ಕೊಡಗಿನಲ್ಲಿ ಪರಿಹಾರ ಅದಾಲತ್ : ಮತ್ತೆ ಹರಿದು ಬರುತ್ತಲೇ ಇದೆ ಸಂತ್ರಸ್ತರ ಅರ್ಜಿ

May 28, 2019
7:47 PM

ಮಡಿಕೇರಿ: ಕೊಡಗು ಜಿಲ್ಲಾಡಳಿತ ವತಿಯಿಂದ ನೆರೆ ಸಂತೃಸ್ತರಿಗಾಗಿ ಏರ್ಪಡಿಸಲಾಗಿರುವ ಮೂರು ದಿನಗಳ ಪರಿಹಾರ ಅದಾಲತ್‍ನಲ್ಲಿ ಎರಡನೇ ದಿನವಾದ ಮಂಗಳವಾರ ಕೂಡ  ಸಂತ್ರಸ್ತರು ಪಾಲ್ಗೊಂಡು ತಮ್ಮ ಹೆಸರು ನೋಂದಾಯಿಸಿಕೊಂಡು ಸಮಸ್ಯೆಗಳ ಬಗ್ಗೆ ಮನವಿ ಮಾಡಿದರು.

ಬೆಳೆ ಹಾಗೂ ಮನೆ ಹಾನಿ ಮತ್ತಿತರ ಬಗ್ಗೆ ಪರಿಹಾರಕ್ಕಾಗಿ ಮನವಿ ಮಾಡಿದರು. ಪರಿಹಾರ ಅದಾಲತ್ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು  ಪರಿಶೀಲಿಸಿದರು. ಪ್ರಕೃತಿ ವಿಕೋಪದಿಂದಾಗಿ ವಾಸದ ಮನೆ ಅಥವಾ ಬೆಳೆ ಹಾನಿ ಸಂಬಂಧಿಸಿದಂತೆ ಯಾವುದಾದರೂ ಕುಟುಂಬಕ್ಕೆ ಪರಿಹಾರ ನೀಡಲು ಬಿಟ್ಟು ಹೋಗಿದ್ದಲ್ಲಿ ಪರಿಹಾರ ಒದಗಿಸಲು ಪರಿಹಾರ ಅದಲಾತ್ ಹಮ್ಮಿಕೊಳ್ಳಲಾಗಿದ್ದು, ಮೇ, 29 ಕ್ಕೆ ಕೊನೆಗೊಳ್ಳಲಿದೆ.

ಮೇ 29 ರಂದು ನಗರದ ಜಿಲ್ಲಾಡಳಿತ ಭವನದ 2ನೇ ಮಹಡಿಯ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಪರಿಹಾರ ಅದಾಲತ್‍ಗೆ ಹಾಜರಾಗಿ ಸಮಸ್ಯೆ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ತಹಶೀಲ್ದಾರ್ ನಟೇಶ್, ಗೋವಿಂದರಾಜು ಮತ್ತಿತರರು ಹಾಜರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ
August 8, 2026
6:26 AM
by: ದ ರೂರಲ್ ಮಿರರ್.ಕಾಂ
ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ
August 8, 2026
6:13 AM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror