ಕೊಕ್ಕೋ ಮಾತ್ರಾ ಖರೀದಿ – ಅಡಿಕೆ ಖರೀದಿ ದಿನಾಂಕ ಮುಂದೆ ತಿಳಿಸಲಾಗುತ್ತದೆ – ಕ್ಯಾಂಪ್ಕೋ ಸ್ಪಷ್ಟನೆ

April 8, 2020
7:11 PM

Advertisement
Advertisement

ಮಂಗಳೂರು: ಕ್ಯಾಂಪ್ಕೋ ವತಿಯಿಂದ ಏ.9 ರಿಂದ ಕೊಕ್ಕೋ ಖರೀದಿ ಆರಂಭವಾಗಲಿದೆ ಆದರೆ ಅಡಿಕೆ ಖರೀದಿ ಬಗ್ಗೆ ಸಿದ್ಧತೆ ನಡೆಯುತ್ತಿದೆ. ಈ ಬಗ್ಗೆ ಬೆಳೆಗಾರರಿಗೆ ಮುಂದೆ ಖರೀದಿ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ  ಸ್ಪಷ್ಟಪಡಿಸಿದ್ದಾರೆ.

ಕ್ಯಾಂಪ್ಕೋ ಮೂಲಕ ಅಡಿಕೆ ಖರೀದಿ ನಡೆಸಲು ಸಿದ್ಧತೆ ನಡೆದಿದೆ. ಆದರೆ ಪೂರಕ ವ್ಯವಸ್ಥೆಗಳೂ ನಡೆಯುತ್ತಿದೆ. ಖರೀದಿ ದಿನ ನಿಗದಿಯಾಗಿಲ್ಲ, ಈ ಬಗ್ಗೆ ಮುಂದೆ ತಿಳಿಸಲಾಗುವುದು, ಬೆಳೆಗಾರರಿಗೆ ಯಾವುದೇ ಗೊಂದಲ ಬೇಡ  ಎಂದು  ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ.ಕೊಕ್ಕೋ ಖರೀದಿ ಈ ಹಿಂದೆ ತಿಳಿಸಿದಂತೆ ನಿಗದಿಪಡಿಸಿದ ದಿನಗಳಲ್ಲಿ  ನಡೆಯುತ್ತದೆ.

ಏ.9 ರಿಂದ ಪ್ರತೀ ಗುರುವಾರ ಸುಳ್ಯ, ವಿಟ್ಲ, ಅಡ್ಯನಡ್ಕ, ಕಡಬ ದ ಕ್ಯಾಂಪ್ಕೋ ಶಾಖೆಗಳಲ್ಲಿ ಕೊಕ್ಕೋ ಖರೀದಿ.

ಏ.10 ರಿಂದ ಪ್ರತೀ ಶುಕ್ರವಾರ ಪುತ್ತೂರು ಶಾಖೆಯಲ್ಲಿ  ಕೊಕ್ಕೋ ಖರೀದಿ ,

ಏ.13 ರಿಂದ ಪ್ರತೀ ಸೋಮವಾರ ಬೆಳ್ತಂಗಡಿ ಶಾಖೆಯಲ್ಲಿ ಕೊಕ್ಕೋ ಖರೀದಿ ಮಾಡಲಾಗುತ್ತದೆ.

ಬೆಳಗ್ಗೆ 9 ರಿಂದ 12 ಗಂಟೆಯವರೆಗೆ ಕೊಕ್ಕೋ ಖರೀದಿ ನಡೆಯುತ್ತದೆ   ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ.   ಕೃಷಿ ವಸ್ತು ಮಾರಾಟಕ್ಕೆ ಬರುವ ಹಿನ್ನೆಲೆಯಲ್ಲಿ  ಕ್ಯಾಂಪ್ಕೋ ಐಡಿ ಕಾರ್ಡ್ ಅಥವಾ ಆರ್ ಟಿ ಸಿ ಜೊತೆ ಬರಬೇಕಾಗಿದೆ. ಮುಂದಿನ ದಿನಗಳಲ್ಲಿ  ಕೊಕ್ಕೋ ಖರೀದಿ ಅವಧಿ ವಿಸ್ತರಣೆ, ಇತರ ಕಡೆಗಳಲ್ಲೂ ಖರೀದಿ ನಡೆಸಬೇಕೇ ಎಂಬುದರ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಾಧನೆಗಿಂತ ದೊಡ್ಡದು ಸಂಯಮ
February 16, 2026
7:56 AM
by: ದ ರೂರಲ್ ಮಿರರ್.ಕಾಂ
ತೆಂಗಿನ ರೈತರಿಗೆ ಆಶಾಕಿರಣ | ರೋಗ ನಿಯಂತ್ರಣ ಮತ್ತು ಹೊಸ ತಳಿ ಯೋಜನೆ
February 16, 2026
7:34 AM
by: ದ ರೂರಲ್ ಮಿರರ್.ಕಾಂ
ಎಳನೀರು ಸಂಕಷ್ಟ | ಉತ್ಪಾದನೆ ಕುಸಿತದಿಂದ ಸರಬರಾಜಿಗೆ ಹೊಡೆತ..!
February 16, 2026
7:11 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?
February 15, 2026
10:56 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror