ಕೊಡಗಿನಲ್ಲಿ ಐದು ದಿನ ಸಾಮಾನ್ಯ ಮಳೆ ಸಾಧ್ಯತೆ : ಶಾಲೆ-ಕಾಲೇಜುಗಳಿಗೆ ಎರಡು ದಿನ ರಜೆ

August 12, 2019
10:09 PM

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ಶಾಂತವಾಗಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನೀರಿನ ಹರಿವು ತಗ್ಗಿದೆ. ಮುಂದಿನ 5 ದಿನಗಳವರೆಗೆ ಜಿಲ್ಲೆಯಾದ್ಯಂತ ಸಾಮಾನ್ಯ ಮಳೆಯಾಗಲಿದೆ ಮತ್ತು ಒಳನಾಡು ಪ್ರದೇಶಗಳ ಅಲ್ಲಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಜಿಲ್ಲೆಯಲ್ಲಿ ಈಗಾಗಲೇ ಉಂಟಾಗಿದ್ದ ಪ್ರವಾಹ ಪರಿಸ್ಥಿತಿಯಿಂದ ಮತ್ತು ಕೆಲವು ಪ್ರದೇಶಗಳಲ್ಲಿ ಆದ ಭೂಕುಸಿತದಿಂದ ರಸ್ತೆ ಸಂಪರ್ಕಗಳು ಕಡಿತಗೊಂಡಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರು ಎಚ್ಚರದಿಂದಿರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಮತ್ತೊಂದೆಡೆ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿರುವುದರಿಂದ ಮತ್ತು ಕೆಲವು ಶಾಲೆಗಳಲ್ಲಿ ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಪರಿಹಾರ ಕೇಂದ್ರಗಳನ್ನು ತೆರೆದಿರುವುದರಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಆ.13 ಮತ್ತು 14ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.

ರಸ್ತೆಗಳು ಬಂದ್ :
ಜಿಲ್ಲೆಯಲ್ಲಿ ಉಂಟಾದ ಪ್ರವಾಹ- ಭೂಕುಸಿತದಿಂದಾಗಿ ಬಂದ್ ಆಗಿದ್ದ ಕೆಲವು ರಸ್ತೆಗಳು ಸೋಮವಾರದಿಂದ ಸಂಚಾರಕ್ಕೆ ಮುಕ್ತವಾಗಿವೆಯಾದರೂ ಮತ್ತೆ ಕೆಲವು ರಸ್ತೆಗಳು ಇನ್ನೂ ಬಂದ್ ಆಗಿವೆ.
ಮಡಿಕೇರಿ-ವೀರಾಜಪೇಟೆ ರಾಜ್ಯ ಹೆದ್ದಾರಿಯ ಬೇತ್ರಿ ಸೇತುವೆಗೆ ಪ್ರವಾಹದ ಸಂದರ್ಭ ಮರ ಬಡಿದ ಪರಿಣಾಮ ಸಣ್ಣ ಪ್ರಮಾಣದ ಬಿರುಕು ಕಾಣಿಸಿಕೊಂಡಿರುವುದಾಗಿ ಹೇಳಲಾಗಿದ್ದು, ಈ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಲಘು ವಾಹನಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಬಸ್ ಸೇರಿದಂತೆ ಇತರ ವಾಹನಗಳು ಮಡಿಕೇರಿ-ಹಾಕತ್ತೂರು-ಮೂರ್ನಾಡು-ಕೊಂಡಂಗೇರಿ-ಹಾಲುಗುಂದ ಮಾರ್ಗವಾಗಿ ವೀರಾಜಪೇಟೆಗೆ ಸಂಚರಿಸಬಹುದಾಗಿದೆ.
ಸಿದ್ದಾಪುರ-ಕರಡಿಗೋಡು ರಸ್ತೆಯೂ ಸಂಚಾರಕ್ಕೆ ಮುಕ್ತವಾಗಿಲ್ಲ. ಸಿದ್ದಾಪುರದಿಂದ ಕರಡಿಗೋಡುವಿಗೆ ತೆರಳುವವರು ಮೈಸೂರು ರಸ್ತೆ, ಆರೆಂಜ್ ಕೌಂಟಿ ಮಾರ್ಗವಾಗಿ ಕರಡಿಗೋಡುವಿಗೆ ತೆರಳಬಹುದಾಗಿದೆ.
ಮೂರ್ನಾಡುವಿನಿಂದ ನಾಪೋಕ್ಲುವಿಗೆ ತೆರಳುವವರು ಹೊದ್ದೂರು, ಬಲಮುರಿ, ಪಾರಾಣೆ ಮೂಲಕ ನಾಪೋಕ್ಲುವಿಗೆ ಸಂಚರಿಸಬಹುದಾಗಿದ್ದು, ಸಿದ್ದಾಪರ-ಕೊಂಡಂಗೇರಿ ಮಾರ್ಗವಾಗಿ ತೆರಳಬೇಕಾದವರು ಒಂಟಿಯಂಗಡಿ, ದೇವಣಗೇರಿ ಹಾಲುಗುಂದ ಮಾರ್ಗವಾಗಿ ಕೊಂಡಂಗೇರಿಗೆ ಸಂಚರಿಸಬಹುದಾಗಿದೆ. ಗಾಳಿಬೀಡು-ಪಾಟಿ-ಕಾಲೂರು ಮಾರ್ಗವೂ ಬಂದ್ ಆಗಿರುವುದರಿಂದ ಕಾಲೂರಿಗೆ ತೆರಳುವವರು ಕೆ.ನಿಡುಗಣೆ, ಹೆಬ್ಬೆಟ್ಟಗೇರಿ-ದೇವಸ್ತೂರು ಮಾರ್ಗವಾಗಿ ಕಾಲೂರಿಗೆ ಸಂಚರಿಸಬಹುದಾಗಿದೆ.
ಮಡಿಕೇರಿ-ವೀರಾಜಪೇಟೆ-ಮಾಕುಟ್ಟಕ್ಕೆ ತೆರಳುವವರು ಮಡಿಕೇರಿ-ಹಾಕತ್ತೂರು- ಮೂರ್ನಾಡು- ಕೊಂಡಂಗೇರಿ-ಹಾಲುಗುಂದ-ವೀರಾಜಪೇಟೆ-ಗೋಣಿಕೊಪ್ಪ, ಪೊನ್ನಂಪೇಟೆ ಕುಟ್ಟ ಮಾರ್ಗವಾಗಿ ಕೇರಳದ ಮೂಲಕ ಮಾಕುಟ್ಟ ತಲುಪಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ
ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ
March 12, 2026
8:31 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ
March 12, 2026
11:48 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror