ಕ್ರೀಡಾ ಧ್ವಜಾವರೋಹಣದ ನಂತರ ರಾಷ್ಟ್ರ ಗೀತೆಯೊಂದಿಗೆ ಕ್ರೀಡಾಕೂಟ ಸಂಪನ್ನವಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror