ಕೇರಳ ವಿಧಾನಸಭೆಯಲ್ಲಿ ಕನ್ನಡದ ಕಂಪು !

October 29, 2019
3:13 PM

ಕೊಚ್ಚಿ: ಕೇರಳ ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಮಂಜೇಶ್ವರ ಕ್ಷೇತ್ರದ ಯುಡಿಎಫ್ ಶಾಸಕ ಎಂ. ಸಿ ಕಮರುದ್ದೀನ್ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ ಕನ್ನಡಿಗರ ಗಮನ ಸೆಳೆದಿದ್ದಾರೆ.

ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಎಂ.ಸಿ ಕಮರುದ್ದೀನ್ ಚೊಚ್ಚಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಆಯ್ಕೆಯಾದ ಐವರು ನೂತನ ಶಾಸಕರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

 

ವಿ.ಕೆ.ಪ್ರಶಾಂತ್, ಕೆ.ಯು.ಜೆನಿಶ್ ಕುಮಾರ್, ಟಿ.ಜೆ.ವಿನೋದ್, ಶನಿಮೋಲ್ ಉಸ್ಮಾನ್ ಮತ್ತು ಕಮರುದ್ದೀನ್ ಸ್ಪೀಕರ್ ಪಿ.ಶ್ರೀರಾಮಕೃಷ್ಣನ್ ಅವರ ಸಮ್ಮುಖದಲ್ಲಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಮರುದ್ದೀನ್ ಅವರು ಕನ್ನಡದಲ್ಲಿ ಹಾಗೂ ಇತರ ನಾಲ್ವರು ಶಾಸಕರು ಮಲಯಾಳಂ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಗಡಿ ಜಿಲ್ಲೆ ದಕ್ಷಿಣ ಕನ್ನಡ ಮತ್ತು ಇಡೀ ರಾಜ್ಯದ ಕನ್ನಡಿಗರು ಹೆಮ್ಮೆ ಪಡುವಂತೆ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror